ಲಸಿಕೆ ಹಾಕಿಸದಿದ್ದರೆ ಜೀವನಪೂರ್ತಿ ಅಂಗವೈಕಲ್ಯ


Team Udayavani, Mar 11, 2019, 7:41 AM IST

lasike.jpg

ಚಾಮರಾಜನಗರ: ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಹನಿ ಹಾಕಿಸಿದ್ದರೂ ಸಹ 5 ವರ್ಷದವರೆಗಿನ ಎಲ್ಲಾ ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕಿಸುವಂತೆ ಪೋಷಕರು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಮನವಿ ಮಾಡಿದರು.

ನಗರದ ಗುಂಡ್ಲುಪೇಟೆ ರಸ್ತೆಯಲ್ಲಿರುವ ನಗರ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕಿ ಅವರು  ಮಾತನಾಡಿದರು.

ಮಾರಕ ರೋಗ: ಪೋಲಿಯೋ ಒಂದು ಮಾರಕ ರೋಗವಾಗಿದ್ದು, ಆಗತಾನೆ ಹುಟ್ಟಿದ ಮಗುವಿನಿಂದ 5 ವರ್ಷದ ವರೆಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಲೇಬೇಕು. ಒಂದು ವೇಳೆ ಪೋಲಿಯೋ ಲಸಿಕೆ ಹಾಕಿಸದಿದ್ದರೆ ಜೀವನ ಪರ್ಯಂತ ಅಂಗವಿಕಲತೆ ಕಾಡಬಹುದು. ಈ ನಿಟ್ಟಿನಲ್ಲಿ ಮಕ್ಕಳ ತಂದೆ, ತಾಯಿ ಹಾಗೂ ಪೋಷಕರು ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದರು.

ಮನೆ ಮನೆ ಭೇಟಿ: ನಗರದ ವಿವಿಧ ಬಡಾವಣೆಗಳಲ್ಲಿ ಪೋಲಿಯೋ ಹನಿ ಹಾಕಲು ಬೂತ್‌ ಗಳನ್ನು ತೆರೆಯಲಾಗಿದೆ. ಬೂತ್‌ಗಳಲ್ಲಿ ಆರೋಗ್ಯ, ಅಶಾ, ಅಂಗನವಾಡಿ ಕಾರ್ಯಕರ್ತೆಯರನ್ನು ಪೋಲಿಯೋ ಹನಿ ಹಾಕುವ ಕಾರ್ಯಕ್ಕೆ ನಿಯೋಜಿಸಲಾಗಿದೆ. ಗ್ರಾಮೀಣ ಹಾಗೂ ನಗರಪ್ರದೇಶಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುತ್ತದೆ.

ಭಾನುವಾರ ಪೋಲಿಯೋ ಲಸಿಕೆ ಹಾಕಿಸಲು ಸಾಧ್ಯವಾಗದಿದ್ದವರು ಮಾರನೆಯ ದಿನ ಮನೆಮನೆಗೆ ಬರುವ  ಆರೋಗ್ಯ ಇಲಾಖೆ ಕಾರ್ಯಕರ್ತರಿಗೆ ಪೋಲಿಯೋ ಲಸಿಕೆ ಹಾಕಿಸಬಹುದು ಎಂದರು. ಈ ಬಾರಿ ಜಿಲ್ಲೆಯಲ್ಲಿ ಒಟ್ಟು 72 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಎಲ್ಲರೂ ಕೈಜೋಡಿಸಿ: ಪೋಲಿಯೋ ಮುಕ್ತ ಸಮಾಜಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸತತವಾಗಿ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಪೋಲಿಯೋ ಲಸಿಕೆಯಿಂದ ಯಾವ ಮಕ್ಕಳು ಸಹ ವಂಚಿತರಾಗದಂತೆ ತಡೆಯಲು ನಿಮ್ಮ ಸ್ನೇಹಿತರಿಗೆ, ನೆರೆಹೊರೆಯವರಿಗೂ ಸಹ ಮಾಹಿತಿ ನೀಡಿ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರು ಕೈಜೋಡಿಸೋಣ ಎಂದು ಜಿಲ್ಲಾಧಿಕಾರಿ ಕಾವೇರಿ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್‌. ಪ್ರಸಾದ್‌, ಆರ್‌.ಸಿ.ಎಚ್‌ ಅಧಿಕಾರಿ ಡಾ. ವಿಶ್ವೇಶ್ವರಯ್ಯ ಹಾಗೂ ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.  

ಮೊದಲ ದಿನ ಶೇ.94 ಸಾಧನೆ: ಚಾಮರಾಜನಗರ ಜಿಲ್ಲೆಯಲ್ಲಿ ಇಂದು ನಡೆದ ಮೊದಲ ಸುತ್ತಿನ ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಶೇ.94ರಷ್ಟು ಮಕ್ಕಳಿಗೆ ಪೋಲಿಯೋ ಹನಿ ನೀಡಲಾಗಿದೆ. ಚಾಮರಾಜನಗರ ತಾಲೂಕಿನಲ್ಲಿ 22,865 (ಶೇ.96), ಗುಂಡ್ಲುಪೇಟೆ ತಾಲೂಕಿನಲ್ಲಿ 13971, (ಶೇ 95), ಕೊಳ್ಳೇಗಾಲ ತಾಲೂಕಿನಲ್ಲಿ 25883 (ಶೇ. 92), ಯಳಂದೂರು ತಾಲೂಕಿನಲ್ಲಿ 5793 (ಶೇ.97)  ಮಕ್ಕಳಿಗೆ ಪೋಲಿಯೋ ಹನಿ ನೀಡಲಾಗಿದೆ.

ಒಟ್ಟಾರೆ ಜಿಲ್ಲೆಯಲ್ಲಿ 68512 (ಶೇ. 94) ಮಕ್ಕಳಿಗೆ ಮೊದಲ ದಿನ ಪೋಲಿಯೋ ಹನಿ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ಮೊದಲ ದಿನ  ಬೂತ್‌ಗಳ ಮೂಲಕ ಪೋಲಿಯೋ ಹನಿ ಹಾಕಲಾಗುತ್ತದೆ.

ಯಾವುದಾದರೂ ಮಕ್ಕಳಿಗೆ ಪೋಲಿಯೋ ಹನಿ ಲಸಿಕೆ ಹಾಕಿಲ್ಲವೇ ಎಂಬುದನ್ನು ಸೋಮವಾರ, ಮಂಗಳವಾರ, ಬುಧವಾರ ಮನೆಮನೆಗಳಿಗೆ  ಆರೋಗ್ಯ ಕಾರ್ಯಕರ್ತರು ತೆರಳಿ ಪರಿಶೀಲಿಸಲಿದ್ದಾರೆ. ಒಂದು ವೇಳೆ ಯಾವುದಾದರೂ ಮಗುವಿಗೆ  ಕಾರಣಾಂತರದಿಂದ ಹಾಕಿಸಿಲ್ಲವಾದರೆ ಮನೆಯಲ್ಲೇ ಲಸಿಕೆ ಹಾಕಲಾಗುತ್ತದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.