ನಾಳೆ ಎಲ್ಲೆಲ್ಲಿ, ಹೇಗೆ ಮಹಾ ಶಿವರಾತ್ರಿ ಆಚರಣೆ?


Team Udayavani, Feb 28, 2022, 1:48 PM IST

Untitled-1

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಮಹಾಶಿವರಾತ್ರಿ ವಿಶೇಷ ಪೂಜಾ ಕೈಂಕರ್ಯಗಳು ಪ್ರಾರಂಭವಾಗಲಿದ್ದು,ಲಕ್ಷಾಂತರ ಭಕ್ತರು ಪಾದಯಾತ್ರೆ ಹಾಗೂ ವಾಹನಗಳ ಮೂಲಕ ಶ್ರೀ ಕ್ಷೇತ್ರ ತಲುಪುತ್ತಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ನಿಯಮಾವಳಿ ಜಾರಿಯಲ್ಲಿರುವುದರಿಂದ ಹಲವು ನಿರ್ಬಂಧಗಳನಡುವೆ ಮಹಾಶಿವರಾತ್ರಿಯ ವಿಶೇಷ ಪೂಜಾಕೈಂಕರ್ಯಗಳು ಜರುಗಲಿವೆ. ಸೋಮವಾರಮಹಾಶಿವರಾತ್ರಿ ಜಾತ್ರೆಗೆ ಚಾಲನೆ ಸಿಗಲಿದ್ದು,ಮಂಗಳವಾರ ಮಲೆ ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಶಿವರಾತ್ರಿ ಪೂಜಾ ಕೈಂಕರ್ಯಗಳು, ಬುಧವಾರಶಿವರಾತ್ರಿ ಅಮಾವಾಸ್ಯೆ ವಿಶೇಷ ಉತ್ಸವಾದಿಗಳುಮತ್ತು ಗುರುವಾರ ಬೆಳಗ್ಗೆ 8.10 ರಿಂದ 8.45ರವರೆಗೆ ಮಹಾರಥೋತ್ಸವ ಜರುಗಲಿದೆ. ಈ ರಥೋತ್ಸವಕ್ಕೆ ಜಿಲ್ಲಾಡಳಿತ ಸೀಮಿತ ಮಂದಿಗಷ್ಟೇ ಪಾಸ್‌ ವಿತರಿಸಿದ್ದು, ಭಕ್ತಾದಿಗಳಿಗೆ ನಿರ್ಬಂಧ ಹೇರಿದೆ.

ಇದಲ್ಲದೆ ವಿಶೇಷ ಪೂಜಾ ಸಂದರ್ಭದ ಸೋಮವಾರದಿಂದ ಬುಧವಾರದವರೆಗೆ ರಾತ್ರಿವಾಸ್ತವ್ಯ ಮತ್ತು ಭಕ್ತಾದಿಗಳ ಗುಂಪುಗೂಡುವಿಕೆಗೆ ನಿರ್ಬಂಧ ಹೇರಲಾಗಿದೆ.

