ಚಾ.ನಗರ: 5016 ರಾಸುಗಳಿಗೆ ಚರ್ಮಗಂಟು ರೋಗ


Team Udayavani, Dec 20, 2022, 4:34 PM IST

tdy-17

ಚಾಮರಾಜನಗರ: ಜಿಲ್ಲೆಯಲ್ಲಿ ಇದುವರೆಗೆ 5016 ರಾಸುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದು, 3470 ರಾಸುಗಳು ಗುಣಮುಖವಾಗಿವೆ.

1365 ರಾಸು ಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಈ ರೋಗ ದಿಂದ ಇದುವರೆಗೆ 181 ರಾಸುಗಳು ಮೃತಪಟ್ಟಿವೆ. ಜಿಲ್ಲೆಯ 313 ಗ್ರಾಮಗಳಲ್ಲಿ ಈ ರೋಗ ಕಾಣಿಸಿ ಕೊಂಡಿದ್ದು, ಈ ಪೈಕಿ ಹನೂರು ಹಾಗೂ ಗುಂಡ್ಲುಪೇಟೆ ತಾಲೂಕಿನಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಗುಂಡ್ಲುಪೇಟೆ ತಾಲೂಕಿನ 52 ಗ್ರಾಮ ಗಳಲ್ಲಿ 2972 ಪ್ರಕರಣಗಳು ಕಂಡು ಬಂದಿವೆ.

ಇವುಗಳಲ್ಲಿ 2193 ರಾಸುಗಳು ಗುಣಮುಖವಾಗಿದ್ದು, 713 ರಾಸುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ತಾಲೂಕಿನಲ್ಲಿ 66 ರಾಸುಗಳು ಕಾಯಿಲೆಯಿಂದ ಸಾವನ್ನಪ್ಪಿವೆ. ಹಾಗೆಯೇ ಹನೂರು ತಾಲೂಕಿನ 184 ಗ್ರಾಮಗಳಲ್ಲಿ 1317 ಪ್ರಕರಣಗಳು ವರದಿಯಾಗಿವೆ. ಇವುಗಳ ಪೈಕಿ 693 ರಾಸುಗಳು ಗುಣಮುಖವಾಗಿವೆ. 535 ರಾಸುಗಳಿಗೆ ಚಿಕಿತ್ಸೆ ಮುಂದುವರಿ ಸಲಾಗಿದೆ. 89 ಜಾನುವಾರುಗಳು ಮೃತಪಟ್ಟಿವೆ. ರಾಮನಗರ, ಕನಕಪುರ ಭಾಗದಲ್ಲಿ ಗಂಟು ರೋಗ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ರಾಸುಗಳ ಮಾಲೀಕರು ಅವುಗಳನ್ನು ಮಹದೇಶ್ವರ ಬೆಟ್ಟದ ಕಾಡಂಚಿನಲ್ಲಿ ಬಿಟ್ಟು ಹೋದ ಪರಿಣಾಮ ಹನೂರು ಭಾಗದಲ್ಲಿ ರಾಸುಗಳಿಗೆ ರೋಗ ಹರಡಲು ಕಾರಣ ವಾಯಿತು ಎನ್ನುತ್ತಾರೆ ಪಶುವೈದ್ಯಕೀಯ ಅಧಿಕಾರಿಗಳು.

ಅಲ್ಲದೇ ಮಲೆ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಜಾನುವಾರುಗಳನ್ನು ನೂರಾರು ಸಂಖ್ಯೆಯಲ್ಲಿ ಒಟ್ಟಾಗಿ ಸಾಕಲಾಗುತ್ತದೆ. ಇವನ್ನು ದೊಡ್ಡಿಯಲ್ಲಿ ಒಂದೇ ಕಡೆ ಇರಿಸಲಾಗುತ್ತಿದೆ. ಹೀಗಾಗಿ ಸೋಂಕು ವೇಗವಾಗಿ ರಾಸುಗಳಿಗೆ ಹರಡಿದೆ. ಹಾಗೆಯೇ ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬಂದದ್ದರಿಂದ, ಗಡಿಯಲ್ಲಿರುವ ಗುಂಡ್ಲುಪೇಟೆ ತಾಲೂಕಿನಲ್ಲೂ ರಾಸುಗಳಿಗೆ ಸೋಂಕು ವೇಗವಾಗಿ ಹರಡಿದೆ ಎನ್ನುತ್ತಾರೆ.

