2 ತಾಲೂಕಿಗೆ ವರವಾದ ಬಹುಗ್ರಾಮ ಯೋಜನೆ


Team Udayavani, May 3, 2019, 11:59 AM IST

cham-1

ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕುಗಳಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಿದ್ದರಿಂದ ಈ ತಾಲೂಕುಗಳಲ್ಲಿ ಬೇಸಿಗೆಯಲ್ಲೂ ನೀರಿನ ಸಮಸ್ಯೆ ತಲೆದೋರಿಲ್ಲ. ಆದರೆ ಯಳಂದೂರು, ಕೊಳ್ಳೇಗಾಲ, ಹನೂರು ತಾಲೂಕಿನ ಅನೇಕ ಗ್ರಾಮಗಳಲ್ಲಿ ಅಂತರ್ಜಲ ಕುಸಿದು ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ.

ಮಳೆ ಕೊರತೆ ಪರಿಣಾಮ ಹನೂರು ಭಾಗದ ಸಾಕಷ್ಟು ಗ್ರಾಮಗಳಲ್ಲಿ ಅಂತರ್ಜಲ ಕ್ಷೀಣಿಸಿದ್ದು, ಕುಡಿ ವ ನೀರಿಗೆ ಸಮಸ್ಯೆ ಉಂಟಾಗಿದೆ. ಅರಣ್ಯದೊಳಗೆ, ಅರಣ್ಯದಂಚಿನಲ್ಲಿರುವ ಕೆಲ ಗ್ರಾಮಗಳಲ್ಲಿ ನೀರಿಗಾಗಿ ಜನರು ಪರಿತಾಪ ಪಡುವಂತಾಗಿದೆ.

ದೂರದೃಷ್ಟಿ ಫ‌ಲ: ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಚ್.ಎಸ್‌. ಮಹದೇವಪ್ರಸಾದ್‌ ಅವರ ದೂರದೃಷ್ಟಿಯ ಫ‌ಲವಾಗಿ, ಗುಂಡ್ಲುಪೇಟೆ ಹಾಗೂ ಚಾಮರಾಜನಗರ ತಾಲೂಕಿನ 297 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲಾಯಿತು. ಕಬಿನಿ ನದಿ ಮೂಲದಿಂದ ತಾಲೂಕಿನ ಹಲವು ಗ್ರಾಮಗಳಿಗೆ ನೀರೊದಗಿಸಲಾಯಿತು. 2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಯನ್ನು ಉದ್ಘಾಟಿಸಿದರು. ಎರಡು ತಾಲೂಕಿನ ಅನೇಕ ಗ್ರಾಮಗಳಲ್ಲಿ ಬೇಸಿಗೆ ಬಂದರೂ ನೀರಿನ ಅಭಾವವಿಲ್ಲದಂತೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ.

ತಾಂತ್ರಿಕ ಸಮಸ್ಯೆಯಿಂದ ನೀರಿಲ್ಲ: ಜಿಲ್ಲೆಯ ಕೊಳ್ಳೇ ಗಾಲ, ಹನೂರು ತಾಲೂಕಿಗೂ ಯೋಜನೆ ಜಾರಿ ಗೊಳಿಸಲು ಸರ್ಕಾರ ಮುಂದಾಗಿದೆ. ಆದರೆ ಯೋಜನೆ ಕಾರ್ಯಗತವಾಗುವವರೆಗೆ ನೀರಿಗೆ ಈ ಜನತೆ ಬವಣೆ ಅನುಭವಿಸಬೇಕಾಗಿದೆ. ಅಲ್ಲದೇ ಬಹುಗ್ರಾಮ ಯೋಜನೆಗೊಳಪಟ್ಟಿದ್ದರೂ ಕೆಲವು ಬೆರಳೆಣಿಕೆಯಷ್ಟು ಹಳ್ಳಿಗಳಲ್ಲಿ ಪೈಪ್‌ಲೈನ್‌ ಇತ್ಯಾದಿ ತಾಂತ್ರಿಕ ಸಮಸ್ಯೆ ಗಳಿಂದ ನೀರಿನ ಸಮಸ್ಯೆ ಉಂಟಾಗಬಹುದೆಂದು ನೀರು ನೈರ್ಮಲ್ಯ ಇಲಾಖೆ ತಿಳಿಸಿದೆ.

