ಶುದ್ಧ ನೀರಿಗೆ ಮೀಟರ್‌ ಜೋಡಣೆ: ಖಂಡನೆ


Team Udayavani, Oct 6, 2019, 3:00 AM IST

shudda-nee

ಕೊಳ್ಳೇಗಾಲ: ನಗರಸಭೆಯಿಂದ 24*7 ಶುದ್ಧ ಕುಡಿಯುವ ನೀರಿನ ಯೋಜನೆಗೆ ಮೀಟರ್‌ ಜೋಡಣೆಯನ್ನು ಖಂಡಿಸಿ, ಶಾಸಕ ಎನ್‌.ಮಹೇಶ್‌ ವಿರುದ್ಧ ಪ್ರಗತಿಪರ ಸಂಘಟನೆಯ ಒಕ್ಕೂಟದಿಂದ ಶನಿವಾರ ಪ್ರತಿಭಟನೆ ನಡೆಯಿತು.

ಪಟ್ಟಣದ ಬಸ್‌ ನಿಲ್ದಾಣದ ಬಳಿಯ ಗಣೇಶನ ದೇವಾಲಯದಲ್ಲಿ ಪ್ರಗತಿಪರ ಸಂಘಟನೆ ಮುಖಂಡರು, ಸೇರಿ ಪ್ರಮುಖ ರಸ್ತೆಗಳ ಮೂಲಕ ತೆರಳಿ ಶಾಸಕ ಎನ್‌.ಮಹೇಶ್‌ ಮತ್ತು ನಗರಸಭೆಯ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತಾ, ಉಪ ವಿಭಾಗ ಕಚೇರಿಯ ಆವರಣದಲ್ಲಿ ಸೇರಿದರು.

ಪ್ರತಿಭಟನಾಕಾರರು ದೇವಸ್ಥಾನದ ಬಳಿಯಿಂದ ಹೊರಡುತ್ತಿದ್ದಂತೆ ಪಟ್ಟಣದ ಡಾ. ರಾಜ್‌ಕುಮಾರ್‌ ರಸ್ತೆಯಲ್ಲಿರುವ ಮಸೀದಿ ವೃತ್ತದಲ್ಲಿ ಮಾನವ ಸರಪಳಿ ರಚನೆ ಮಾಡಿ, ಕುಡಿಯುವ ನೀರು ಯೋಜನೆಗೆ ಮೀಟರ್‌ ಅಳವಡಿಕೆಯನ್ನು ಖಂಡಿಸಿ ತೀವ್ರ ವಿರೋಧ ವ್ಯಕ್ತಪಡಿಸಿದರು.

ನೀರನ್ನು ಉಚಿತವಾಗಿ ನೀಡಿ: ಈ ವೇಳೆ ಬೆಂಗಳೂರಿನ ಸಮಾಜ ಸೇವಕಿ ನಂದಿನಿ ಮಾತನಾಡಿ, ನೀರು, ಗಾಳಿ ಪ್ರಕೃತಿಯಿಂದ ಬಂದಿದೆ. ಆದರೆ, ನೀರು ಸರಬರಾಜಿನ ಹೆಸರಿನಲ್ಲಿ ಮೀಟರ ಅಳವಡಿಕೆ ಮಾಡಿ ಬಡವರನ್ನು ಶೋಷಣೆ ಮಾಡುತ್ತಿರುವುದು ಖಂಡನೀಯ. ಪ್ರಕೃತಿಯಿಂದ ಸಿಗುವ ನೀರನ್ನು ಸಾಮಾನ್ಯರಿಗೆ ಉಚಿತವಾಗಿ ನೀಡಲು ಶಾಸಕರು ಮತ್ತು ಜನಪ್ರತಿನಿಧಿಗಳು ಮುಂದಾಗಬೇಕು ಎಂದು ಒತ್ತಾಯಿಸಿದರು.

