ಪತ್ನಿಗೆ ಮತ್ತೋರ್ವನ ಜೊತೆ ಅನೈತಿಕ ಸಂಬಂಧ: ಪತಿಯಿಂದ ವ್ಯಕ್ತಿಯ ಕೊಲೆ
Team Udayavani, May 20, 2021, 3:32 PM IST
ಹತ್ಯೆಯಾದ ಬಸವಶೆಟ್ಟಿ.
ಗುಂಡ್ಲುಪೇಟೆ (ಚಾಮರಾಜನಗರ): ಪತ್ನಿಯೊಂದಿಗೆ ಮತ್ತೊಬ್ಬ ವ್ಯಕ್ತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಹಿನ್ನೆಲೆ ಆತನನ್ನು ಮಾರಾಕಾಸ್ತ್ರಗಳಿಂದ ಹೊಡೆದು ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಭೀಮನಬೀಡು ಗ್ರಾಮದ ಬಸವಶೆಟ್ಟಿ (30 ವ) ಎಂಬಾತನೇ ಹತ್ಯೆಗೀಡಾದ ವ್ಯಕ್ತಿ. ಶಿವಣ್ಣ (25 ವ) ಕೊಲೆಗೈದ ಆರೋಪಿಯಾಗಿದ್ದಾನೆ.
ಇದನ್ನೂ ಓದಿ:ಅನುದಾನರಹಿತ ಶಾಲೆ ಶಿಕ್ಷಕ-ಶಿಕ್ಷಕೇತರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಸಿಎಂ ಗೆ ಸಚಿವರ ಪತ್ರ
ಬಸವಶೆಟ್ಟಿ ಜೊತೆ ಪತ್ನಿ ಸೌಭಾಗ್ಯಳು ಅನೈತಿಕ ಸಂಬಂಧವಿರಿಸಿಕೊಂಡಿದ್ದ ವಿಚಾರ ತಿಳಿದ ಶಿವಣ್ಣ ಬುಧವಾರ ರಾತ್ರಿ ಇಬ್ಬರು ಒಟ್ಟಿಗೆ ಇರುವುದನ್ನು ನೋಡಿ ಉದ್ರಿಕ್ತನಾಗಿ ಬಸವಶೆಟ್ಟಿ ಮೇಲೆ ದೊಣ್ಣೆ, ಕಲ್ಲು, ಕತ್ತಿಯಿಂದ ಹೊಡೆದು ತೀವ್ರ ಗಾಯಗೊಳಿಸಿದ್ದಾನೆ. ಘಟನೆ ನಂತರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶಿವಣ್ಣನನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೌಭಾಗ್ಯಳ ಪತ್ನಿ ಶಿವಣ್ಣನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.