94 ಗ್ರಾಮಗಳಲ್ಲಿ ನೀರಿಗೆ ಪರಿತಾಪ: ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದಾದ 94 ಗ್ರಾಮಗಳ ಹೆಸರನ್ನು ಸಿದ್ಧಪಡಿಸಿದೆ. ಇದರಲ್ಲಿ ಚಾಮರಾಜನಗರ, ಗುಂಡ್ಲುಪೇಟೆ ತಾಲೂಕಿನ ಗ್ರಾಮಗಳೂ ಇವೆ. ಮಳೆ ಅಭಾವವೇನಾದರೂ ಉಂಟಾದರೆ ಈ 94 ಗ್ರಾಮಗಳಲ್ಲಿ ನೀರಿಗೆ ಅಭಾವ ಉಂಟಾಗಬಹುದೆಂದು ಅಂದಾಜಿಸಲಾಗಿದೆ. ಅವುಗಳಲ್ಲಿ ಕೆಲವು ಗ್ರಾಮಗಳೆಂದರೆ ಚಾಮರಾಜನಗರ ತಾಲೂಕಿನ ಹರವೆ, ಶಿವಪುರ, ಕೆ.ಕೆ. ಹುಂಡಿ, ಯಡಪುರ, ಮೂಡಲ ಅಗ್ರಹಾರ, ಹುಲ್ಲೇಪುರ, ಕರಿಯನಕಟ್ಟೆ, ಹೊಂಗನೂರು, ಕಾವುದವಾಡಿ. ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿ, ತೊಂಡವಾಡಿ, ಬೆಳವಾಡಿ ಹಿರೀಕಾಟಿ, ರಾಘವಾಪುರ, ಹನೂರು ತಾಲೂಕಿನ ಮಹದೇಶ್ವರ ಬೆಟ್ಟ, ವಡ್ಡರದೊಡ್ಡಿ, ಬಂಡಳ್ಳಿ, ಜಲ್ಲಿಪಾಳ್ಯ, ಹುತ್ತೂರು, ಕೌದಳ್ಳಿ, ನಾಲ್ರೋಡ್‌, ಬೈರನತ್ತ, ಕಳ್ಳಿದೊಡ್ಡಿ, ಪುದೂರು, ಕುರಟ್ಟಿ ಹೊಸೂರು. ಯಳಂದೂರು ತಾಲೂಕಿನ ಬಿಳಿಗಿರಿ ರಂಗನಬೆಟ್ಟ, ವಡಗೆರೆ, ಹೊನ್ನೂರು, ಯರಗಂಬಳ್ಳಿ ಹಾಗೂ ಮೆಲ್ಲಹಳ್ಳಿ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಯಾಗಬಹುದೆಂದು ವರದಿ ಸಲ್ಲಿಸಲಾಗಿದೆ.

ಅನುದಾನ ಬಿಡುಗಡೆ: ಇದಲ್ಲದೇ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದರೆ ಅದರ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಅಭಾವ ಪರಿಹಾರ ನಿಧಿಯಡಿ ಈಗಾಗಲೇ ಹನೂರು ಸೇರಿದಂತೆ ಕೊಳ್ಳೇಗಾಲ ತಾಲೂಕು ಹಾಗೂ ಯಳಂದೂರು ತಾಲೂಕಿಗೆ ತಲಾ 50 ಲಕ್ಷ ರೂ. ಹಾಗೂ ಚಾ.ನಗರ, ಗುಂಡ್ಲುಪೇಟೆ ತಾಲೂಕಿಗೆ ತಲಾ 25 ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ಅನುದಾನದಲ್ಲಿ ಕೊಳಬೆಬಾವಿ ಮರುಪೂರಣ, ಪೈಪ್‌ಲೈನ್‌ ಅಳವಡಿಕೆ, ದುರಸ್ತಿ ಕಾರ್ಯ ಸೇರಿದಂತೆ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ.

