ನಿರ್ವಹಣೆ ಕೊರತೆ: ಪಾಳುಬಿದ್ದ ಬಸ್‌ ತಂಗುದಾಣ


Team Udayavani, Dec 13, 2022, 12:39 PM IST

ನಿರ್ವಹಣೆ ಕೊರತೆ: ಪಾಳುಬಿದ್ದ ಬಸ್‌ ತಂಗುದಾಣ

ಗುಂಡ್ಲುಪೇಟೆ: ತಾಲೂಕಿನ ಕಾಡಂಚಿನ ಚಿರಕನಹಳ್ಳಿ ಗ್ರಾಮದ ಮುಂಭಾಗ ವಿರುವ ಬಸ್‌ ತಂಗುದಾಣವು ನಿರ್ವಹಣೆಯ ಕೊರತೆಯಿಂದ ಪಾಳು ಬೀಳುವ ಹಂತಕ್ಕೆ ತಲುಪಿದೆ.

ತೆರಕಣಾಂಬಿ ಹೋಬಳಿಯ ವಡ್ಡಗೆರೆ ಗ್ರಾಪಂ ವ್ಯಾಪ್ತಿಗೆ ಬರುವ ಚಿರಕನಹಳ್ಳಿ ಗ್ರಾಮದಲ್ಲಿ ಸುಮಾರು 20 ವರ್ಷಗಳ ಹಿಂದೆ ನಿರ್ಮಾಣ ಮಾಡಲಾದ ಬಸ್‌ ತಂಗುದಾಣದ ಕಟ್ಟಡವು ಶಿಥಿಲಾವಸ್ಥೆ ತಲುಪಿದ್ದು, ಚೆಕ್ಕೆಗಳು ಒಡೆದು ಬೀಳುತ್ತಿದೆ. ಇದರಿಂದ ಕಬ್ಬಿಣ ಸರಳುಗಳು ಕಾಣುವಂತಾ ಗಿದ್ದು, ಸುಣ್ಣ ಬಣ್ಣವೆಲ್ಲ ಮಾಸಿ ಹೋಗಿ ಮಳೆ ಬಂದ ಸಂದರ್ಭದಲ್ಲಿ ತಂಗುದಾಣದ ಒಳಗೆ ನೀರು ಸೋರಿಕೆಯಾಗುತ್ತಿದೆ.

ಕುಡುಕರ ಅಡ್ಡೆ: ಬಸ್‌ ತಂಗುದಾಣ ಶಿಥಿಲವಾಗಿರುವು ದರಿಂದ ಯಾರು ಇತ್ತ ಅಷ್ಟಾಗಿ ಸುಳಿಯುವುದಿಲ್ಲ. ಈ ಕಾರಣದಿಂದ ಬೆಳಗ್ಗೆ ಮತ್ತು ರಾತ್ರಿ ಸಮಯದಲ್ಲಿ ಕುಡುಕರು ಇದನ್ನು ಅಡ್ಡೆಯನ್ನಾಗಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಕುಡಿದು ಬಿಸಾಡಿದ ಮದ್ಯದ ಬಾಟಲಿ ಹಾಗೂ ಪೌಚ್‌ಗಳನ್ನು ತಂಗದಾಣದಲ್ಲಿ ಚೆಲ್ಲಾಪಿಲ್ಲಿಯಾಗಿ ರಾಶಿಗಟ್ಟಲೆ ಬಿದ್ದಿದೆ. ಜೊತೆಗೆ ಅನೈತಿಕ ಚಟುವಟಿಕೆ ತಾಣವಾಗಿಯು ಸಹ ಪರಿವರ್ತನೆಯಾಗಿದೆ.

ಕಟ್ಟಡದ ಸುತ್ತಲು ಅನೈರ್ಮಲ್ಯ: ನಿರ್ಮಾಣವಾಗಿ ಹಲವು ವರ್ಷ ಕಳೆದಿರುವ ಹಿನ್ನೆಲೆ ಹಾಗೂ ನಿರ್ವಹಣೆ ಕೊರತೆಯಿಂದ ಕಟ್ಟಡ ಸುತ್ತಲು ಆಳುದ್ದ ಗಿಡ ಗಂಟಿಗಳು ಬೆಳೆದುನಿಂತು ಅನೈರ್ಮಲ್ಯ ತಾಂಡವವಾಡುತ್ತಿದೆ. ಜೊತೆಗೆ ಬೆಳಗಿನ ಸಮಯದಲ್ಲಿ ಬೆರಳಣಿಕೆ ಮಂದಿ ಪ್ರಯಾಣಿಕರು ನಿಲ್ದಾಣದ ಬಳಿ ಬಸ್‌ ಹತ್ತಲು ಬರುತ್ತಾರೆ. ಅವರು ಸಹ ವಿಷಜಂತುಗಳ ಭೀತಿಯಲ್ಲಿ ನಿಲ್ದಾಣದ ಮುಂದೆ ನಿಲ್ಲಬೇಕಾದ ಪರಿಸ್ಥಿತಿ ಇದೆ.

ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷ್ಯ: ಬಸ್‌ ತಂಗುದಾಣ ಶಿಥಿಲಾವಸ್ಥೆ ತಲುಪಿದ್ದು, ಛಾವಣಿಯ ಚೆಕ್ಕೆಗಳು ಒಡೆದು ಬೀಳುವ ಪರಿಸ್ಥಿಗೆ ತಲುಪಿದ್ದರು ಸಹ ಸ್ಥಳೀಯ ಗ್ರಾಪಂ ಅಧ್ಯಕ್ಷರು, ಸದಸ್ಯರು ಹಾಗೂ ಪಂಚಾಯಿತಿ ಅಧಿಕಾರಿಗಳು ಇತ್ತ ಗಮನ ನೀಡದೆ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ. ಈ ಕಾರಣದಿಂದ ದಿನ ಕಳೆಯುತ್ತಿದ್ದಂತೆ ಮಳೆ, ಗಾಳಿ, ಬಿಸಿಲಿಗೆ ಸಿಲುಕು ಕಟ್ಟಡವು ಬೀಳುವ ಹಂತಕ್ಕೆ ತಲುಪಿದೆ.

ಶಾಸಕರೇ ಇತ್ತ ಗಮನಿಸಿ : ತಂಗುದಾಣ ನಿರ್ಮಾಣವಾಗಿ ಹಲವು ವರ್ಷಗಳೇ ಕಳೆದಿರುವ ಹಿನ್ನೆಲೆ ಕಟ್ಟಡ ಬೀಳುವ ಹಂತಕ್ಕೆ ಬಂದು ತಲುಪಿದೆ. ಆದ್ದರಿಂದ ಕ್ಷೇತ್ರದ ಶಾಸಕ ಸಿ.ಎಸ್‌ .ನಿರಂಜನಕುಮಾರ್‌ ಇತ್ತ ಗಮನ ಹರಿಸಿ ಹಳೇ ತಂಗುದಾಣ ಕೆಡವಿ ಹೊಸ ಬಸ್‌ ಶೆಲ್ಟರ್‌ ನಿರ್ಮಾಣ ಮಾಡುವಂತೆ ಚಿಕರನಹಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಚಿರಕನಹಳ್ಳಿ ಗ್ರಾಮದ ಬಸ್‌ ತಂಗುದಾಣ ಸುಮಾರು 20 ವರ್ಷ ಹಳೆಯದಾಗಿದೆ. ನಿರ್ಮಾಣದ ಹಂತದಲ್ಲಿ ಸುಣ್ಣ-ಬಣ್ಣ ಕಂಡಿದ್ದು, ಬಿಟ್ಟರೆ ನಿರ್ವಹಣೆಯ ಕೊರತೆಯಿಂದ ಸೋರುತ್ತಿದೆ. ಕಟ್ಟಡ ಬಿದ್ದು ಹೋಗಿ ಅಪಾಯ ಸಂಭವಿಸುವ ಮುನ್ನ ಸಂಬಂಧಪಟ್ಟವರು ಇತ್ತ ಗಮನ ಹರಿಸಿ ಸೂಕ್ತ ಬಸ್‌ ತಂದು ನಿರ್ಮಾಣ ಮಾಡಬೇಕು. -ಶ್ರೀನಿವಾಸ್‌, ಚಿರಕನಹಳ್ಳಿ ಗ್ರಾಮಸ್ಥರು

ಚಿರಕನಹಳ್ಳಿ ಬಸ್‌ ತಂಗುದಾಣವನ್ನು ಕೂಡಲೇ ಪರಿಶೀಲನೆ ನಡೆಸಿ, ನಂತರ ನಿಲ್ದಾಣದ ದುರಸ್ತಿಗೆ ಕ್ರಮ ವಹಿಸಲಾಗುವುದು -ಮಹದೇವಸ್ವಾಮಿ, ಪಿಡಿಒ, ವಡ್ಡಗೆರೆ ಗ್ರಾಪಂ

-ಬಸವರಾಜು ಎಸ್‌.ಹಂಗಳ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.