ನಗರಸಭೆ ಅವ್ಯವಹಾರ ಎಸಿಬಿ ತನಿಖೆಗೆ
Team Udayavani, Dec 29, 2021, 2:48 PM IST
ಕೊಳ್ಳೇಗಾಲ: ನಗರಸಭೆಯಲ್ಲಿ ಕೋಟ್ಯಂತರ ರೂ. ಅವ್ಯವ ಹಾರ ನಡೆದಿದ್ದು, ಸದಸ್ಯರ ಒತ್ತಾ ಯದ ಮೇರೆಗೆ ಭ್ರಷ್ಟಾ ಚಾರ ನಿಗ್ರಹ ದಳ (ಎಸಿಬಿ) ತನಿಖೆಗೆ ವಹಿಸಲಾಗುವುದು ಎಂದು ನಗರಸಭೆ ಅಧ್ಯಕ್ಷ ಆರ್.ಸುಶೀಲಾ ಪ್ರಕಟಿಸಿದರು.
ನಗರಸಭೆಯಲ್ಲಿ ಅಧ್ಯಕ್ಷೆ ಸುಶೀಲ ನೇತೃತ್ವದಲ್ಲಿ ನಡೆದ ಸಮಾನ್ಯ ಸಭೆಯಲ್ಲಿ ಸದಸ್ಯರ ಒತ್ತಾಯದ ಮೇರೆಗೆ ಈ ಅವ್ಯವಹಾರವನ್ನು ಎಸಿಬಿಗೆ ವಹಿಸುವುದಾಗಿ ಘೋಷಿಸುತ್ತಿದ್ದಂತೆ ಸದಸ್ಯರು ಪಕ್ಷಾತೀತವಾಗಿ ಬೆಂಬಲ ಸೂಚಿಸಿದರು.
ನಗರಸಭಾ ಸದಸ್ಯ ಶಾಂತರಾಜು, ಎ.ಪಿ. ಶಂಕರ್ ಮತ್ತಿತರರು ಮಾತನಾಡಿ, ಶುದ್ಧ ಕುಡಿಯುವ ನೀರಿನಘಟಕ, ಕೊಳವೆ ಬಾವಿ, ಸ್ವತ್ಛತೆ ಇನ್ನಿತರಸೌಲಭ್ಯಗಳ ವಿಷಯದಲ್ಲಿ ಸಾಕಷ್ಟು ವಂಚನೆನಡೆದಿದ್ದು, ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದರು.
ಕುಡಿಯುವ ನೀರು: ಸಹಾಯಕ ಕಾರ್ಯ ಪಾಲಕ ಅಭಿಯಂತರರಾದ ಮಹಮ್ಮದ್ಅಲ್ತಾಪ್, ಸಹಾಯಕ ಇಂಜಿನಿಯರ್ ಸಿದ್ದಪ್ಪ ಅವರು ನಗರದಲ್ಲಿ ಕುಡಿಯುವ ನೀರು ಪೂರೈಸುವಲ್ಲಿ ಸಂಪೂರ್ಣ ವಿಫಲರಾಗಿದ್ದು, ಕೂಡಲೇ ಇವರನ್ನು ವರ್ಗಾಯಿಸಬೇಕು.ನೀರು ಸರಬರಾಜಿನಲ್ಲೂ ಅವ್ಯವಹಾರನಡೆದಿದ್ದು, ತನಿಖೆ ಮುಗಿಯುವವರೆಗೆಅಧಿಕಾರಿಗಳಿಗೆ ಸಂಬಳ ನೀಡಬಾರದೆಂದುಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿಅಧ್ಯಕ್ಷರು, ಈ ಬಗ್ಗೆ ಕ್ರಮವಹಿಸುವುದಾಗಿತಿಳಿಸಿದರು.
ಪೌರಾಯುಕ್ತರಿಗೆ ಸೂಚನೆ: ಪಟ್ಟಣದ 31 ವಾರ್ಡ್ಗಳಿಗೆ ಅಭಿವೃದ್ಧಿ ಕೆಲಸಗಳಿಗಾಗಿ ನಿಯೋಜಿಸಿರುವ ಎಲ್ಲಾ ಸಿಬ್ಬಂದಿಯನ್ನು ಪ್ರತಿದಿನ ಅಥವಾವಾರಕ್ಕೆ ಒಂದು ಬಾರಿ ಬದಲಾಯಿಸಿ ನಿಯಂತ್ರಣದಲ್ಲಿ ಇಟ್ಟುಕೊಳ್ಳುವಂತೆ ಅಧ್ಯಕ್ಷರು ಪೌರಾಯುಕ್ತರು ವಿಜಯ್ಗೆ ಸೂಚಿಸಿದರು. ಸಭೆಯಲ್ಲಿ ವ್ಯವಸ್ಥಾಪಕನಿಂಗರಾಜು, ನಗರಸಭಾ ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.
300 ರೂ.ಮೌಲ್ಯದ ಪಿಪಿಇ ಕಿಟ್ 2,400 ರೂ.ಗೆ ಖರೀದಿ : ಕೊರೊನಾ ಮೊದಲ ಹಾಗೂ 2ನೇ ಅಲೆ ವೇಳೆ ಪಿಪಿಇ ಕಿಟ್ಗಳನ್ನು ಖರೀದಿಸಲಾಗಿದೆ. ಕೇವಲ 300 ರೂ. ಸಿಗುವ ಪಿಪಿಇ ಕಿಟ್ಗಳನ್ನು 2,400 ರೂ. ಎಂದು ನಮೂದಿಸಿ ಸುಮಾರು 96,000 ರೂ ಖರ್ಚು ಮಾಡಿರುವ ಬಗ್ಗೆ ಅಧಿಕಾರಿಗಳು ಲೆಕ್ಕಪತ್ರ ತೋರುತ್ತಿದ್ದು, ಖರೀದಿಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ. ಈ ಬಗ್ಗೆಯೂ ತನಿಖೆ ನಡೆಸಬೇಕು ಎಂದು ನಗರಸಭೆ ಸದಸ್ಯರು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