ಪ್ರಾಧಿಕಾರದಿಂದ ಸಕಲ ಸಿದ್ಧತೆ: ವಿಶೇಷ ಪೂಜಾಕೈಂಕರ್ಯಗಳಿಗೆ ಲಕ್ಷಾಂತರ ಭಕ್ತರು ಆಗಮಿಸುತ್ತಿರುವಹಿನ್ನೆಲೆ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿಪ್ರಾಧಿಕಾರದಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಶ್ರೀಕ್ಷೇತ್ರಕ್ಕೆ ಕಾವೇರಿ ನದಿಯಿಂದ ಕುಡಿಯುವ ನೀರುಪೂರೈಕೆ ಮಾಡುವ ಟ್ಯಾಂಕ್‌ಗಳ ಶುಚಿತ್ವ ಕಾರ್ಯ,ಅಂತರಗಂಗೆ ಶುಚಿತ್ವದ ಕಾರ್ಯ, ಸ್ವಾಮಿಯ ದರ್ಶನಕ್ಕೆಸರದಿ ಸಾಲಿನಲ್ಲಿ ಭಕ್ತಾದಿಗಳು ನಿಲ್ಲಲು ನೆರಳಿನವ್ಯವಸ್ಥೆ, ಶೌಚಗೃಹ, ಕುಡಿಯುವ ನೀರು ಸೇರಿದಂತೆ ಎಲ್ಲಾ ಮೂಲ ಸೌಕರ್ಯ ಕೈಗೊಳ್ಳಲಾಗಿದೆ. ಇನ್ನು ವಿಶೇಷ ದಿನಗಳಲ್ಲಿ ಆಗಮಿಸುವ ಭಕ್ತಾದಿಗಳಿಗೆ ದಾಸೋಹಭವನದಲ್ಲಿ ದಾಸೋಹ ಪೂರೈಕೆಕಷ್ಟವಾಗುವುದನ್ನರಿತು ಹೆಚ್ಚವರಿ ತಾತ್ಕಾಲಿಕದಾಸೋಹ ಕೇಂದ್ರಗಳನ್ನು ತೆರೆಯಲಾಗಿದೆ. ಶ್ರೀಕ್ಷೇತ್ರದಲ್ಲಿ ದೊರೆಯುವ ಲಡ್ಡು ಪ್ರಸಾದಕ್ಕೆ ಹೆಚ್ಚು ಬೇಡಿಕೆಯುಂಟಾಗುವುದನ್ನು ಮನಗಂಡು 7 ಲಕ್ಷಲಡ್ಡು ದಾಸ್ತಾನು ಮಾಡಲಾಗುತ್ತಿದೆ. ಲಡ್ಡುತಯಾರಿಕಾ ಕೇಂದ್ರದಲ್ಲಿ ನಿತ್ಯ 40 ಸಾವಿರಕ್ಕೂ ಹೆಚ್ಚು ಲಡ್ಡು ತಯಾರು ಮಾಡಲಾಗುತ್ತಿದೆ.

ಶಿವರಾತ್ರಿ ಜಾಗರಣೆಗಾಗಿ ರಂಗಮಂದಿರಲ್ಲಿ ಮಹದೇಶ್ವರರ ಹರಿಕಥೆ, ಗೀತ-ಗಾಯನ ಮತ್ತುಭಜನೆ ನಡೆಸಲಾಗುತಿತ್ತು. ಆದರೆ, ಕೋವಿಡ್‌ ಕಾರಣ ಆಚರಣೆಗೆ ಬ್ರೇಕ್‌ ಬಿದ್ದಿದೆ.

ಮಹದೇಶ್ವರ ಬೆಟ್ಟಕ್ಕೆ ನಿಖಿಲ್‌: ನಟ, ಜೆಡಿಎಸ್‌ ಯುವ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿಯಾತ್ರೆ ಕೈಗೊಂಡಿದ್ದಾರೆ. ಸೋಮವಾರ ಮಧ್ಯಾಹ್ನದವೇಳೆಗೆ ಮಲೆ ಮಾದಪ್ಪನ ಹೆಬ್ಟಾಗಿಲುತಾಳಬೆಟ್ಟದವರೆಗೆ ಪಾದಯಾತ್ರೆಯಲ್ಲಿ ಆಗಮಿಸಿ ಬಳಿಕ ಮಹದೇಶ್ವರನ ಸನ್ನಿಧಿಗೆ ಆಗಮಿಸುವರು.

