ಮಲೆ ಮಹದೇಶ್ವರ ಬೆಟ್ಟದ ಶಿವರಾತ್ರಿ ಜಾತ್ರೆ ಸರಳ: ಹೊರಗಿನವರಿಗೆ ಪ್ರವೇಶ ಇಲ್ಲ

ಗ್ರಾ.ಪಂ. ವ್ಯಾಪ್ತಿಯ ನಿವಾಸಿಗಳಿಗೆ ಸೀಮಿತ: ಸ್ಥಳೀಯರು ಗುರುತಿನ ಚೀಟಿ ತೋರಿಸಬೇಕು!

Team Udayavani, Mar 3, 2021, 8:45 PM IST

Male Mahadeswar Temple

ಹನೂರು/ಚಾಮರಾಜನಗರ: ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಮಹಾಶಿವರಾತ್ರಿ ಜಾತ್ರೆಯನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳ, ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ. ಬೆಟ್ಟದ ನಿವಾಸಿಗಳನ್ನು ಹೊರತುಪಡಿಸಿ ಹೊರಗಿನವರಿಗೆ ಜಾತ್ರಾ ಉತ್ಸವಕ್ಕೆ ಪ್ರವೇಶವಿರುವುದಿಲ್ಲ.

ಇದೇ ಪ್ರಥಮ ಬಾರಿಗೆ ಹೊರ ನಿಯಮವೊಂದನ್ನು ಜಾತ್ರೆಗೆ ರೂಪಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವವರು ಮಾತ್ರ ಈ ಜಾತ್ರೆಯಲ್ಲಿ ಭಾಗವಹಿಸಬಹುದಾಗಿದೆ. ಅವರು ಸ್ಥಳೀಯರು ಎಂದು ಸಾಬೀತುಪಡಿಸಲು ತಮ್ಮ ಆಧಾರ್ ಅಥವಾ ಮತದಾರರ ಗುರುತಿನ ಚೀಟಿ ತೋರಿಸಬೇಕಾಗುತ್ತದೆ!

ಜಾತ್ರೆ ಆಚರಣೆ ಕುರಿತು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಮಹದೇಶ್ವರ ಬೆಟ್ಟದಲ್ಲಿ ಸಭೆ ನಡೆಸಲಾಯಿತು. ಸಭೆಯ ಬಳಿಕ ಸುದ್ದಿಗಾರರರಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿಯವರು, ಈ ಬಾರಿಯ ಶಿವರಾತ್ರಿ ಜಾತ್ರೆ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿಯಲ್ಲಿರುವ ನಿವಾಸಿಗಳು ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಮಾರ್ಚ್ 10 ರಿಂದ 14ರವರೆಗೂ ಜರುಗಲಿದೆ. ರಾಜ್ಯ ತಾಂತ್ರಿಕ ಸಲಹಾ ಸಮಿತಿ ಕೋವಿಡ್ ಹಿನ್ನೆಲೆಯಲ್ಲಿ ಜಾತ್ರೆ ಆಚರಣೆಗೆ ನಿರ್ಬಂಧ ವಿಧಿಸಿದೆ. ಹಾಗಾಗಿ ಸಲಹಾ ಸಮಿತಿಯ ಮಾರ್ಗದರ್ಶನದಂತೆ ಬೆಟ್ಟಕ್ಕೆ ಸೀಮಿತವಾಗಿ ಸರಳವಾಗಿ ಶಿವರಾತ್ರಿ ಜಾತ್ರೆ ಆಚರಿಸಲಾಗುವುದು ಎಂದರು.

ಮಲೆ ಮಹದೇಶ್ವರ ಬೆಟ್ಟದ ಶಿವರಾತ್ರಿ ಜಾತ್ರೆ ಸರಳ: ಹೊರಗಿನವರಿಗೆ ಪ್ರವೇಶ ಇಲ್ಲ

ಸ್ವಾಮಿಗೆ ಪೂಜಾ ಕೈಂಕರ್ಯಗಳು ಯಥಾವತ್ತಾಗಿ ಜರುಗಲಿವೆ. ಆದರೆ ಜಿಲ್ಲೆಯ ಇನ್ನಿತರ ಭಾಗದ ಭಕ್ತಾದಿಗಳು ಮತ್ತು ಹೊರಜಿಲ್ಲೆಯ ಭಕ್ತಾದಿಗಳಿಗೆ ಹಾಗೂ ಪಾದಯಾತ್ರೆಯಲ್ಲಿ ಆಗಮಿಸುವ ಭಕ್ತಾದಿಗಳ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಇದನ್ನು ಹೊರತುಪಡಿಸಿ ಜಾತ್ರಾ ಮಹೋತ್ಸವದ ಅವಧಿಯಲ್ಲಿ ವಿಶೇಷ ಆಹ್ವಾನಿತರು, ಜನಪ್ರತಿನಿಧಿಗಳು ಮತ್ತು ಕರ್ತವ್ಯನಿರತ ಅಧಿಕಾರಿಗಳಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಮ.ಬೆಟ್ಟ ಪಂಚಾಯಿತಿ ವ್ಯಾಪ್ತಿಯಿಂದ ಈ ಅವಧಿಯಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಅಥವಾ ಯಾವುದಾದರೂ ದಾಖಲೆಯನ್ನು ತರುವುದು ಕಡ್ಡಾಯ ಎಂದು ತಿಳಿಸಿದರು.

