ಯೂರಿಯಾ ಅಭಾವ; ಸಂಕಷ್ಟದಲ್ಲಿ ರೈತರು


Team Udayavani, Sep 5, 2020, 2:02 PM IST

ಯೂರಿಯಾ ಅಭಾವ; ಸಂಕಷ್ಟದಲ್ಲಿ  ರೈತರು

ಸಾಂದರ್ಭಿಕ ಚಿತ್ರ

ಹನೂರು: ತಾಲೂಕಿನಾದ್ಯಂತ ಯೂರಿಯಾ ಅಭಾವ ಸೃಷ್ಟಿಯಾಗಿದ್ದು ರಸಗೊಬ್ಬರಕ್ಕಾಗಿ ಅಕ್ಕಪಕ್ಕದ ಪಟ್ಟಣಗಳಿಗೆ ರೈತರು ಎಡತಾಕುವಂತಾಗಿದೆ.

ಕಳೆದ 3-4 ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡು ಬಿತ್ತನೆ ಕಾರ್ಯ ಮುಗಿಸಿ ತಾವು ಹಾಕಿರುವ ಬೆಳೆಗಳಿಗೆ ಯೂರಿಯಾ ಹಾಕಲು ಸಿದ್ಧರಾಗಿದ್ದಾರೆ. ಸಬ್ಸಿಡಿ ದರದಲ್ಲಿ ಸಹಕಾರ ಸಂಘಗಳ ಮೂಲಕ ಯೂರಿಯಾ ಖರೀದಿಸುತ್ತಿದ್ದ ರೈತರು ಸಹಕಾರ ಸಂಘಗಳಿಗೆ ಎಡತಾಕುವಂತಾಗಿದೆ. ಆದರೆ, ಸಹಕಾರ ಸಂಘಗಳಲ್ಲಿ ರೈತರಿಗೆ ಅವಶ್ಯಕತೆ ಇರುವಷ್ಟು ರಸಗೊಬ್ಬರ ದೊರಕುತ್ತಿಲ್ಲ. ಇದರಿಂದ ಹೆಚ್ಚಿನ ದರ ನೀಡಿ ಖಾಸಗಿ ಅಂಗಡಿಗಳಲ್ಲಿ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆಯೇ?: ಮಳೆ ಆರಂಭವಾಗುವ ಮುನ್ನ ಎಲ್ಲಾ ಖಾಸಗಿ ಅಂಗಡಿಗಳಲ್ಲೂ ಯುರಿಯಾ ಲಭಿಸುತ್ತಿತ್ತು. ಆದರೆ ಇದೀಗ ಮಳೆ ಪ್ರಾರಂಭವಾಗಿ ಯೂರಿಯಾಕ್ಕೆ ಹೆಚ್ಚಿನ ಬೇಡಿಕೆ ಬಂದ ಹಿನ್ನೆಲೆ ಕೆಲ ಖಾಸಗಿ ವ್ಯಾಪಾರಿಗಳು ಯುರಿಯಾವನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿ ದ್ದಾರೆ. ಒಂದು ಚೀಲ ಯೂರಿಯಾದ ಬೆಲೆ 270ರೂ. ಇದ್ದು ಕಾಳಸಂತೆಯಲ್ಲಿ 300ರಿಂದ 320ರೂವರೆಗೆ ಮಾರಾಟವಾಗುತ್ತಿದೆ. ಆದರೆ ಹೆಚ್ಚಿನ ಬೆಲೆ ನೀಡಿದರೂ ಎಲ್ಲಾ ರೈತರಿಗೂ ಲಭಿಸುತ್ತಿಲ್ಲ. ಕೆಲ ಖಾಸಗಿ ವ್ಯಾಪಾರಿಗಳು ತಮಗೆ ಬೇಕಾದಂತಹ ಕೆಲವೇ ಕೆಲವು ರೈತರಿಗೆ ವಿತರಿಸುತ್ತಿದ್ದಾರೆ.

ರಸಗೊಬ್ಬರಕ್ಕಾಗಿ ಸರದಿ ಸಾಲು: ಹನೂರು ತಾಲೂಕಿನಲ್ಲಿ ಯುರಿಯಾ ಲಭಿಸದ ಹಿನ್ನೆಲೆ ಕೆಲ ರೈತರು ಕೊಳ್ಳೇಗಾಲ ತಾಲೂಕು ಕೇಂದ್ರ ಮತ್ತು ಕಾಮಗೆರೆ ತೋಟಗಾರಿಕೆ ಉತ್ಪಾದಕ ರೈತರ ಕಂಪ  ನಿಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಈ ಹಿಂದೆ ಅನಾಪುರ, ಕಣ್ಣೂರು, ಗುಂಡಾಪುರ, ಚೆನ್ನಾಲಿಂಗನಹಳ್ಳಿ ಸೇರಿದಂತೆ ಬಹುತೇಕ ಗ್ರಾಮಗಳ ರೈತರು ಹನೂರು ಪಟ್ಟಣದಲ್ಲಿ ರಸಗೊಬ್ಬರ ಖರೀದಿಸುತ್ತಿದ್ದರು. ಆದರೆ ಇದೀಗ ಹನೂರು ಪಟ್ಟಣದಲ್ಲಿ ಲಭ್ಯವಿಲ್ಲದ ಹಿನ್ನೆಲೆ ಕಾಮಗೆರೆ ಗ್ರಾಮಕ್ಕೆ ತೆರಳುವಂತಾಗಿದೆ.

ಸಂಪರ್ಕಕ್ಕೆಸಿಗದ ಅಧಿಕಾರಿಗಳು :  ತಾಲೂಕಿನಲ್ಲಿ ಉದ್ಬವಿಸಿರುವ ಯೂರಿಯಾ ರಸಗೊಬ್ಬರ ಸಮಸ್ಯೆ ಬಗ್ಗೆ , ತಾಲೂಕಿನಲ್ಲಿ ಬೇಡಿಕೆಯಿರುವ ಯುರಿಯಾ ಪ್ರಮಾಣದ ಬಗ್ಗೆ ಮತ್ತು ರಸಗೊಬ್ಬರ ಪೂರೈಕೆ ಬಗ್ಗೆ ಅಗತ್ಯ ಮಾಹಿತಿ ಪಡೆಯಲು ತಾಲೂಕು ಕೃಷಿ ಅಧಿಕಾರಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ದೂರವಾಣಿ ಮುಖಾಂತರ ಸಂಪರ್ಕಿಸಲು ಪಯತ್ನಿಸಿತು. ಸುಮಾರು 4 ಗಂಟೆವರೆಗೂ ದೂರವಾಣಿ ಕರೆ ಸ್ವೀಕರಿಸದ ಅಧಿಕಾರಿಗಳು ಬಳಿಕ ಮೀಟಿಂಗ್‌ನಲ್ಲಿದ್ದೇನೆ. ಆ ಮೇಲೆ ಕರೆ ಮಾಡುತ್ತೇನೆ ಎಂದು ಸಂದೇಶ ಕಳುಹಿಸಿ ಸುಮ್ಮನಾದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.