ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ
Team Udayavani, Aug 28, 2020, 4:06 PM IST
ಕೊಳ್ಳೇಗಾಲ: ಪಿ.ಎಂ.ಜಿ.ಎಸ್.ವೈ ಯೋಜನೆಯಡಿ ಚಾನಲ್ ರಸ್ತೆ ಡಾಂಬರೀಕರಣಕ್ಕೆ ಮಂಜೂರಾಗಿದ್ದ ಸುಮಾರು 4.89 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಕ್ಕೆ ಹನೂರು ಶಾಸಕ ಆರ್.ನರೇಂದ್ರ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಭೂಮಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗ್ರಾಮದ ಉಪ್ಪಾರ ಬಡಾವಣೆಯಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿ ನಿರ್ಮಾಣಕ್ಕೆ 80 ಲಕ್ಷ ಅನುದಾನಮಂಜೂರಾಗಿದೆ. ಅದಕ್ಕೂ ಚಾಲನೆ ನೀಡಿದ್ದೇವೆ ಎಂದು ಹೇಳಿದರು.
ಸರ್ಕಾರ ರಸ್ತೆ ಅಭಿವೃದ್ಧಿಗೆ 4.99 ಕೋಟಿ ರೂ. ಮಂಜೂರು ಮಾಡಿದ್ದು, ಸುಮಾರು 9.20 ಕಿ.ಮೀ. ಉದ್ದದ ರಸ್ತೆಯನ್ನು ನಿರ್ಮಾಣ ಮಾಡಲಾಗುವುದು. ರಸ್ತೆಯು ದೊಡ್ಡಿಂದುವಾಡಿ ಗ್ರಾಮದಿಂದ ಮರಿಯ ಪುರದ ವೆರೆಗೆ ಅಭಿವೃದ್ಧಿಯಾಗಲಿದೆ ಎಂದರು. ರೈತರ ಅನುಕೂಲಕ್ಕಾಗಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದು, ಗುಣಮಟ್ಟದ ರಸ್ತೆಯನ್ನು ನಿರ್ಮಾಣ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿರುವುದಾಗಿ ಹೇಳಿದರು. ಜಿಪಂ ಸದಸ್ಯೆ ಶಿವಮ್ಮ, ಪಿ.ಎಂ.ಜಿ.ಎಸ್.ವೈ ಎಇಇ ಕುಮಾರ್, ಜೆಇ ಮೋಹನ್ ಕುಮಾರ್, ಗುತ್ತಿಗೆದಾರ ಅಪ್ಪದೊರೈ, ಫಯಾಜ್ ಹಾಜರಿದ್ದರು