ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು

ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ನರೇಂದ್ರ ಅಭಿಮತ

Team Udayavani, Jul 26, 2019, 10:39 AM IST

cn-tdy-2

ಹನೂರು ತಾಲೂಕಿನ ಹೂಗ್ಯಂ ಗ್ರಾಮದಲ್ಲಿ 40 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ನರೇಂದ್ರ ಭೂಮಿಪೂಜೆ ನೆರವೇರಿಸಿದರು.

ಹನೂರು: ತಾಲೂಕಿನ ಗಂಗನದೊಡ್ಡಿ ಗ್ರಾಮಕ್ಕೆ ಆದರ್ಶ ಗ್ರಾಮ ಯೋಜನೆಯಡಿ 50 ಲಕ್ಷ, ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ 40 ಲಕ್ಷ ಮತ್ತು ಗ್ರಾಮದ ಸಂಪರ್ಕ ರಸ್ತೆಗೆ 30 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದ್ದು ಒಟ್ಟು 1.2 ಕೋಟಿ ಅನುದಾನವನ್ನು ಗಂಗನದೊಡ್ಡಿ ಗ್ರಾಮಕ್ಕೆ ನೀಡಲಾಗಿದೆ ಎಂದು ಶಾಸಕ ಆರ್‌.ನರೇಂದ್ರ ಹೇಳಿದರು.

ತಾಲೂಕಿನ ಗಂಗನದೊಡ್ಡಿ ಗ್ರಾಮದಲ್ಲಿ 40 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

1.2 ಕೋಟಿ ರೂ. ಅನುದಾನ: ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು ಕುಗ್ರಾಮವಾದ ಗಂಗನದೊಡ್ಡಿ ಗ್ರಾಮಕ್ಕೆ 1.2 ಕೋಟಿ ರೂ. ಅನುದಾನ ನೀಡಲಾಗಿದೆ. ಕಳೆದ 6 ವರ್ಷಗಳ ಅವಧಿಯಲ್ಲಿ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕ್ಷೇತ್ರ ವ್ಯಾಪ್ತಿಯ ಪ.ಜಾತಿ ಮತ್ತು ಪಂಗಡದ ಸಮುದಾಯದವರು ವಾಸಿಸುವ ಶೇ.90ರಷ್ಟು ಬಡಾವಣೆಗಳಲ್ಲಿ ಕಾಂಕ್ರೀಕ್‌ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡುವ ಮೂಲಕ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದರು.

ಈ ಹಿಂದೆ ಯಾವುದೇ ಒಂದು ರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿದ್ದರೆ ಇದು ಎಸ್‌.ಸಿ ಅಥವಾ ಎಸ್‌.ಟಿ ಸಮುದಾಯದವರು ವಾಸ ಮಾಡುವ ಬಡಾವಣೆಯೇ ಎಂದು ಪ್ರಶ್ನಿಸುವಂತಹ ಪರಿಸ್ಥಿತಿಯಿತ್ತು. ಆದರೆ ಇಂದು ಸುಸಜ್ಜಿತ ರಸ್ತೆ ಮತ್ತು ಚರಂಡಿ ಕಂಡರೆ ಇದು ಎಸ್‌.ಸಿ ಅಥವಾ ಎಸ್‌.ಟಿ ಜನಾಂಗದವರು ವಾಸಿಸುವ ಬಡಾವಣೆಯೇ ಎಂದು ಪ್ರಶ್ನಿಸುವಂತಾಗಿದೆ ಎಂದು ತಿಳಿಸಿದರು.

ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಲಿ: ಓರ್ವ ಜನಪ್ರತಿನಿಧಿಯಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ತರುವುದು ನನ್ನ ಕರ್ತವ್ಯವಾಗಿರುತ್ತದೆ. ಆದರೆ ಇಲಾಖೆಗಳಿಗೆ ತೆರಳಿ ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳನ್ನು ಸಂಪರ್ಕಿಸಿ ತಂದಂತಹ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕಾದ ಜವಾಬ್ದಾರಿ ಆಯಾ ಗ್ರಾಮಗಳ ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ಜವಾಬ್ದಾರಿಯಾಗಿರುತ್ತದೆ ಎಂದರು.

