ಮಲೆ ಮಹದೇಶ್ವರ ದೇವಸ್ಥಾನದ ಹುಂಡಿ ಆದಾಯಕ್ಕೂ ಕೋವಿಡ್ ಹೊಡೆತ ; ಇಲ್ಲಿದೆ ಗಳಿಕೆ ವಿವರ
Team Udayavani, Sep 18, 2020, 9:21 PM IST
ಹನೂರು (ಚಾಮರಾಜನಗರ): ಪ್ರತಿ ತಿಂಗಳು ಸರಾಸರಿ ಒಂದು ಕೋಟಿಗೂ ಅಧಿಕ ನಗದು ಸಂಗ್ರಹವಾಗುತ್ತಿದ್ದ ಮಲೆ ಮಾದಪ್ಪನ ಹುಂಡಿಗೂ ಕೋವಿಡ್ 19 ಬಿಸಿ ತಟ್ಟಿದ್ದು ಕಳೆದ 84 ದಿನಗಳ ಅವಧಿಯಲ್ಲಿ 1.49ಕೋಟಿ ನಗದು, 17ಗ್ರಾಂ ಚಿನ್ನ ಮತ್ತು 985ಗ್ರಾಂ ಬೆಳ್ಳಿ ಪದಾರ್ಥಗಳು ಸಂಗ್ರಹವಾಗಿವೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಖಾಸಗಿ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಎಣಿಕೆ ಕಾರ್ಯವು ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ಸಮಕ್ಷಮದಲ್ಲಿ ಇಂದು ನಡೆಯಿತು.
ಇಂದು ನಡೆದ ಹುಂಡಿ ಎಣಿಕೆಯಲ್ಲಿ 1,47,14,348ರೂ ನಗದು, 17ಗ್ರಾಂ ಚಿನ್ನ ಮತ್ತು 985 ಗ್ರಾಂ ಬೆಳ್ಳಿಯ ಪದಾರ್ಥಗಳು ಸಂಗ್ರಹವಾಗಿವೆ. ಬೆಳಿಗ್ಗೆ 8 ಗಂಟೆಯ ವೇಳೆಗೆ ಪ್ರಾರಂಭವಾದ ಹುಂಡಿ ಎಣಿಕೆ ಕಾರ್ಯವು ತಡರಾತ್ರಿ 7.30ರವರೆಗೂ ನಡೆಯಿತು.
ಈ ಸಂದರ್ಭದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಸಿಸಿಟಿವಿ ಕ್ಯಾಮೆರಾ ಕಣ್ಗಾವಲನ್ನು ಇರಿಸಲಾಗಿತ್ತು.
ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಉಪ ಕಾರ್ಯದರ್ಶಿ ಬಸವರಾಜು, ಅಭಿಯಂತರ ಮನ್ವಾಚಾರ್ಯ, ಪ್ರಾಧಿಕಾರದ ಸಿಬ್ಬಂದಿ, ಬ್ಯಾಂಕಿನ ಸಿಬ್ಬಂದಿ ಮತ್ತು ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಇಲಾಖಾ ಸಿಬ್ಬಂದಿ ಹಾಜರಿದ್ದರು.
ಆದಾಯ ಕುಸಿತ: ಕೋವಿಡ್ 19 ಲಾಕ್ಡೌನ್ ಜಾರಿಗೊಳ್ಳುವ ಮುನ್ನ ಪ್ರತೀ ತಿಂಗಳು ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಸರಾಸರಿ ಒಂದು ಕೋಟಿಯಿಂದ ಒಂದೂವರೆ ಕೋಟಿ ನಗದು ಸಂಗ್ರಹವಾಗುತಿತ್ತು.
ಆದರೆ ಕೋವಿಡ್ 19 ಮಹಾಮಾರಿಯಿಂದಾಗಿ ಮಾದಪ್ಪನ ಹುಂಡಿಯ ಆದಾಯದಲ್ಲಿ ಗಣನೀಯ ಪ್ರಮಾಣದಲ್ಲಿ ಕುಸಿತವಾಗಿದೆ.
ಕೋವಿಡ್ 19 ಸೋಂಕು ಪ್ರಾರಂಭವಾದ ನಂತರ ಜಾತ್ರಾ ಮಹೋತ್ಸವಗಳು, ಅಮಾವಾಸ್ಯೆ ಪೂಜಾ ಕೈಂಕರ್ಯಗಳು ಮತ್ತು ಎಣ್ಣೆಮಜ್ಜನ ಸೇವೆಗಳಿಗೆ ಭಕ್ತಾದಿಗಳಿಗೆ ಅವಕಾಶ ನೀಡಲಾಗುತ್ತಿಲ್ಲ.
ಈ ಎಲ್ಲಾ ಹಿನ್ನೆಲೆಯಲ್ಲಿ ಭಕ್ತಾದಿಗಳ ಸಂಖ್ಯೆಯೂ ಕುಸಿದಿದ್ದು ಅದು ನೇರವಾದಿ ದೇವಸ್ಥಾನದ ಹುಂಡಿಯ ಆದಾಯದ ಮೇಲೆಯೂ ವ್ಯತಿರಿಕ್ತ ಪರಿಣಾಮವನ್ನು ಬೀರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