ಮೈಸೂರು ಹಾಗೂ ಚಾ.ನಗರ ಜಿಲ್ಲೆಯಲ್ಲಿ ನಾಳೆಯಿಂದ ಮಹಾ ಶಿವರಾತ್ರಿ ಹಬ್ಬಆಚರಿಸಲಾಗುತ್ತಿದ್ದು, ವಿವಿಧ ಪುಣ್ಯಕ್ಷೇತ್ರ ಹಾಗೂಹಲವು ದೇವಾಲಯಗಳಲ್ಲಿ ವಿಶಿಷ್ಟ ಧಾರ್ಮಿಕ ಪೂಜಾ ಕಾರ್ಯಕ್ರಮಗಳು, ರಥೋತ್ಸವಗಳು ಜರುಗಲಿವೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಗೆ ರಾಜ್ಯದ ವಿವಿಧೆಡೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ. ದಕ್ಷಿಣ ಕಾಶಿ ಖ್ಯಾತಿ ನಂಜನಗೂಡು ಶ್ರೀಕಂಠೇಶ್ವರ ದೇಗುಲ ಸನ್ನಿಧಿಯಲ್ಲಿ ಅಹೋರಾತ್ರಿ ದಿನವಿಡೀ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಶಿವನಾಮ ಸ್ಮರಣೆಗೆ ಸಹಸ್ರಾರು ಭಕ್ತರು ಬರುತ್ತಿದ್ದಾರೆ. ಇನ್ನು ಅರಮನೆ ಆವರಣದಲ್ಲಿ ತ್ರಿನೇಶ್ವಸ್ವಾಮಿಗೆ ಚಿನ್ನದ ಕೊಳಗ(ಮುಖವಾಡ) ಧರಿಸಿ, ವಿಶೇಷ ಪೂಜಾ ಕೈಂಕರ್ಯ ನಡೆಸಲಾಗುವುದು. ಕೆ.ಆರ್‌.ನಗರ ತಾಲೂಕಿನ ಮೀನಾಕ್ಷಿ ಸಮೇತ ಅರ್ಕೇಶ್ವರಸ್ವಾಮಿ ದೇಗುಲದಲ್ಲಿ ರಥೋತ್ಸವ ನಡೆಯಲಿದೆ. ಜೊತೆಗೆಪುರಾತನ ಪ್ರಸಿದ್ಧ ಚಪ್ಪಡಿ ಕ್ಷೇತ್ರದಲ್ಲಿ ಶಿವರಾತ್ರಿಯಿಂದಯುಗಾದಿ ತನಕ ಒಂದು ತಿಂಗಳ ಕಾಲ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಲಿವೆ.

ಕಾಲ್ನಡಿಗೆಯಲ್ಲಿ ಬೆಟ್ಟಕ್ಕೆ  ಆಗಮಿಸುತ್ತಿರುವ ಭಕ್ತರು :

ಶಿವರಾತ್ರಿ ವಿಶೇಷ ಪೂಜಾ ಸಂದರ್ಭದಲ್ಲಿ ಮಲೆ ಮಾದಪ್ಪನನ್ನು ಕಣ್ತುಂಬಿಕೊಳ್ಳಲು ರಾಮನಗರ, ಕನಕಪುರ, ಬೆಂಗಳೂರು ಗ್ರಾಮಾಂತರ, ಚನ್ನಪಟ್ಟಣ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧೆಡೆಯಿಂದ ಲಕ್ಷಾಂತರ ಭಕ್ತಾದಿಗಳು ಕಾವೇರಿ ವನ್ಯಜೀವಿ ವಲಯದ ಅರಣ್ಯದ ಮೂಲಕ ಕಾವೇರಿ ನದಿಯನ್ನು ದಾಟಿ ಶ್ರೀಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಇನ್ನು ಮೈಸೂರು, ಮಂಡ್ಯ, ಚಾ.ನಗರ ಜಿಲ್ಲೆಗಳ ಭಕ್ತಾದಿಗಳು ಕೊಳ್ಳೇಗಾಲ-ಹನೂರು- ಕೌದಳ್ಳಿ ಮಾರ್ಗವಾಗಿ ಶ್ರೀ ಕ್ಷೇತ್ರವನ್ನು ತಲುಪುತ್ತಿದ್ದಾರೆ. ಪಾದಯಾತ್ರೆಯಲ್ಲಿ ಆಗಮಿಸುವ ಭಕ್ತಾದಿಗಳಿಗೆ ಊಟ, ಉಪಾಹಾರ, ನೀರು, ತಂಪಿ ಪಾನೀಯಗಳು, ಹಣ್ಣುಗಳು, ಮಜ್ಜಿಗೆ, ಪಾನಕ ವಿತರಣೆಣೆಗಾಗಿ ದಾನಿಗಳು ಅಲ್ಲಲ್ಲಿ ಬಿಡಾರ ಹೂಡಿ ಉಚಿತ ಸೇವೆಗಳನ್ನು ನೀಡಲು ವ್ಯವಸ್ಥೆ ಕಲ್ಪಿಸಿದ್ದಾರೆ.

-ವಿನೋದ್‌ ಎನ್‌.ಗೌಡ

ಟಾಪ್ ನ್ಯೂಸ್

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.