ಲೋಪದೋಷ ಕಂಡರೆ ತಿಳಿಸಿ:ಆದ್ದರಿಂದ ಕಾಮ ಗಾರಿಗಳು ಜರುಗುವ ವೇಳೆ ಯಾವುದೇ ಲೋಪ ದೋಷಗಳು ಕಂಡುಬಂದಲ್ಲಿ ಕೂಡಲೇ ತಮ್ಮ ಗಮನಕ್ಕೆ ತರಬೇಕು ಹಾಗೂ ಸಂಬಂಧಪಟ್ಟ ಗುತ್ತಿಗೆದಾರರೂ ಸಹ ಸಮರ್ಪಕವಾಗಿ ಕಾಮಗಾರಿ ನಿರ್ವಹಿಸಿ ಉತ್ತಮ ಗುಣಮಟ್ಟದ ಸಾಮಗ್ರಿಗಳನ್ನು ಬಳಕೆ ಮಾಡಬೇಕು ಮತ್ತು ಕ್ಯೂರಿಂಗ್‌ ಸಹ ಸಮರ್ಪಕವಾಗಿ ಜರುಗಬೇಕು. ಒಂದೊಮ್ಮೆ ಲೋಪದೋಷಗಳು ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದರು.

ಭೂಮಿಪೂಜೆ: ಇದೇ ವೇಳೆ ಗೋಪಿಶೆಟ್ಟಿಯೂರು ಗ್ರಾಮದಲ್ಲಿ 25 ಲಕ್ಷ ವೆಚ್ಚದ ಕಾಮಗಾರಿಗೆ, ನಲ್ಲೂರು ಗ್ರಾಮದಲ್ಲಿ 16 ಲಕ್ಷ ವೆಚ್ಚದ ಕಾಮಗಾರಿಗೆ, ಹೂಗ್ಯಂ ಗ್ರಾಮದಲ್ಲಿ 40 ಲಕ್ಷ ವೆಚ್ಚದ ಕಾಮಗಾರಿಗೆ ಹಾಗೂ ಚಿನ್ನಾರಿ ದೊಡ್ಡಿ ಗ್ರಾಮದಲ್ಲಿ 10 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಮೃತರ ಕುಟುಂಬಸ್ಥರಿಗೆ ಸಾಂತ್ವನ: ಅನಾರೋಗ್ಯದಿಂದ ಗ್ರಾಪಂ ಸದಸ್ಯ ಕೂಡ್ಲೂರು ಸಿದ್ಧರಾಜು ಅವರ ತಂದೆ ಮೃತ ಪಟ್ಟಿದ್ದ ಹಿನ್ನೆಲೆ ಅವರ ಮನೆಗೆ ಭೇಟಿ ನೀಡಿದ ಶಾಸಕ ನರೇಂದ್ರ ಮೃತರ ಭಾವಚಿತ್ರಕ್ಕೆ ಪುಷ್ಪಮಾಲಿಕೆ ಹಾಕಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.

ಜಿಪಂ ಅಧ್ಯಕ್ಷೆ ಶಿವಮ್ಮ ಕೃಷ್ಣ, ಸದಸ್ಯ ಬಸವರಾಜು, ತಾಪಂ ಅಧ್ಯಕ್ಷ ರಾಜೇಂದ್ರ, ಸದಸ್ಯರಾದ ನಟರಾಜು, ಹೂಗ್ಯಂ ಗ್ರಾಪಂ ಅಧ್ಯಕ್ಷೆ ರಾಜೇಶ್ವರಿ ಮಾದರಾಜು, ರಾಮಾಪುರ ಅಧ್ಯಕ್ಷೆ ನಲ್ಲಮ್ಮ, ಮುಖಂಡರಾದ ಪಾಳ್ಯ ಕೃಷ್ಣ, ಗುಂಡಾಪುರ ಜಯರಾಜು, ರಾಮಾಪುರ ನಾಗ ರಾಜು, ಗುತ್ತಿಗೆದಾರರಾದ ಅಜ್ಜೀಪುರ ನಾಗರಾಜು, ಕೊಳ್ಳೇಗಾಲ ಲೋಕೇಶ್‌, ಸತೀಶ್‌ ಇದ್ದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.