ಟ್ರ್ಯಾಕಿಂಗ್ ಮೂಲಕ ಸಂಪರ್ಕಿತರನ್ನು ಪತ್ತೆ ಹಚ್ಚಿ
Team Udayavani, Jul 11, 2020, 5:00 AM IST
ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿ ಯಾದ ಕೂಡಲೇ ಸೋಂಕಿತರ ಸಂಪರ್ಕಿತ ಎಲ್ಲ ವ್ಯಕ್ತಿಗಳನ್ನು ಟ್ರ್ಯಾಕಿಂಗ್ ಮೂಲಕ ಪತ್ತೆಹಚ್ಚುವ ಪ್ರಕ್ರಿಯೆ ತ್ವರಿತ ನಡೆಸಬೇ ಕೆಂದು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್.ರವಿ ಅಧಿಕಾರಿಗಳಿಗೆ ಸೂಚಿಸಿದರು. ಕೋವಿಡ್-19 ತಡೆ ನಿಯೋಜಿತ ನೋಡಲ್ ಅಧಿಕಾರಿಗಳ ಜೂಮ್ ಆ್ಯಪ್ ಸಭೆಯಲ್ಲಿ ಮಾತನಾಡಿದರು.
ಸಂಚಾರ ಮಾಹಿತಿ ಪೂರ್ಣ ಪ್ರಮಾಣದಲ್ಲಿ ಪಡೆ ದುಕೊಳ್ಳಬೇಕು. ಇದರಿಂದ ಸೋಂಕಿತರ ಸಂಪರ್ಕಿತರನ್ನು ಪರೀಕ್ಷೆ ನಡೆಸಿ ಇನ್ನಷ್ಟು ಜನರಿಗೆ ಸೋಂಕು ವ್ಯಾಪಿಸುವುದನ್ನು ತಡೆಯಬಹುದು. ಟ್ರಾಕಿಂಗ್ ಸಂಬಂಧ ಪ್ರತಿ ಗ್ರಾಪಂ, ವಾರ್ಡ್, ಪಟ್ಟಣ ಪ್ರದೇಶ ಗಳಲ್ಲಿ ಕ್ರಿಯಾಶೀಲವಾಗಿ ಕಾರ್ಯ ಚಟು ವಟಿಕೆಗಳನ್ನು ಕಾರ್ಯನಿರ್ವಹಿಸಬೇಕು ಎಂದರು.
ಕಂಟೈನ್ಮೆಂಟ್ ವಲಯಗಳಲ್ಲಿ ಪರೀಕ್ಷೆ ಸಂಖ್ಯೆಯನ್ನು ಹೆಚ್ಚುಗೊಳಿಸ ಬೇಕು. 70 ವರ್ಷ ಮೇಲ್ಪಟ್ಟ ವಯೋ ವೃದರು, ಗರ್ಭಿಣಿಯರು, ಬಾಣಂತಿ ಯರು ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿರುವವರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸ ಬೇಕು. ಪ್ರತಿ ತಾಲೂಕುಗಳಲ್ಲೂ ಗಂಟಲು ದ್ರವ ಮಾದರಿ ಸಂಗ್ರಹಣೆಗಾಗಿ ಮೊಬೈಲ್ ಕೇರ್ ಯೂನಿಟ್ಗಳನ್ನು ಚಾಲನೆಗೊಳಿಸಲಾಗಿದೆ ಎಂದರು.
ಸಭೆಯಲ್ಲಿ ಜಿಪಂ ಸಿಇಒ ನಾರಾ ಯಣರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್, ಉಪವಿಭಾಗಾಧಿಕಾರಿ ನಿಖೀತಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಸಿ. ರವಿ, ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ. ನಾಗರಾಜು, ವೈದ್ಯಕೀಯ ಕಾಲೇಜಿನ ಡೀನ್ ಡಾ. ಸಂಜೀವ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