ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಗೆ ಕರೆ ಮಾಡಿ ಅಭಿಪ್ರಾಯ ಕೇಳಿದ ಸಚಿವ ಸುರೇಶ್ ಕುಮಾರ್

ಪರೀಕ್ಷೆ ಬರೆದ ಖುಷಿಯಲ್ಲಿ ಮನೆಯಲ್ಲಿ ಪಾಯಸ ಮಾಡಿದ್ದಾರಾ? ನಮ್ಮ ಮನೆಯಿಂದ ಫೋನ್ ನಲ್ಲೇ ಕಳುಹಿಸಲಾ..!

Team Udayavani, Jul 4, 2020, 4:43 PM IST

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಗೆ ಕರೆ ಮಾಡಿ ಅಭಿಪ್ರಾಯ ಕೇಳಿದ ಸಚಿವ ಸುರೇಶ್ ಕುಮಾರ್

ಚಾಮರಾಜನಗರ: ಕೋವಿಡ್ -19 ಸೋಂಕು ಆತಂಕದ ನಡುವೆ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿದ ಸಮಾಧಾನದಲ್ಲಿರುವ ಸಚಿವ ಸುರೇಶ್ ಕುಮಾರ್ ಅವರು ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿನಿಗೆ ಕರೆ ಮಾಡಿ ಅಭಿಪ್ರಾಯ ಕೇಳಿದ್ದಾರೆ. ವಿದ್ಯಾರ್ಥಿನಿಗೆ ಕರೆ ಮಾಡಿ ಅಭಿಪ್ರಾಯ ಕೇಳಿರುವ ಸಚಿವರು ವಿದ್ಯಾರ್ಥಿ ವಲಯದಲ್ಲಿ ಹೊಸ ಹುರುಪು ಮೂಡಿಸಿದ್ದಾರೆ.

ಚಾಮರಾಜನಗರದ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಗೌರಿ ಎಂಬಾಕೆಗೆ ಸಚಿವರು ಕರೆ ಮಾಡಿದ್ದಾರೆ.

ಗೌರಿಯ ಪೋಷಕರು ಈ ಮೊದಲು ಕೋವಿಡ್ ಭೀತಿಯ ನಡುವೆ ಪರೀಕ್ಷೆ ನಡೆಸಬಾರದು. ಈಗ ಪರೀಕ್ಷೆಯನ್ನು ಮುಂದೂಡಬೇಕು ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು. ಇದನ್ನು ಗಮನಿಸಿದ್ದ ಸಚಿವರು ಅಂದೇ ಕರೆಮಾಡಿ ವಿದ್ಯಾರ್ಥಿಯ ದುಗುಡ ದೂರಮಾಡಿ ಧೈರ್ಯ ಹೇಳಿದ್ದರು.

ಎಸ್ಎಸ್ಎಲ್ ಸಿ ಪರೀಕ್ಷೆ ಮುಗಿದ ನಂತರ ಶುಕ್ರವಾರ ರಾತ್ರಿ ಕರೆ ಮಾಡಿ ಪರೀಕ್ಷೆ ಬಗ್ಗೆ ಅಭಿಪ್ರಾಯ ಕೇಳಿದ್ದಾರೆ. ಈಗ ನಿನ್ನ ಮನಸ್ಸಿನ ಭಾರ ಇಳಿಯಿತಾ? ಮನೆಯಲ್ಲಿ ರಾತ್ರಿ ಊಟಕ್ಕೆ ಪಾಯಸ ಮಾಡಿದ್ದಾರಾ? ನಮ್ಮ ಮನೆಯಲ್ಲಿ ಪಾಯಸ ಮಾಡಿದ್ದಾರೆ, ಫೋನ್ ನಲ್ಲೇ ಕಳುಹಿಸಲಾ ಎಂದು ತಮಾಷೆಯಾಗಿ ಮಾತನಾಡಿದರು.

ಮುಂದುವರಿದು, ಪರೀಕ್ಷೆ ಬರೆಯಲು ಧೈರ್ಯ ಬಂತು ತಾನೆ? ವಿಜ್ಞಾನ, ಗಣಿತ ಪರೀಕ್ಷೆಗಳು ಹೇಗಿತ್ತು? ಪರೀಕ್ಷಾ ಕೇಂದ್ರದ ವ್ಯವಸ್ಥೆಗಳು ಹೇಗಿದ್ದವು ಎಂದು ವಿಚಾರಿಸಿದ್ದಾರೆ. ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಬರುತ್ತದೆ. ಆಗ ನೀನೆ ನನಗೆ ಕರೆ ಮಾಡಿ ಹೇಳಬೇಕು. ಈಗ ಯಾವುದೇ ಆತಂಕ ಬೇಡ, ಚೆನ್ನಾಗಿ ನಿದ್ದೆ ಮಾಡು ಎಂದು ಧೈರ್ಯದ ಮಾತುಗಳನ್ನು ಹೇಳಿದ್ದಾರೆ.

ಪರೀಕ್ಷಾ ಸಮಯದಲ್ಲಿ ಕಲಿತ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದನ್ನು ಇನ್ನೂ ಮರೆಯಬಾರದು ಎಂದು ಸಲಹೆ ನೀಡಿದ್ದಾರೆ. ನಂತರ ಪೋಷಕರೊಂದಿಗೆ ಮಾತನಾಡಿ, ಎಸ್ಎಸ್ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ನಡೆಸಿ ನಾವು ಮಾದರಿಯಾಗಿದ್ದೇವೆ. ಬೇರೆ ರಾಜ್ಯಗಳು ನಮ್ಮನ್ನು ಅನುಸರಿಸುವಂತೆ ನಾವು ಮಾಡಿ ತೋರಿಸಿದ್ದೇವೆ. ನಿಮ್ಮ ಮಗಳನ್ನು ನಮ್ಮ ಮಗಳ ರೀತಿ ನೋಡಿಕೊಂಡಿದ್ದೇವೆ. ಮಗಳನ್ನು ಚೆನ್ನಾಗಿ ಬೆಳೆಸಿ, ವಿದ್ಯೆ ಕೊಡಿ ಎಂದು ಹಾರೈಸಿದರು.

ಸಚಿವರಾದವರು ಸಾಮಾನ್ಯರಿಗೂ ನೆನಪಿಸಿಕೊಂಡು ಕರೆ ಮಾಡಿರುವುದರಿಂದ ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.