ಜಮೀನು ವಿವಾದ : ಜಿ.ಪಂ.ಮಾಜಿ ಉಪಾಧ್ಯಕ್ಷೆಯ ತಂದೆ ಕೊಲೆ; ಪುತ್ರನಿಗೆ ತೀವ್ರ ಗಾಯ
ಮೂವರು ಪೋಲಿಸರಿಗೆ ಶರಣು
Team Udayavani, Jul 6, 2021, 8:33 PM IST
ಚಾಮರಾಜನಗರ: ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಜಮೀನು ವಿವಾದದಿಂದ ನಡೆದ ಜಗಳದಲ್ಲಿ ಜಿ.ಪಂ. ಮಾಜಿ ಉಪಾಧ್ಯಕ್ಷೆ ಶಶಿಕಲಾ ಸೋಮಲಿಂಗಪ್ಪ ಅವರ ತಂದೆ ಗುರುಸ್ವಾಮಪ್ಪ (62) ಕೊಲೆಯಾಗಿದ್ದು, ಅವರ ಪುತ್ರ ಮಂಜುನಾಥ್ (33) ತೀವ್ರವಾಗಿ ಗಾಯಗೊಂಡಿದ್ದಾರೆ.
ಆರೋಪಿಗಳಾದ ಆದೇ ಗ್ರಾಮದ ಮಲೇ ಮಾದಪ್ಪ, ಮಂಗಳಮ್ಮ, ಮಲ್ಲಿಕಾರ್ಜುನ್ ಗ್ರಾಮಾಂತರ ಠಾಣೆಗೆ ಬಂದು ಶರಣರಾಗಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ವಿವರ : ಕೊತ್ತಲವಾಡಿ ಗ್ರಾಮದಲ್ಲಿ ಅಕ್ಕಪಕ್ಕದಲ್ಲಿ ಜಮೀನು ಹೊಂದಿದ್ದ ಗುರುಸ್ವಾಮಪ್ಪ ಮತ್ತು ಮಲೇ ಮಾದಪ್ಪ ಅವರ ಕುಟುಂಬದ ನಡುವೆ ಜಮೀನಿನ ವಿವಾದ ಬಹಳ ವರ್ಷಗಳಿಂದ ಇತ್ತು. ನ್ಯಾಯಾಲದಯದಲ್ಲಿಯು ಸಹ ಜಮೀನಿನ ವ್ಯಾಜ್ಯ ನಡೆಯುತ್ತಿತ್ತು. ಮಂಗಳವಾರ ಮಧ್ಯಾಹ್ನ 2.30ರ ಸಮಯದಲ್ಲಿ, ಮಲೇ ಮಾದಪ್ಪ ಮತ್ತು ಆತನ ಪತ್ನಿ ಮಂಗಳಮ್ಮ, ಇವರ ಪುತ್ರ ಮಲ್ಲಿಕಾರ್ಜುನ ಜಮೀನಿನ ಪಕ್ಕದ ಬೇಲಿಯನ್ನು ಕಡಿಯುತ್ತಿದ್ದಾಗ, ಪಕ್ಕದ ಜಮೀನಿನ ಗುರುಸ್ವಾಮಪ್ಪ ಮತ್ತು ಮಂಜುನಾಥ್ ತಗಾದೆ ತೆಗೆದಿದ್ದಾರೆ.
ಮಾತಿಗೆ ಮಾತು ಬೆಳೆದು ಮಲೇ ಮಾದಪ್ಪ, ಅವರ ಪುತ್ರ ಮಲ್ಲಿಕಾರ್ಜುನ್ ಮಚ್ಚಿನಿಂದ ಗುರುಸ್ವಾಮಪ್ಪ ಮತ್ತು ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಗುರುಸ್ವಾಮಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪುತ್ರ ಮಂಜುನಾಥ್ ತೀವ್ರ ಗಾಯಗೊಂಡರು. ನಂತರ ಅಕ್ಕಪಕ್ಕದ ಜಮೀನಿನವರು, ಗ್ರಾಮಸ್ಥರು ಮಂಜುನಾಥ್ ಅವರನ್ನು ಚಾ.ನಗರ ಜಿಲ್ಲಾ ಅಸ್ಪತ್ರೆಗೆ ಕರೆತಂದಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕಳುಹಿಸಲಾಗಿದೆ. ವಿಷಯ ತಿಳಿದು ಗ್ರಾಮಕ್ಕೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಿದ್ದು, ಗುರುಸ್ವಾಮಪ್ಪ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಚಾ.ನಗರಕ್ಕೆ ತರಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