24*7 ನೀರು ಬೇಕಿಲ್ಲ: ಸಾರ್ವಜನಿಕರು ಕುಡಿಯುವ ನೀರನ್ನು 24*7 ಬಳಕೆ ಮಾಡುವುದಿಲ್ಲ. ಅವರಿಗೆ ಕುಡಿಯಲು ಎರಡರಿಂದ ಮೂರು ಗಂಟೆ ನೀರು ಪೂರೈಸಿದರೆ ಸಾಕು. ಈ ರೀತಿಯ ಯೋಜನೆಗಳನ್ನು ಜಾರಿಗೆ ತಂದು ಬಡವರನ್ನು ಶೋಷಣೆ ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ 2013ರಲ್ಲಿ ಈ ಯೋಜನೆ ಜಾರಿಗೆ ಬರದಂತೆ ಈಗಿನ ಶಾಸಕ ಎನ್‌.ಮಹೇಶ್‌ ಅವರು ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಆದರೆ, ಶಾಸಕರಾದ ಬಳಿಕ ಇದೇ ಯೋಜನೆಯನ್ನು ಅನುಷ್ಠಾನಕ್ಕೆ ತಂದು ಕಾಮಗಾರಿಗೆ ಚಾಲನೆ ನೀಡಿರುವುದು ಖಂಡನೀಯ. ಈ ಯೋಜನೆಯ ಮೂಲಕ ಉಚಿತವಾಗಿ ವಿತರಣೆ ಮಾಡಬೇಕೆ ಹೊರತು, ಮೀಟರ ಜೋಡಣೆ ಮಾಡಿದರೆ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಪ್ರತಿಭಟನಾಕಾರರುಉಪ ವಿಭಾಗಾಧಿಕಾರಿ ನಿಖೀತ ಎಂ.ಚಿನ್ನಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಅಧ್ಯಕ್ಷ ಗೌಡೇಗೌಡ, ಸಾಹಿತಿ ದೊಡ್ಡಲಿಂಗೇಗೌಡ ಮಾತನಾಡಿದರು.

ಪ್ರತಿಭಟನೆಯಲ್ಲಿ ಮೈಸೂರಿನ ಸಾಹಿತಿ ನಂಜರಾಜೇ ಅರಸ್‌, ಜೆಡಿಎಸ್‌ ಮುಖಂಡ ಮುಳ್ಳೂರು ಶಿವಮಲ್ಲು, ತಾಲೂಕು ನಾಗರಿಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ನಟರಾಜ ಮಾಳಿಗೆ, ಜಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರಭುಸ್ವಾಮಿ, ರೈತ ಸಂಘ ಹಸಿರು ಸೇನೆಯ ಜಿಲ್ಲಾ ಕಾರ್ಯಾಧ್ಯಕ್ಷ ಶೈಲೇಂದ್ರ, ನೀರಿಗಾಗಿ ಹಕ್ಕಿಗಾಗಿ ಆಂದೋಲನದ ಸಂಚಾಲಕರಾದ ನೀಲಯ್ಯ, ಶಿವಮ್ಮ, ಬೆಂಜಮಿನ್‌, ಸಣ್ಣಮ್ಮ, ಶಾರದ, ಮಹದೇವಮ್ಮ, ಫಾಯೂಕ್‌, ಗೌರಮ್ಮ, ಬಸವರಾಜು, ದಶರಥ್‌, ಕೆಂಪಣ್ಣ, ಮರಿಸಿದ್ದಯ್ಯ, ಚಿಕ್ಕಣ್ಣ, ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ನಿಂಗರಾಜು, ಪಾಪಣ್ಣ, ಶಿವರಾಜು ಹಾಗೂ ಮಹಿಳೆಯರು ಹಾಜರಿದ್ದರು.

ಟಾಪ್ ನ್ಯೂಸ್

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

ಸತ್ತೇಗಾಲ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 1.58 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

ಸತ್ತೇಗಾಲ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 1.58 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

1-weeeqwe

ಯಳಂದೂರು: ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ಅಕ್ರಮ ಮದ್ಯ ವಶ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.