ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿ ನಿರಂಜನ್ ಕುಮಾರ್ ನೇಮಕ
Team Udayavani, Jul 28, 2020, 8:53 AM IST
ಚಾಮರಾಜನಗರ: ಗುಂಡ್ಲುಪೇಟೆ ಶಾಸಕ ಸಿ.ಎಸ್. ನಿರಂಜನ ಕುಮಾರ್ ಅವರನ್ನು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ (ಕೆಎಸ್ಎಫ್ಐಸಿ) ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಿರಂಜನ್ ಅವರು ಪ್ರಸ್ತುತ ವಿಧಾನಸಭೆಗೆ ಶಾಸಕರಾಗಿ ಪ್ರಥಮ ಬಾರಿಗೆ ಆರಿಸಿ ಬಂದಿದ್ದಾರೆ. ಜಿಲ್ಲೆಯ ಏಕೈಕ ಬಿಜೆಪಿ ಶಾಸಕರಾಗಿದ್ದಾರೆ. ಮೊದಲ ಪ್ರವೇಶದಲ್ಲೇ ನಿಗಮದ ಅಧ್ಯಕ್ಷರಾಗಿರುವುದು ವಿಶೇಷವಾಗಿದೆ.
ಕೆಎಸ್ಎಫ್ಐಸಿ ಅಧ್ಯಕ್ಷರಾಗಿ ನೇಮಕಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ನಿರಂಜನ್, ಮುಖ್ಯಮಂತ್ರಿಯವರು ಜವಾಬ್ದಾರಿಯುತ ಸ್ಥಾನವನ್ನು ನೀಡಿದ್ದಾರೆ. ಅವರಿಗೂ, ಪಕ್ಷಕ್ಕೂ, ಬಿಜೆಪಿ ರಾಜ್ಯಾಧ್ಯಕ್ಷರಿಗೂ ನನ್ನನ್ನು ಚುನಾಯಿಸಿದ ಗುಂಡ್ಲುಪೇಟೆ ಕ್ಷೇತ್ರದ ಜನತೆಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಎಲ್ಲರ ಮಾರ್ಗದರ್ಶನ ಪಡೆದು ಗುಂಡ್ಲುಪೇಟೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