ಮಾರ್ಚ್ 9 ರಿಂದ ತಂಗುವಿಕೆ ಇಲ್ಲ: ಕೋವಿಡ್ ನಿಯಮಾವಳಿಯ ಹಿನ್ನೆಲೆ ಶ್ರೀ ಕ್ಷೇತ್ರದಲ್ಲಿ ಮಾರ್ಚ್ 9 ರಿಂದಲೇ ಭಕ್ತಾದಿಗಳ ತಂಗುವಿಕೆಯನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಶ್ರೀ ಕ್ಷೇತ್ರದಲ್ಲಿ ಯಾವ ಭಕ್ತಾದಿಗಳಿಗೂ ಕೂಡ ಕೊಠಡಿ ವ್ಯವಸ್ಥೆಗಳನ್ನು ನೀಡುವುದಿಲ್ಲ. ಅಲ್ಲದೆ ಭಕ್ತಾದಿಗಳು ನೆರವೇರಿಸುವಂತಹ ಪರಸೇವೆ, ಸಾಮೂಹಿಕ ಭೋಜನವನ್ನೂ ಕೂಡ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು. ಕ್ಷೇತ್ರದಲ್ಲಿ ಕೋವಿಡ್ ನಿರ್ಬಂಧ ಮಾರ್ಚ್ 31ರವರೆಗೂ ಇರುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಮಾತನಾಡಿ, ಈಗಾಗಲೇ ಬೆಟ್ಟದ ವಸತಿ ಗೃಹಗಳಲ್ಲಿರುವವರು ಮಾ. 9ರೊಳಗೆ ಕೊಠಡಿಗಳನ್ನು ತೆರವುಗೊಳಿಸಬೇಕು. 14ರ ನಂತರ ಭಕ್ತಾದಿಗಳು ಬರಬಹುದು ಎಂದರು.

ಸರಳ ಮಹಾರಥೋತ್ಸವ: ಶ್ರೀ ಕ್ಷೇತ್ರದಲ್ಲಿ ಜರುಗುವ ಶಿವರಾತ್ರಿ ಮಹೋತ್ಸವದ ಮಹಾರಥೋತ್ಸವವು ಸರಳವಾಗಿ ಮತ್ತು ಸಾಂಪ್ರದಾಯಕವಾಗಿ ನೆರವೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ  2020ನೇ ಸಾಲಿನ ಯುಗಾದಿ ಜಾತ್ರಾ ಮಹೋತ್ಸವ ಮತ್ತು ದೀಪಾವಳಿ ಜಾತ್ರಾ ಮಹೋತ್ಸವದ ಮಹಾರಥೋತ್ಸವವು ರದ್ದಾಗಿತ್ತು.

ಮಲೆ ಮಹದೇಶ್ವರ ಬೆಟ್ಟದ ಶಿವರಾತ್ರಿ ಜಾತ್ರೆ ಸರಳ: ಹೊರಗಿನವರಿಗೆ ಪ್ರವೇಶ ಇಲ್ಲ

ಕೋವಿಡ್ ಪ್ರಕರಣಗಳು ಕಡಿಮೆಯಾಗಿದ್ದ ಹಿನ್ನೆಲೆಯಲ್ಲಿ ಶಿವರಾತ್ರಿ ಜಾತ್ರೆಯನ್ನು ಎಂದಿನಂತೆ ನಡೆಸಲು ಈ ಮುಂಚೆ ನಿರ್ಧರಿಸಲಾಗಿತ್ತು. ಆದರೆ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಇದಲ್ಲದೇ ಜಿಲ್ಲೆಯಲ್ಲೂ ಕೋವಿಡ್ ಪ್ರಕರಣಗಳ ಸಂಖ್ಯೆ ಕ್ರಮೇಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಾರ್ಯದರ್ಶಿ ಜಯವಿಭವಸ್ವಾಮಿ, ತಹಸೀಲ್ದಾರ್ ನಾಗರಾಜು, ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಮ.ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಕ್ತಾದಿಗಳನ್ನು ಹೊರತುಪಡಿಸಿ ಜಿಲ್ಲೆಯ ಇತರೆ ಭಾಗಗಳ ಭಕ್ತಾದಿಗಳು, ಹೊರ ಜಿಲ್ಲೆಯ ಭಕ್ತಾದಿಗಳು, ಪಾದಯಾತ್ರೆ ಭಕ್ತಾದಿಗಳು ಸೇರಿದಂತೆ ಎಲ್ಲರಿಗೂ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು ಜಿಲ್ಲಾಡಳಿತದೊಂದಿಗೆ ಪ್ರತಿಯೊಬ್ಬರೂ ಸಹಕರಿಸಬೇಕು.

– ಡಾ॥ಎಂ.ಆರ್. ರವಿ, ಜಿಲ್ಲಾಧಿಕಾರಿ

ಜಾತ್ರೆಗೆ ಹೈಪವರ್ ಕಮಿಟಿ ನಿರ್ಬಂಧ ವಿಧಿಸಿರುವುದರಿಂದ ಸ್ಥಳೀಯರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಅವರು ಗ್ರಾಮಪಂಚಾಯಿತಿಯವರೇ?ಹೊರಗಿನವರೇ? ಎಂದು ಗುರುತಿಸುವುದು ಹೇಗೆ? ಹಾಗಾಗಿ ಗುರುತಿನಚೀಟಿ ಕಡ್ಡಾಯ ಮಾಡಲಾಗಿದೆ. ದೇವಾಲಯದ ಆವರಣಕ್ಕೆ ಬರುವವರನ್ನು ಗುರುತಿನಚೀಟಿ ನೋಡಿ ಒಳಬಿಡಲಾಗುತ್ತದೆ.

– -ಜಯವಿಭವಸ್ವಾಮಿ, ಪ್ರಾಧಿಕಾರದ ಕಾರ್ಯದರ್ಶಿ.  

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.