ರೈತರಲ್ಲಿ ಹೈನುಗಾರಿಕೆಯನ್ನೇ ನಂಬಿರುವ ಸಾಕಷ್ಟು ಮಂದಿ ಇದ್ದಾರೆ. ಹೀಗಿರುವಾಗ ರಾಸುಗಳಲ್ಲಿ ಹರಡುತ್ತಿರುವ ಗಂಟು ರೋಗ ಸಹಜವಾಗಿಯೇ ರೈತರನ್ನು ಚಿಂತೆಗೀಡು ಮಾಡಿದೆ.

ರಾಸುಗಳಿಗೆ ಲಸಿಕೆ ನೀಡಿಕೆ ಕಾರ್ಯ ಚುರುಕು: ಶಿವಣ್ಣ : ಜಿಲ್ಲೆಯಲ್ಲಿ ಒಟ್ಟು 2,46,790 ಜಾನುವಾರುಗಳಿವೆ. ಇವುಗಳ ಪೈಕಿ 1,74,598 ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. 65,500 ಲಸಿಕೆ ದಾಸ್ತಾನಿದೆ. ಡಿ. 25ರೊಳಗೆ ಶೇ. 100 ರಷ್ಟು ಲಸಿಕಾ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಪಶುಪಾಲನಾ ಇಲಾಖೆ ಉಪನಿರ್ದೇಶಕ ಶಿವಣ್ಣ ತಿಳಿಸಿದರು. ಜಿಲ್ಲೆಯಲ್ಲಿ ಗಂಟು ರೋಗ ನಿಯಂತ್ರಣದಲ್ಲಿದೆ. ಯಳಂದೂರು ತಾಲೂಕಿನಲ್ಲಿ ಶೇ.100 ರಷ್ಟು ಲಸಿಕಾ ಕಾರ್ಯ ಪೂರ್ಣಗೊಂಡಿದೆ. ಕೊಳ್ಳೇಗಾಲ ತಾಲೂಕಿನಲ್ಲಿ ಶೇ. 97 ಹನೂರು ತಾಲೂಕಿನಲ್ಲಿ ಶೇ. 79ರಷ್ಟು, ಗುಂಡ್ಲು ಪೇಟೆ ತಾಲೂಕಿನಲ್ಲಿ ಶೇ. 63 ಹಾಗೂ ಚಾಮ ರಾಜನಗರ ತಾಲೂಕಿನಲ್ಲಿ ಶೇ. 57ರಷ್ಟು ಲಸಿಕೀಕರಣ ಮಾಡಲಾಗಿದೆ ಎಂದು ಅವರು ಹೇಳಿದರು.

ಸೊಳ್ಳೆಗಳ ಮೂಲಕ ಚರ್ಮಗಂಟು ರೋಗದ ವೈರಸ್‌ ಬರುತ್ತದೆ. ರೈತರು ಕೊಟ್ಟಿಗೆಗಳನ್ನು ಶುಚಿಯಾಗಿಟ್ಟು ಕೊಳ್ಳಬೇಕು. ರೋಗ ಕಾಣಿಸಿಕೊಂಡ ಜಾನುವಾರುಗಳ ಮೈಮೇಲೆ ಗುಳ್ಳೆಗಳು ಬರುತ್ತದೆ. ಈ ಚಿಹ್ನೆ ಕಾಣಿಸಿಕೊಂಡ ತಕ್ಷಣ ವೈದ್ಯರಿಗೆ ತೋರಿಸಬೇಕು. ಸಕಾಲದಲ್ಲಿ ಚಿಕಿತ್ಸೆ ದೊರೆತರೆ ಒಂದು ವಾರದಲ್ಲಿ ಕಾಯಿಲೆ ಗುಣಮುಖವಾಗುತ್ತದೆ. -ಡಾ. ಶಿವಣ್ಣ, ಉಪನಿರ್ದೇಶಕರು, ಪಶುಪಾಲನಾ ಇಲಾಖೆ

-ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.