ಧೈರ್ಯ ತುಂಬಿದ ಅಧಿಕಾರಿಗಳು
ಬೆಳತ್ತೂರಿಗೆ ಶಾಸಕ ನರೇಂದ್ರ, ಡೀಸಿ ರವಿ, ಎಸ್ಪಿ ಆನಂದಕುಮಾರ್ ಭೇಟಿ
Team Udayavani, May 9, 2020, 2:01 PM IST
ಸಾಂದರ್ಭಿಕ ಚಿತ್ರ
ಹನೂರು: ಬೆಂಗಳೂರಿನ ಮುಖ್ಯ ಪೇದೆ ಭೇಟಿ ನೀಡಿ ಹೋಗಿದ್ದ ತಾಲೂಕಿನ ಬೆಳತ್ತೂರು ಗ್ರಾಮಕ್ಕೆ ಶಾಸಕ ನರೇಂದ್ರ, ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ, ಎಸ್ಪಿ ಆನಂದಕುಮಾರ್ ಭೇಟಿ ನೀಡಿ ಗ್ರಾಮಸ್ಥರ ಕುಶಲೋಪರಿ ವಿಚಾರಿಸಿದರು.
ಪೇದೆಯ ಸಂಬಂಧಿಕರ ಮನೆಗೆ ಭೇಟಿ ನೀಡಿ ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ. ವರದಿ ನೆಗೆಟಿವ್ ಬಂದಿದೆ. ಸ್ವಲ್ಪದಿನ ಮನೆಯಲ್ಲಿಯೇ ಇರುವಂತೆ ತಿಳಿಸಿ, ಮನೆಮನೆಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಮಾಲೋಚಿಸಿ ಯಾರಿಗೂ ಯಾವುದೇ ಸೋಂಕು ಇಲ್ಲ. ಗೊಂದಲದಿಂದ ಆತಂಕ ಉಂಟಾಗಿತ್ತು. ಈಗ ಎಲ್ಲವೂ ಪರಿಹಾರವಾಗಿದೆ. ಎಲ್ಲರ ಮನಸ್ಸಿಗೆ ನೋವಾಗಿತ್ತು ನಿಜ. ಇದುವರೆಗೆ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿರಲಿಲ್ಲ. ಈಗ ನಡೆದ ಪ್ರಕರಣದಿಂದ ಜಿಲ್ಲೆಯ ಜನರು ಭೀತಿಗೆ ಒಳಗಾಗಿದ್ದರು. ಆದರೆ ವರದಿ ನೆಗೆಟಿವ್ ಬಂದಿರುವುದರಿಂದ ಇನ್ನು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಚಾಮರಾಜನಗರ ಜಿಲ್ಲೆ ಸುರಕ್ಷಿತವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದರು.
ಜಿಲ್ಲೆಯ ಜನರು ಲಾಕ್ಡೌನ್ ನಿಯಮ, ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದಾರೆ. ಜಿಲ್ಲಾಡಳಿತದ ಜೊತೆ ಇದುವರೆಗೂ ಸಹಕರಿಸುತ್ತಾ ಬಂದಿದ್ದಾರೆ. ವಯಸ್ಸಾದವರು, ಮಕ್ಕಳು ಎಚ್ಚರಿಕೆಯಿಂದ ಮನೆಯಲ್ಲಿಯೇ ಇರಬೇಕು. ಸಹಜವಾಗಿ ಎಲ್ಲಾ ಚಟುವಟಿಕೆಗಳಲ್ಲಿ ಇರಬೇಕು. ಆದರೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು. ಉಪವಿಭಾಗಾಧಿಕಾರಿ ನಿಖೀತಾ, ಡಿವೈಎಸ್ಪಿ ನವೀನ್ಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು