ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಲಾರಿ ಪಲ್ಟಿ:ಮೂವರ ದುರ್ಮರಣ
Team Udayavani, Apr 14, 2018, 12:29 PM IST
ಚಾಮರಾಜನಗರ : ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿನ ಮೇಲೆ ಲಾರಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಭೀಕರ ದುರ್ಘಟನೆ ಶನಿವಾರ ಸೋಮವಾರಪೇಟೆ ಬಳಿ ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ನಡೆದಿದೆ.
ಮೃತ ದುರ್ದೈವಿಗಳು ವಿಜಯಪುರದ ಇಂಡಿ ತಾಲೂಕಿನ ಕುಳ್ಳುರುಗಿ ಯವರು ಎಂದು ತಿಳಿದು ಬಂದಿದ್ದು ತಮಿಳು ನಾಡಿನಿಂದ ಪ್ರವಾಸ ಮುಗಿಸಿಕೊಂಡು ವಾಪಾಸಾಗುತ್ತಿದ್ದರು ಎಂದು ತಿಳಿದು ಬಂದಿದೆ.
ಕಾರು ನಿಲ್ಲಿಸಿ ಎಳನೀರು ಕುಡಿಯುತ್ತಿದ್ದ ವೇಳೆ ಯಮನಂತೆ ಲಾರಿ ಬಂದು ಪ್ರಾಣ ಕಸಿದುಕೊಂಡಿದೆ.
ಜೋಳ ತಮಿಳುನಾಡಿಗೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅನಾಹುತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಚಾಮರಾಜನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಒಟ್ಟುಒಂದೇ ಕುಟುಂಬದ 8 ಮಂದಿ ಪ್ರವಾಸಕ್ಕೆ ತೆರಳಿದ್ದು, ಅವಘಡ ನಡೆಯುವ ವೇಳೆ 5 ಮಂದಿ ಕಾರಿನಿಂದ ಹೊರಗಿದ್ದರು ಎಂದು ತಿಳಿದು ಬಂದಿದೆ. ಚಾಲಕ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ವಿವರ ಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!