Kollegala;ಮಾಕಳಿ ಅರಣ್ಯದಲ್ಲಿ ಗಂಡಾನೆಗಳ ಕಾದಾಟ: ಒಂದು ಆನೆಯ ಮೃತ್ಯು
Team Udayavani, Sep 6, 2023, 10:27 PM IST
ಕೊಳ್ಳೇಗಾಲ: ಎರಡು ಗಂಡಾನೆಗಳ ನಡುವೆ ಪರಸ್ಪರ ಕಾದಾಟ ನಡೆದ ಪರಿಣಾಮ 18ರಿಂದ 20 ವರ್ಷ ವಯಸ್ಸಿನ ಆನೆಯೊಂದು ತಾಲೂಕಿನ ಜಾಗೇರಿ ಸಮೀಪದ ಮಾಕಳಿ ಅರಣ್ಯದಲ್ಲಿ ಬುಧವಾರ ಮೃತಪಟ್ಟಿದೆ.
ಕಳೆದ ಎರಡು ಮೂರು ದಿನಗಳಿಂದ ಆನೆಗಳ ಕೂಗಾಟ ಹೆಚ್ಚಾಗಿತ್ತು ಎಂದು ಸಮೀಪದ ಗ್ರಾಮಸ್ಥರು ಹೇಳುತ್ತಿದ್ದಾರೆ. ಆನೆಗಳ ಕಾದಾಟ ನಡೆದ ಪರಿಣಾಮ ಮೃತಪಟ್ಟ ಆನೆಯ ಹೊಟ್ಟೆ ಭಾಗಕ್ಕೆ ಮತ್ತು ಕತ್ತಿನ ಭಾಗಕ್ಕೆ ತೀವ್ರ ಗಾಯಗೊಂಡಿದೆ. ಹಾಗಾಗಿ ಮೃತಪಟ್ಟ ಆನೆ ರಕ್ತಸ್ರಾವದಿಂದ ಮೃತಪಟ್ಟಿದೆ ಎಂದು ಪಶುವೈದ್ಯ ಡಾ. ಶಿವಕುಮಾರ್ ತಿಳಿಸಿದ್ದಾರೆ.
ದೊಡ್ಡಮಾಕಳಿ ಅರಣ್ಯ ಪ್ರದೇಶದ ಸಿಬಂದಿಗಳು ಬೀಟ್ ಗೆ ಹೋಗಿದ್ದ ಸಂದರ್ಭದಲ್ಲಿ ಆನೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆನೆ ಸತ್ತು ಒಂದು ದಿನ ಕಳೆದಿದೆ ಆದರೆ ಸಿಬಂದಿಗೆ ಮಾಹಿತಿ ತಿಳಿದಿರುವುದು ಬುಧವಾರ. ವಿಷಯ ತಿಳಿದ ತತ್ ಕ್ಷಣ ಸ್ಥಳಕ್ಕಾಗಮಿಸಿದ ಮಲೈ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂತೋಷ್ ಕುಮಾರ್, ಎ.ಸಿ.ಎಫ್ ಶಶಿಧರ್. ಆರ್.ಎಫ್.ಒ ಭರತ್ ತಂಡದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವೈದ್ಯರನ್ನು ಕರೆಸಿ ಮರಣೋತ್ತರ ಪರೀಕ್ಷೆ ನಡೆಸಿದರು. ಮರಣೋತ್ತರ ಪರೀಕ್ಷೆ ನಡೆದ ನಂತರ ಆನೆ ದಂತಗಳನ್ನು ಅರಣ್ಯ ಇಲಾಖೆಯಲ್ಲಿ ಸುರಕ್ಷಿತವಾಗಿ ಇಡಲಾಗಿದೆ.ಆನೆ ದಂತ ಶೇಖರಣೆಯ ಬಳಿಕ ಆನೆ ಮೃತದೇಹವನ್ನು ಅರಣ್ಯದ ಪ್ರದೇಶದಲ್ಲಿ ಸಮಾದಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