ಅಭಯಾರಣ್ಯಕ್ಕೆ ಜೀವಕಳೆ; ಎಲ್ಲೆಲ್ಲೂ ಪ್ರಾಣಿ-ಪಕ್ಷಿಗಳ ಕಲರವ


Team Udayavani, Jun 17, 2019, 3:00 AM IST

abhayaranya

ಗುಂಡ್ಲುಪೇಟೆ: ಕಿಡಿಗೇಡಿಗಳ ಬೆಂಕಿಯ ಕಿಡಿಗೆ ಧಗಧಗಿಸಿದ್ದ ಬಂಡೀಪುರ ಅಭಯಾರಣ್ಯ ಈಗ ಹಸಿರಿನಿಂದ ಕಂಗೊಳಿಸುತ್ತಿದೆ. ರಾಷ್ಟ್ರದ ಅತ್ಯುನ್ನತ ಉದ್ಯಾನವನಗಳಲ್ಲಿ ಒಂದಾದ ಬಂಡೀಪುರ ಅಭಯಾರಣ್ಯದಲ್ಲಿ ಈಗ ಜೀವಕಳೆ ದಿನೇ ದಿನೇ ಹೆಚ್ಚುತ್ತಿದೆ.

ಕಳೆದ ಒಂದು ತಿಂಗಳಿನಿಂದ ಬೀಳುತ್ತಿರುವ ಮಳೆಗೆ ಮೈಯೊಡ್ಡಿ ನಿಂತಿರುವ ಬಂಡೀಪುರ ಅರಣ್ಯ ಪ್ರದೇಶದಲ್ಲಿ ಈಗ ಎಲ್ಲೆಲ್ಲೂ ಅಚ್ಚ ಹಸಿರಿನ ಮೈಸಿರಿ. ಸಮೃದ್ಧಿಯಾಗಿರುವ ತುಂಬಿರುವ ಕೆರೆ ಕಟ್ಟೆಗಳು. ಸ್ವಚ್ಚಂದವಾಗಿ ವಿಹರಿಸುವ ವನ್ಯ ಜೀವಿಗಳು ಮತ್ತು ಪಕ್ಷಿಗಳು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ.

ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಹೊಸದಾಗಿ ಚಿಗುರಿದ ಹುಲ್ಲನ್ನು ಮೇಯಲು ಹರಿಣಗಳು ಹಾಗೂ ಆನೆಗಳು ಹಿಂಡು-ಹಿಂಡಾಗಿ ರಸ್ತೆ ಬದಿಯಲ್ಲಿ ಕಂಡುಬರುತ್ತಿದ್ದು ಪ್ರವಾಸಿಗರಲ್ಲಿ ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಲ್ಲಿ ಸಂತಸವನ್ನುಂಟು ಮಾಡುತ್ತಿವೆ.

ಪ್ರತಿ ದಿನವೂ ಸಾವಿರಾರು ಪ್ರವಾಸಿಗರು ಆಗಮಿಸುವ ಈ ಉದ್ಯಾನವನದಲ್ಲಿ ಎಲ್ಲಿ ನೋಡಿದರಲ್ಲಿ ಹಸಿರು ಎದ್ದು ಕಾಣುತ್ತಿದೆ. ಅದರೊಂದಿಗೆ ಬೆಳಗ್ಗೆ ಹಾಗೂ ಸಂಜೆಯಾಗುತ್ತಿದ್ದಂತೆಯೇ ರಸ್ತೆಯ ಬದಿಯಲ್ಲಿ ಬೆಳೆದಿರುವ ಹಸಿರು ಹುಲ್ಲನ್ನು ಮೇಯಲು ಆಗಮಿಸುವ ಚುಕ್ಕಿ ಜಿಂಕೆಯನ್ನು ನೋಡಲು ಪ್ರವಾಸಿಗರು ಬಂಡೀಪುರಕ್ಕೆ ಮತ್ತೆ ಮತ್ತೆ ಬರಬೇಕು ಎನ್ನಿಸುವಂತಿದೆ.

ನೂರಾರು ಸಂಖ್ಯೆಯಲ್ಲಿ ರಸ್ತೆಯ ಪಕ್ಕದಲ್ಲೇ ತಮ್ಮ ಸಂಸಾರ ಸಮೇತರಾಗಿ ಆಗಮಿಸುವ ಚುಕ್ಕೆ ಜಿಂಕೆಗಳ ಅಂದವನ್ನು ಕಣ್ತುಂಬಿಸಲು ಹಾಗೂ ತಮ್ಮ ಮೊಬೈಲುಗಳಲ್ಲಿ ಅವುಗಳ ಫೋಟೋ ಸೆರೆಡಿಯಲು ಪ್ರವಾಸಿಗರು ಮುಗಿಬೀಳುತ್ತಿದ್ದಾರೆ. ಒಮ್ಮೊಮ್ಮೆ ಮರದ ಎಲೆಗಳನ್ನು ಎಟುಕಿಸಲು ಮುಂಗಾಲೆತ್ತಿ ಎಗರುವ ದೃಶ್ಯ ರಮಣೀಯವಾಗಿದೆ. ಆಹಾರ ತಿನ್ನಲು ಬರುವ ಸಹಪಾಠಿಯೊಡನೆ ಕಾಲುಕೆರೆದು ಜಗಳಕ್ಕೆ ಬೀಳುವಾಗ ಅವುಗಳ ಕೊಂಬುಗಳ ಕಟಕಟ ಶಬ್ಧ ಕೋಲಾಟವನ್ನು ನೆನಪಿಸುತ್ತದೆ.

