ಬಹು ಸಂಸ್ಕೃತಿಯ ಬೇರುಗಳು ಗಟ್ಟಿಗೊಳ್ಳಲಿ


Team Udayavani, Dec 31, 2019, 3:00 AM IST

bahu-sanskru

ಯಳಂದೂರು: ಯಳಂದೂರು ತಾಲೂಕು ಶೈವ, ವೈಷ್ಣವ ಹಾಗೂ ಗಿರಿಜನರಾದ ಸೋಲಿಗ ಸಂಸ್ಕೃತಿಯ ಪ್ರತೀಕವಾಗಿದೆ. ಬಿಳಿಗಿರಿರಂಗನಬೆಟ್ಟವೇ ಇದಕ್ಕೆ ಸಾಕ್ಷಿಭೂತಿಯಾಗಿ ನಿಂತಿದ್ದು, ಇಂತಹ ಸಂಸ್ಕೃತಿ ಈ ದೇಶದ ಮೂಲವಾಗಿದೆ. ಇದರ ಬೇರುಗಳನ್ನು ಗಟ್ಟಿಗೊಳಿಸುವ ಕೆಲಸವನ್ನು ಮಾಡಬೇಕಿದೆ ಎಂದು ಸಾಹಿತಿ ಮದ್ದೂರು ದೊರೆಸ್ವಾಮಿ ಹೇಳಿದರು.

ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ರಂಗದೇಗುಲ ಕಲಾ ವೇದಿಕೆ 2018-19ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆದ ಜನಪದ ಝೇಂಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ನಾಡು ಕಾಡನ್ನು ಬೆಸೆಯುವ ಸಂಸ್ಕೃತಿ ಬೆಟ್ಟದ ಸಂಸ್ಕೃತಿಯಲ್ಲಿ ಅಡಕವಾಗಿದೆ. ವೈಷ್ಣವನಾದ ಬಿಳಿಗಿರಿರಂಗನಾಥ ಸ್ವಾಮಿ ಸೋಲಿಗರ ಕುಸುಮಾಲೆಯನ್ನು ಮೋಹಿಸಿ, ಅವರ ಪೋಷಕರನ್ನು ಒಲಿಸಿ ವಧು ದಕ್ಷಿಣೆ ನೀಡಿ, ವಿವಾಹವಾಗುವ ಜಾನಪದ ಕತೆ ಈ ನೆಲದ ಭಾವೈಕ್ಯತೆಯ ಶ್ರೀಮಂತಿಕೆಯನ್ನು ತೋರಿಸುವುದಾಗಿದೆ ಎಂದರು.

ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮ ಅಗತ್ಯ: ಗ್ರಾಪಂ ಅಧ್ಯಕ್ಷೆ ಗೌರಮ್ಮ ಮಾತನಾಡಿ, ಜಾನಪದ ಸಂಸ್ಕೃತಿಯನ್ನು ಬಿಂಬಿಸುವ ಇಂತಹ ಕಾರ್ಯಕ್ರಮಗಳ ಅಗತ್ಯವಿದೆ. ಮುಂದಿನ ಪೀಳಿಗೆಗಳಿಗೆ ಇದನ್ನು ಜೋಪಾನ ಮಾಡುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳ ಆಯೋಜನೆ ಅಭಿನಂದನಾರ್ಹ ಎಂದರು.

ಗ್ರಾಮೀಣ ಸೊಗಡನ್ನು ಪಸರಿಸುವ ಕೆಲಸ: ತಾಪಂ ಅಧ್ಯಕ್ಷ ನಿರಂಜನ್‌ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಂಗದೇಗುಲ ಕಲಾ ವೇದಿಕೆಯ ಇಂತಹ ಆಯೋಜನೆ ಗ್ರಾಮೀಣ ಭಾಗದ ಸೊಗಡನ್ನು ಪಸರಿಸುವ ಕೆಲಸ ಮಾಡುತ್ತಿದೆ. ಅಲ್ಲದೆ, ಸ್ಥಳೀಯ ಕಲಾವಿದರಿಗೂ ಇದು ಮಾರ್ಗದರ್ಶಕವಾಗಿ ಕೆಲಸ ಮಾಡಲಿ ಎಂದು ಆಶಿಸಿದರು.

ಗಮನ ಸೆಳೆದ ಮೆರವಣಿಗೆ: ಗ್ರಾಮದ ಅರುಣ ಮಾರಮ್ಮ ದೇಗುಲದ ಮುಂಭಾಗದಿಂದ ಮಂಗಳವಾದ್ಯ, ಡೊಳ್ಳು ಕುಣಿತ, ಗೊರವರ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳ ಭವ್ಯ ಮೆರವಣಿಗೆಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಾಡಲಾಯಿತು. ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆಗೂ ಪಾತ್ರವಾಯಿತು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಹನಾ, ಮಹೇಶ, ಮಹಾದೇವ ಸ್ವಾಮಿ, ಶಿವಕುಮಾರ ಸ್ವಾಮಿ, ದೊಡ್ಡಗವಿ ಬಸಪ್ಪ ಅವರನ್ನು ಸನ್ಮಾನಿಸಲಾಯಿತು.

ಸಂಜೆ ನಡೆದ ಸಾಂಸ್ಕೃತಿ ಕಾರ್ಯಕ್ರಮಗಳು ಗಮನ ಸೆಳೆದವು. ಈ ವೇಳೆ ತಾಪಂ ಸದಸ್ಯೆ ಭಾಗ್ಯ ನಂಜಯ್ಯ, ಸಬ್‌ ರಿಜಿಸ್ಟ್ರರ್‌ ಮಹಾದೇವಯ್ಯ, ಮುಖಂಡರಾದ ಮಹದೇವ ನಾಯಕ, ಕೃಷ್ಣಯ್ಯ, ನಂಜಯ್ಯ, ಮಹೇಶ್‌ ರಂಗದೇಗುಲದ ಅಧ್ಯಕ್ಷ ಶಾಂತರಾಜು, ಕಲಾವಿದರಾದ ಶಿವಕುಮಾರ್‌, ಭಾಗ್ಯ, ಮಹಾದೇವ ಪ್ರಭು, ಗೀತಾ, ರಾಧಾ, ಪ್ರಕಾಶ್‌, ಸಿದ್ದರಜು, ನಾಗರಾಜು, ರವಿ, ರೂಪೇಶ, ಸುಶೀಲಾ, ಗೋವಿಂದರಾಜು, ಜಗದೀಶ್‌, ಕಲೆ ನಟರಾಜು ಹಾಜರಿದ್ದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.