ಕೊಳ್ಳೇಗಾಲದಲ್ಲಿ ಪ್ರಾಬಲ್ಯ ತೋರಿದ ಎನ್.ಮಹೇಶ್ : ಬಿಜೆಪಿ ಜಯಭೇರಿ
Team Udayavani, Oct 31, 2022, 3:12 PM IST
ಕೊಳ್ಳೇಗಾಲ: ನಗರ ಸಭೆಯ ಏಳು ವಾರ್ಡುಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬಿಜೆಪಿ ಏಳು ವಾರ್ಡುಗಳ ಪೈಕಿ ಆರು ಸ್ಥಾನಗಳಲ್ಲಿ ಗೆದ್ದು ಬೀಗಿದೆ. ಕ್ಷೇತ್ರದ ಶಾಸಕ, ಮಾಜಿ ಸಚಿವ ಎನ್.ಮಹೇಶ್ ಪ್ರಾಬಲ್ಯ ತೋರುವಲ್ಲಿ ಯಶಸ್ವಿಯಾಗಿದ್ದಾರೆ.
ಬಿಜೆಪಿ ಅಭ್ಯರ್ಥಿಗಳಾದ ಪ್ರಕಾಶ್, ಮಾನಸ, ರಾಮಕೃಷ್ಣ, ನಾಸಿರ್ ಷರೀಫ್, ಪವಿತ್ರಾ, ನಾಗಸುಂದ್ರಮ್ಮ ಜಯಭೇರಿ ಬಾರಿಸಿದ್ದಾರೆ.
ಗೆಲುವಿನ ಬಳಿಕ ಬಿಜೆಪಿ ಸದಸ್ಯರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.ಶಾಸಕ ಎನ್.ಮಹೇಶ್ ಮಾತನಾಡಿ ಎಲ್ಲಾ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಕಾಂಗ್ರೆಸ್ ಒಂದು ಸ್ಥಾನ ಮಾತ್ರ ಗಳಿಸಿದ್ದು, 2ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭಾಗ್ಯ ಮಾತ್ರ ಜಯ ಸಾಧಿಸಿದ್ದಾರೆ.
ಶಾಸಕ ಎನ್.ಮಹೇಶ್ ಅವರನ್ನು ಬೆಂಬಲಿಸಿದ್ದ 7 ಮಂದಿ ನಗರಸಭೆ ಸದಸ್ಯರು ಅನರ್ಹಗೊಂಡಿದ್ದರು. ಎನ್.ಮಹೇಶ್ ಬಿಎಸ್ಪಿಯಿಂದ ಉಚ್ಚಾಟನೆಯ ಬಳಿಕ ಬಿಜೆಪಿ ಸೇರಿದ್ದರು. ಈ ವೇಳೆ ಬಿಎಸ್ಪಿ ವಿಪ್ ಉಲ್ಲಂಘಿಸಿ ಮತ ನೀಡಿದ ಹಿನ್ನೆಲೆಯಲ್ಲಿ ನಗರಸಭಾಧ್ಯಕ್ಷರ ಚುನಾವಣೆಯಲ್ಲಿ 7 ಮಂದಿ ಅನರ್ಹಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