ಬೆಂಕಿಯಿಂದ ಒಣಗಿ ನಿಂತಿದ್ದ ಮರಗಿಡಗಳು ಈ ಬಾರಿ ಉತ್ತಮ ಮಳೆಯಿಂದಾಗಿ ಹಚ್ಚ ಹಸುರಿನಿಂದ ಕಂಗೊಳಿಸುತ್ತಿವೆ. ಎತ್ತ ನೋಡಿದರೂ ದಟ್ಟ ಹಸಿರಿನ ಹೊದಿಕೆ ಹೊದ್ದ ಬಂಡೀಪುರ ವನ್ಯ ಜೀವಿ ಪ್ರಿಯರಲ್ಲಿ ಮಂದಹಾಸ ಮೂಡಿಸುತ್ತಿದೆ.

ಕಾಡೆಲ್ಲಾ ಸುಟ್ಟುಹೋಗಿತ್ತು: ಕಳೆದ ಫೆಬ್ರವರಿಯಲ್ಲಿ ಕಿಡಿಗೇಡಿಗಳ ಕಿಚ್ಚಿಗೆ ಮೂವತ್ತು ಸಾವಿರಕ್ಕೂ ಹೆಚ್ಚು ಎಕರೆಯಷ್ಟು ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದು ಬೂದಿಯಾಗಿತ್ತು. ಎಲ್ಲೆಲ್ಲೂ ಒಣಗಿದ ಮತ್ತು ಅರ್ಧಂಬರ್ಧ ಬೆಂದ ಮರಗಳು ಕಾಣಿಸುತ್ತಿದ್ದವು. ಆದರೆ, ಈಗ ಅರಣ್ಯದ ಈ ಹಿಂದಿನ ಚಿತ್ರಣವೇ ಸಂಪೂರ್ಣವಾಗಿ ಬದಲಾಗಿದೆ.

ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ 874ಕ್ಕೂ ಹೆಚ್ಚು ಕೆರೆ ಕಟ್ಟೆಗಳು ಈ ಬಾರಿಯ ಉತ್ತಮವಾದ ಮಳೆಯಿಂದ ತುಂಬಿ ತುಳುಕುತ್ತಿವೆ. ಈ ಮೂಲಕ ವನ್ಯ ಜೀವಿಗಳ ನೀರಿನ ತೊಂದರೆ ನೀಗಿದಂತಾಗಿದೆ. ಅಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಬಂಡೀಪುರದ ಅರಣ್ಯ ಮತ್ತು ಬೆಟ್ಟ ಗುಡ್ಡಗಳು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
-ಬಾಲಚಂದ್ರ, ಬಂಡೀಪುರ ಹುಲಿಯೋಜನೆ ನಿರ್ದೇಶಕರು

ಬಂಡೀಪುರದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಕಾಣದಷ್ಟು ಸಂಖ್ಯೆಯಲ್ಲಿ ಜಿಂಕೆ, ಆನೆ, ನವಿಲು, ಕಾಡುಹಂದಿ, ಚಿರತೆ ಹಾಗೂ ಹುಲಿಗಳು ಕಂಡುಬರುತ್ತಿವೆ. ಸಫಾರಿ ಹಾಗೂ ಮಧುಮಲೆ ಮಾರ್ಗದಲ್ಲಿಯೂ ಹೆಚ್ಚಿನ ವನ್ಯಜೀವಿಗಳು ದರ್ಶನ ನೀಡುತ್ತಿದ್ದು ಬಂಡೀಪುರ ಉದ್ಯಾನವನದ ಹಿರಿಮೆ ಸಾರುತ್ತಿದೆ. ಡಿಸೆಂಬರ್‌ನಲ್ಲಿ ಬಂಡೀಪುರವನ್ನು ನೋಡುವುದೇ ಆನಂದ.
-ಜಿ.ಎಸ್‌.ಗಣೇಶ್‌ ದರ್ಶನ್‌, ಪರಿಸರ ಪ್ರೇಮಿ, ಗುಂಡ್ಲುಪೇಟೆ

* ಸೋಮಶೇಖರ್‌

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.