ಮಹದೇಶ್ವರ ದೇಗುಲದ ಹೆಬ್ಬಾಗಿಲಿಗೆ ಭೂಮಿಪೂಜೆ


Team Udayavani, Feb 23, 2021, 1:47 PM IST

ಮಹದೇಶ್ವರ ದೇಗುಲದ ಹೆಬ್ಬಾಗಿಲಿಗೆ ಭೂಮಿಪೂಜೆ

ಯಳಂದೂರು: ತಾಲೂಕಿನ ಐತಿಹಾಸಿಕ ಪ್ರಸಿದ್ಧ ಕಂದಹಳ್ಳಿ ಮಹದೇಶ್ವರ ದೇಗುಲದ ಹೆಬ್ಟಾಗಿಲಿಗೆ ಸೋಮವಾರ ಭೂಮಿಪೂಜೆ ನೆರವೇರಿಸಲಾಯಿತು.

ಕಂದಹಳ್ಳಿ ಮಹದೇಶ್ವರಸ್ವಾಮಿ ಸೇವಾಟ್ರಸ್ಟ್‌ ವತಿಯಿಂದ 20 ಲಕ್ಷ ರೂ. ವೆಚ್ಚದಲ್ಲಿ ಹೆಬ್ಟಾಗಿಲು ನಿರ್ಮಿಸಲಾಗುತ್ತಿದೆ. ಈ ದೇಗುಲವು ಕಳೆದ 20 ವರ್ಷಗಳಿಂದಲೂ ಪ್ರತಿ ಭೀಮನ ಅಮಾವಾಸ್ಯೆ ನಿಮಿತ್ತ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಅಂದು ಲಕ್ಷಾಂತರ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಗುತ್ತದೆ. ಇದರೊಂದಿಗೆ ಪ್ರತಿ ಅಮಾವಾಸ್ಯೆಯಂದು ಬರುವ ಭಕ್ತರಿಗೆ ಉಪಾಹಾರ ವ್ಯವಸ್ಥೆ ಮಾಡಲಾಗುತ್ತಿದೆ.

ಈ ದೇಗುಲಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡುಬರುತ್ತಿದೆ. ಇಲ್ಲಿನ ಭಕ್ತರಿಗೆ ಇನ್ನಷ್ಟು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದ್ದು. ದೇಗುಲದ ಹೆಬ್ಟಾಗಿಲು ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ ಎಂದು ದೇಗುಲದ ಟ್ರಸ್ಟ್‌ನ ಸದಸ್ಯರು ಮಾಹಿತಿ ನೀಡಿದರು.

ಕಾರಾಪುರ ವಿರಕ್ತ ಮಠದ ಬಸವರಾಜ ಸ್ವಾಮೀಜಿ ಮಾತನಾಡಿ, ಮಲೆ ಮಹದೇಶ್ವರರು ಉತ್ತರದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗುವ ವೇಳೆಯಲ್ಲಿ ಸುವರ್ಣಾವತಿ ನದಿ ತಟದಲ್ಲಿರುವ ಈ ಪವಿತ್ರ ಸ್ಥಳದಲ್ಲಿ ಧ್ಯಾನ ಮಾಡಿದ್ದರು. ರಾಜ್ಯಾದ್ಯಂತ ಇದಕ್ಕೆ ಸಾವಿರಾರು ಭಕ್ತರು ಇದ್ದಾರೆ. ಇಂತಹ ಐತಿಹಾಸಿಕ ಮಹತ್ವವುಳ್ಳ ಈ ದೇಗುಲಕ್ಕೆ ನಿರ್ಮಾಣ ಮಾಡುತ್ತಿರುವ ಹೆಬ್ಟಾಗಿಲು ಮತ್ತೂಂದು ಆಕರ್ಷಣೆಯಾಗಲಿ ಎಂದರು.

ಈ ವೇಳೆ ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ರಾಮಚಂದ್ರು, ಟ್ರಸ್ಟ್‌ನ ಗೌರವಾಧ್ಯಕ್ಷ ಪಟೇಲ್‌ವುಹೇಶ್‌, ಅಧ್ಯಕ್ಷ ಕಂದಹಳ್ಳಿ ಬಿ. ಮಹೇಶ್‌ ಕುಮಾರ್‌,ಕಾರ್ಯದರ್ಶಿ ಸಿದ್ದರಾಜು, ಕೋಶಾಧ್ಯಕ್ಷ ಬಸವಣ್ಣ, ಹಾಪ್‌ಕಾಮ್ಸ್‌ ಉಪಾಧ್ಯಕ್ಷ ಬಸವಶೆಟ್ಟಿ, ಗ್ರಾಪಂ ಸದಸ್ಯರಾದ ಜವರಶೆಟ್ಟಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ವೈ.ಕೆ.ಮೋಳೆ ನಾಗರಾಜು, ಪಪಂ ಸದಸ್ಯ ಮಹೇಶ್‌, ನಿಂಗರಾಜು ಟಿಎಪಿಸಿಎಂಎಸ್‌ ನಿರ್ದೇಶಕರಾದ ವೈ. ಎಸ್‌. ನಂಜಶೆಟ್ಟಿ, ಪ್ರತಾಪ್‌ ಗ್ರಾಪಂ ಸದಸ್ಯ ಚಂದ್ರಶೇಖರ್‌, ಮುಖಂಡರಾದ ಅಂಬಳೆಸೋಮಪ್ಪ, ಮೆಳ್ಳಹಳ್ಳಿ ಶಿವಣ್ಣ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.