ಮಾದಪ್ಪನ ಹುಂಡಿಯಲ್ಲಿ 54 ದಿನಕ್ಕೆ 2.21ಕೋಟಿ ನಗದು ಸಂಗ್ರಹಣೆ, ಚೇತರಿಕೆಯತ್ತ ಆದಾಯ


Team Udayavani, Nov 13, 2020, 2:31 PM IST

ಮಾದಪ್ಪನ ಹುಂಡಿಯಲ್ಲಿ 54 ದಿನಕ್ಕೆ 2.21ಕೋಟಿ ನಗದು ಸಂಗ್ರಹಣೆ, ಚೇತರಿಕೆಯತ್ತ ಆದಾಯ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಕಳೆದ 54 ದಿನದ ಅವಧಿಯಲ್ಲಿ 2.21ಕೋಟಿ ನಗದು, 40ಗ್ರಾಂ ಚಿನ್ನ ಮತ್ತು 1.6ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಖಾಸಗಿ ಬಸ್ ನಿಲ್ದಾಣ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆ ವೇಳೆಗೆ ಪ್ರಾರಂಭವಾದ ಹುಂಡಿ ಎಣಿಕೆ ಮಧ್ಯರಾತ್ರಿ 12 ಗಂಟೆಯವರೆಗೂ ಜರುಗಿತು. ಹುಂಡಿ ಎಣಿಕೆ ಪ್ರಕ್ರಿಯೆಯು ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸಿಸಿಟಿವಿ ಕಣ್ಗಾವಲಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಜರುಗಿತು.

ಈ ಬಾರಿಯ ಹುಂಡಿ ಎಣಿಕೆಯಲ್ಲಿ 2,21,32,439 (ಎರಡು ಕೋಟಿ ಇಪ್ಪತ್ತೊಂದು ಲಕ್ಷದ ಮೂವತ್ತೆರೆಡು ಸಾವಿರದ ನಾಲ್ಕುನೂರ ಮೂವತ್ತ ಒಂಭತ್ತು)ರೂ ನಗದು, 40ಗ್ರಾಂ ಚಿನ್ನದ ಪದಾರ್ಥಗಳು, 1ಕೆಜಿ 650ಗ್ರಾಂ ಬೆಳ್ಳಿಯ ಪದಾರ್ಥಗಳು ಸಂಗ್ರಹವಾಗಿವೆ.

ಇದನ್ನೂ ಓದಿ:ಅಕ್ರಮವಾಗಿ ಅರಣ್ಯ ಪ್ರವೇಶಿಸಿದ್ದ ಮೂವರ ಬಂಧನ: 2 ನಾಡಬಂದೂಕು, ಮುದ್ದುಗುಂಡು ವಶ

ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಉಪಕಾರ್ಯದರ್ಶಿ ಬಸವರಾಜು, ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ, ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಯಥಾಸ್ಥಿತಿಯತ್ತ ಆದಾಯ: ದೇಶದೆಲ್ಲೆಡೆ ಕೊರೋನಾ ಮಹಾಮಾರಿ ಹಿನ್ನೆಲೆ ಮಲೆ ಮಾದಪ್ಪನ ಹುಂಡಿ ಸಂಗ್ರಹಣೆಯಲ್ಲಿ ಕಳೆದ 6 ತಿಂಗಳ ಅವಧಿಯಲ್ಲಿ ಗಣನೀಯ ಕುಸಿತವಾಗಿತ್ತು. ಇದೀಗ ಕಳೆದ 54 ದಿನಗಳ ಅವಧಿಯಲ್ಲಿ 2.21 ಕೋಟಿ ಸಂಗ್ರಹವಾಗಿದ್ದು ಹುಂಡಿ ಆದಾಯ ಚೇತರಿಕೆಯಲ್ಲಿದೆ. ಅಲ್ಲದೆ ನವೆಂಬರ್ 1 ರಿಂದ ಕೆಲ ನಿರ್ಬಂಧಗಳನ್ನು ಸಡಿಲಿಸಿ ರಾತ್ರಿ ತಂಗುವಿಕೆ, ಮುಡಿ ಸೇವೆ, ದರ್ಶನದ ಸಮಯ ವಿಸ್ತರಣೆ, ಬಂಗಾರದ ರಥೋತ್ಸವ, ವಾಹನೋತ್ಸವ ಸೇವೆಗಳು ಆರಂಭವಾಗಿರುವುದರಿಂದ ಹೆಚ್ಚಿನ ಭಕ್ತಾದಿಗಳು ಆಗಮಿಸುತ್ತಿದ್ದು ಆದಾಯ ಮತ್ತಷ್ಟು ಚೇತರಿಕೆಯ ಹಾದಿಯಲ್ಲಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.