ಎಲ್ಲಾ ಜಾನಪದ ಕಲಾವಿದರಿಗೂ ಅವಕಾಶ ಕಲ್ಪಿಸಿ


Team Udayavani, Feb 5, 2019, 7:10 AM IST

yella.jpg

ಕೊಳ್ಳೇಗಾಲ: ಅನಕ್ಷರಸ್ಥರಿಂದ ಸೃಷ್ಟಿಯಾಗಿರುವ ಜಾನಪದ ಕಲೆಯನ್ನು ಇಂದಿನ ಯುವಪೀಳಿಗೆ ಉಳಿಸಿ ಬೆಳೆಸಬೇಕೆಂದು ಶಾಸಕ ಎನ್‌.ಮಹೇಶ್‌ ಸಲಹೆ ನೀಡಿದರು.

ನಗರದ ಎಂಜಿಎಸ್‌ವಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಏರ್ಪಡಿಸಿದ್ದ ಯುವ ಸೌರಭ ಕಾರ್ಯ ಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಭೆ ಹೊರ ಬರಬೇಕಾದರೆ ಅವಕಾಶ ಸಿಗಬೇಕು. ಆಗ ಪ್ರತಿಭೆ ಹೊರಹೊಮ್ಮುತ್ತದೆ. ಎಲ್ಲಾ ಜಾನಪದ ಕಲಾವಿದರಿಗೆ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅವಕಾಶ ಕಲ್ಪಿಸಬೇಕು ಎಂದು ಕೋರಿದರು.

ದೇಸಿ ಸಂಸ್ಕೃತಿ: ಭಾರತದ ಸಂಸ್ಕೃತಿಗೆ ಇತರ ರಾಷ್ಟ್ರಗಳಲ್ಲಿ ಅಪಾರ ಗೌರವವಿದೆ. ಇದನ್ನು ಅಳವಡಿಸಿಕೊಳ್ಳಲು ಪ್ರಯತ್ನ ವನ್ನು ಇತರ ರಾಷ್ಟ್ರಗಳು ಮಾಡುತ್ತಿವೆ. ಆದರೆ ನಮ್ಮ ವರು ಪಾಶ್ಚಮಾತ್ಯ ಸಂಸ್ಕೃತಿಗೆ ಮಾರು ಹೋಗಿದ್ದಾರೆ. ಇದರಿಂದ ದೇಸಿ ಸಂಸ್ಕೃತಿ ನಶಿಸುತ್ತಿದೆ ಎಂದರು.

ಜಾನಪದ ಕಲೆ ಸಂಸ್ಕೃತಿಯನ್ನು ಬಿಂಬಿಸಲಿದ್ದು, ಇಂತಹ ಯುವ ಸೌರಭ ಕಾರ್ಯಕ್ರಮದಲ್ಲಿ ಸಾರ್ವ ಜನಿಕರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಪ್ರೋತ್ಸಾಹಿಸಿದಾಗ ಮತ್ತಷ್ಟ ಬೆಲೆ ಸಿಗಲಿದೆ. ರಸಮಂಜರಿ ಸೇರಿದಂತೆ ಚಲನಚಿತ್ರಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಅಪಾರ ಸಂಖ್ಯೆ ಯಲ್ಲಿ ಜನರು ಸೇರುತ್ತಾರೆ.

ಆದರೆ, ಜಾನಪದ ಪ್ರತಿಬಿಂಬಿಸುವ ಯುವ ಸೌರಭದಂತಹ ಕಾರ್ಯಕ್ರಮ ಗಳಿಗೆ ಬೆರಳಣಿಕೆಯ ಸಂಖ್ಯೆಯಲ್ಲಿ ಭಾಗವಹಿಸು ತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಶಿವಮ್ಮ ಮಾತನಾಡಿ, ಗ್ರಾಮೀಣ ಸೊಗಡು ಹೊಂದಿರುವ ಜಾನಪದ ಕಲೆಯನ್ನು ಯುವಕರು ಪ್ರೋತ್ಸಾಹಿಸಬೇಕು. ಆಗ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದರು.

ಯುವ ಸೌರಭ: ಕಾರ್ಯಕ್ರಮದಲ್ಲಿ ಸ್ಯಾಕ್ಸೋ ಫೋನ್‌ ವಾದನವನ್ನು ಚಾಮರಾಜನಗರದ ಮಹದೇವಸ್ವಾಮಿ ಮತ್ತು ತಂಡದವರು, ಶಾಸ್ತ್ರೀಯ ಸಂಗೀತ ಚಾಮರಾಜನಗರ ಮಾದವಿ, ಸುಗಮ ಸಂಗೀತ ಯಳಂದೂರಿನ ಎಸ್‌.ಜೈಗುರು ಮತ್ತು ತಂಡದವರು, ಜನಪದಗೀತೆಗಳು ಚಾಮರಾಜ ನಗರದ ಜೆ.ಬಿ.ಮಹೇಶ ಮತ್ತು ತಂಡದವರು,

ಶಿವಂ ಮೃದಂಗ ನೃತ್ಯ ರೂಪಕ ಚಾಮರಾಜನಗರ ಅಕ್ಷತಾ ಎಸ್‌.ಜೈನ್‌ ಮತ್ತು ತಂಡದವರು, ಚಾಮ ರಾಜನಗರ ಗೊರವನ ಕುಣಿತ ಶಂಕರ ಮತ್ತು ತಂಡದವರು, ಶ್ರೀ ಮಂಟೇಸ್ವಾಮಿ ಮಹಾಕಾವ್ಯ ಕೊಳ್ಳೇಗಾಲ ಕೈಲಾಸ್‌ಮೂರ್ತಿ ಮತ್ತು ತಂಡದ ವರು ಹಾಗೂ ಗಿಳಿಯ ಪಂಜರದೊಳಿಲ್ಲ ನಾಟಕವನ್ನು ಚಾಮರಾಜನಗರ ಶಾಂತಲಾ ಕಲಾವಿದರು ನಡೆಸಿಕೊಟ್ಟರು.

ಜಿಪಂ ಸದಸ್ಯರಾದ ಜಯಂತಿ, ನಾಗರಾಜು, ನಗರಸಭಾ ಸದಸ್ಯೆ ಶಿರಿಸ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಚೆನ್ನಪ್ಪ, ಟಿಎಪಿಎಂಎಸ್‌ ನಿರ್ದೇಶಕ ಚೆಲುವರಾಜು, ಮುಳ್ಳೂರು ಗ್ರಾಪಂ ಸದಸ್ಯ ಸೋಮಣ್ಣ ಉಪ್ಪಾರ್‌ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.