ಕಡ್ಡಾಯವಾಗಿ ಪಲ್ಸ್‌ ಪೋಲಿಯೋ ಲಸಿಕೆ ಹಾಕಿಸಿ: ಡೀಸಿ


Team Udayavani, Jan 20, 2020, 3:00 AM IST

kaddayavagi

ಚಾಮರಾಜನಗರ: ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಜಿಲ್ಲಾದ್ಯಂತ ಭಾನುವಾರದಿಂದ ನಾಲ್ಕು ದಿನಗಳವರೆಗೆ ಹಮ್ಮಿಕೊಳ್ಳಲಾಗಿರುವ ಪಲ್ಸ್‌ ಪೋಲಿಯೋದಲ್ಲಿ 5 ವರ್ಷದೊಳಗಿನ ಯಾವುದೇ ಮಗುವೂ ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ತಿಳಿಸಿದರು.

ಜಿಲ್ಲಾಡಳಿತ, ಜಿಪಂ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಗರದ ಬೀಡಿ ಕಾಲೋನಿಯ ಟಿಪ್ಪು ಮಸೀದಿ ಬಳಿಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಗುವಿನ ಬಾಯಿಗೆ ಪೋಲಿಯೋ ಲಸಿಕೆ ಹನಿ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಪೋಲಿಯೋ ಮುಕ್ತ ಅವಶ್ಯ: 2016ರಲ್ಲಿಯೇ ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರವೆಂದು ಘೋಷಿಸಲಾಗಿದ್ದು, ಪ್ರಸ್ತುತ ನಮ್ಮ ದೇಶದಲ್ಲಿ ಯಾವುದೇ ಪೋಲಿಯೋ ಪ್ರಕರಣ ವರದಿಯಾಗಿಲ್ಲ. ಹಾಗಿದ್ದರೂ ವಿದೇಶಿಯರಿಂದ ಮರುಕಳಿಸುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಪೋಲಿಯೋವನ್ನು ಶಾಶ್ವತವಾಗಿ ತಡೆಗಟ್ಟಲು ಆಗತಾನೇ ಹುಟ್ಟಿದ ಮಗುವಿನಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ತಪ್ಪದೇ ಹಾಕಿಸುವಂತೆ ವಿಶ್ವ ಆರೋಗ್ಯ ಸಂಸ್ಥೆ ಸಲಹೆ ಮಾಡಿದೆ ಎಂದರು.

ಗಮನಹರಿಸಿ: ಈ ಬಾರಿ ಒಂದೇ ಹಂತದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪೋಲಿಯೋ ಲಸಿಕೆ ನಿರ್ಲಕ್ಷಿ$Âಸಿದರೆ ಮಗುವಿಗೆ ಜೀವನ ಪರ್ಯಂತ ಅಂಗವಿಕಲತೆ ಕಾಡುತ್ತದೆ. ಮಗುವಿನ ತಾಯಂದಿರು, ಪೋಷಕರು ಇದಕ್ಕೆ ಸಹಕರಿಸಬೇಕು. ಜ.20, 21, 22ರಂದು ಪಟ್ಟಣದ ಮನೆಮನೆಗೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆ ಹಾಕುವ ಕಾರ್ಯಕ್ರಮವಿದೆ. ಜಿಲ್ಲೆಯಲ್ಲಿ 67,504 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಶೇ. 100 ಪ್ರಗತಿ ಸಾಧಿಸಲು ವಿಶೇಷ ಗಮನ ಹರಿಸಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ಬಿ.ಎಚ್‌.ನಾರಾಯಣರಾವ್‌, ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸುವುದರ ಮಹತ್ವವನ್ನು ನೆರೆಹೊರೆಯವರು ಸೇರಿದಂತೆ ಎಲ್ಲರಿಗೂ ತಿಳಿಸಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು ಎಂದರು. ನಗರಸಭೆ ಸದಸ್ಯ ಖಲೀಲ್‌ ಅಹಮದ್‌, ರಾಜ್ಯಮಟ್ಟದ ಪಲ್ಸ್‌ ಪೋಲಿಯೋ ವ್ಯವಸ್ಥಾಪಕ ವೆಂಕಟೇಶ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ. ರವಿ, ಜಿಲ್ಲಾ ಲಸಿಕಾ ಅಧಿಕಾರಿ ಡಾ.ವಿಶ್ವೇಶ್ವರಯ್ಯ, ಪಿಸಿಪಿಎನ್‌ಡಿಟಿ ಉಪನಿರ್ದೇಶಕರು ಹಾಗೂ

ಜಿಲ್ಲಾ ನೋಡೆಲ್‌ ಅಧಿಕಾರಿ ಡಾ.ಚಂದ್ರಕಲಾ, ಟಿಪ್ಪು ಮಸೀದಿ ಧರ್ಮಗುರು ಮೌಲಾನ ಸಮೀವುಲ್ಲಾ, ತಾಲೂಕು ವೈದ್ಯಾಧಿಕಾರಿ ಡಾ.ಶ್ರೀನಿವಾಸ್‌ ಇದ್ದರು. ಇದೇ ಸಂದರ್ಭದಲ್ಲಿ ಭಾರತ ಸರ್ಕಾರದ ಸಂಗೀತ ಮತ್ತು ನಾಟಕ ವಿಭಾಗದ ವತಿಯಿಂದ ಪಲ್ಸ್‌ ಪೋಲಿಯೋ ಕುರಿತು ಯಳಂದೂರಿನ ರಂಗದೇಗುಲ ಕಲಾವೇದಿಕೆ ಶಾಂತರಾಜು ಹಾಗೂ ತಂಡ ಬೀದಿನಾಟಕ ಪ್ರದರ್ಶನ ನಡೆಯಿತು.

ನಾಳೆ ವಿದ್ಯುತ್‌ ವ್ಯತ್ಯಯ
ಚಾಮರಾಜನಗರ: ತಾಲೂಕಿನ ಹರವೆ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ 220ಕೆವಿ ಮತ್ತು 66ಕೆವಿ ಒವರ್‌ಹೆಡ್‌ ಪ್ರಸರಣ ಮಾರ್ಗಗಳ ನಿರ್ವಹಣಾ ಕಾರ್ಯವನ್ನು ಜ. 21ರಂದು ಹಮ್ಮಿಕೊಳ್ಳಲಾಗಿದ್ದು ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಜ. 21ರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಉತ್ತುವಳ್ಳಿ, ಹೊಸಹಳ್ಳಿ, ದೇವಲಾಪುರ, ಉಡಿಗಾಲ, ಮೂಡ್ನಾಕೂಡು, ತಮ್ಮಡಹಳ್ಳಿ, ನಂಜದೇವನಪುರ, ವೀರನಪುರ, ಕಾಳನಹುಂಡಿ, ಉಗನೇದಹುಂಡಿ.

ಚಿಕ್ಕಕೆಂಪಿಹುಂಡಿ, ಬಡಗಲಪುರ, ಸಾಣೇಗಾಲ, ಲಕ್ಷ್ಮೀಪುರ, ಸಿದ್ದಲಿಂಗಪುರ, ಮಹದೇಶ್ವರ ಕಾಲೋನಿ, ಕೇತಹಳ್ಳಿ, ಸಾಗಡೆ, ಬೆಟ್ಟದಪುರ, ಕುಮಚಹಳ್ಳಿ, ಕೆಂಗಾಕಿ, ಬೊಕ್ಕೆಪುರ, ಹಳೀಪುರ, ಕಲ್ಪುರ, ದೇಸಿಗೌಡನಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಹರದನಹಳ್ಳಿ ಉಪವಿಭಾಗದ ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.