ಜಿಲ್ಲೆಯಲ್ಲಿ 2,646 ಕೊಳವೆಬಾವಿ ಸ್ಥಗಿತ
ಚಾಮರಾಜನಗರ: ಜಿಲ್ಲೆಯಲ್ಲಿ 130 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 902 ಗ್ರಾಮಗಳಿದ್ದು, ನದಿ ಮೂಲ, ಕೊಳವೆಬಾವಿ, ಓವರ್‌ ಹೆಡ್‌ ಟ್ಯಾಂಕ್‌ ಹಾಗೂ ಮಿನಿ ಟ್ಯಾಂಕ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 6962 ಸಾರ್ವಜನಿಕ ಕೊಳವೆಬಾವಿಗಳಿದ್ದು, ಇವುಗಳಲ್ಲಿ 4316 ಕೊಳವೆಬಾವಿಗಳು ಮಾತ್ರ ಚಾಲ್ತಿಯಲ್ಲಿವೆ. ಇನ್ನುಳಿದ 2646 ಕೊಳವೆಬಾವಿಗಳು ಕೆಟ್ಟಿವೆ. ಸಣ್ಣ ನೀರು ಸಬರಾಜು ಘಟಕಗಳು ಒಟ್ಟು 3060 ಇದ್ದು, ಈ ಪೈಕಿ 2418 ಘಟಕಗಳು ಚಾಲ್ತಿಯಲ್ಲಿವೆ. ಉಳಿದ 642 ಸ್ಥಗಿತಗೊಂಡಿವೆ. ಕೊಳವೆ ನೀರು ಸರಬರಾಜು ಘಟಕಗಳು ಒಟ್ಟು 11,285 ಇದ್ದು, ಈ ಪೈಕಿ 3534 ಸ್ಥಗಿತಗೊಂಡಿವೆ. ಉಳಿದ 7751 ಚಾಲ್ತಿಯಲ್ಲಿವೆ.
ಬೋರ್‌ವೆಲ್ ಕೊರೆಸಲು ಕ್ರಮ: ಡೀಸಿ ಕಾವೇರಿ
ಚಾಮರಾಜನಗರ:
ಜಿಲ್ಲೆಯಲ್ಲಿ ಬಹುತೇಕ ಪ್ರದೇಶಗಳಲ್ಲಿ ಕುಡಿಯುವ ನೀರಿನ ನಮಸ್ಯೆ ಇಲ್ಲ. ಒಂದು ವೇಳೆ ಮಳೆಯ ಅಭಾವ ಉಂಟಾದರೆ ತೊಂದರೆ ತಲೆದೋರಬಹುದೆಂದು ಮುಂಜಾ ಗ್ರತಾ ಕ್ರಮವಾಗಿ 91 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳು ಎಂದು ಗ್ರಾಮೀಣ ಕುಡಿಯುವ ನೀರು ಇಲಾಖೆಯಿಂದ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಾವೇರಿ ಉದಯವಾಣಿಗೆ ಮಾಹಿತಿ ನೀಡಿದರು.

ಸಮಸ್ಯಾತ್ಮಕವೆಂದು ಗುರುತಿಸಲಾದ ಗ್ರಾಮಗಳಲ್ಲಿ ಬೋರ್‌ವೆಲ್ ಕೊರೆಸಲು ಕ್ರಮ ಕೈಗೊಳ್ಳಲಾಗಿದೆ. ಟ್ಯಾಂಕರ್‌ ಮೂಲಕವೂ ನೀರು ಸರಬರಾಜು ಮಾಡಲು ಸನ್ನದ್ಧಗೊಳಿಸಲಾಗಿದೆ. ಮಹದೇಶ್ವರ ಬೆಟ್ಟದ ಮೆದಗನಾಣೆ ಗ್ರಾಮದಲ್ಲಿ ಬೋರ್‌ ಕೊರೆಯಲು ಅರಣ್ಯ ಇಲಾಖೆಯಿಂದ ಅನುಮತಿ ದೊರೆತಿದೆ. ಅಲ್ಲಿ ಬೋರ್‌ವೆಲ್ ಲಾರಿ ಹೋಗಲು ಸರಿಯಾದ ರಸ್ತೆಯಿಲ್ಲ. ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಮಹದೇಶ್ವರ ಬೆಟ್ಟದ ನಾಗಮಲೆಯಲ್ಲೂ ಕೂಡ ಬೋರ್‌ ವೆಲ್ ಕೊರೆಸಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.