ಅರ್ಥಿಕ ಸದೃಢತೆಗೆ ತೆರಿಗೆ ಸಂಗ್ರಹಣೆ ಅಗತ್ಯ


Team Udayavani, May 19, 2019, 3:00 AM IST

arthika

ಚಾಮರಾಜನಗರ: ಗ್ರಾಮ ಪಂಚಾಯಿತಿಗಳ ಅರ್ಥಿಕ ಸದೃಢತೆಗೆ ತೆರಿಗೆ ಸಂಗ್ರಹಣೆ ಅವಶ್ಯವಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌. ಲತಾಕುಮಾರಿ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಗ್ರಾಪಂಗಳ ಬಿಲ್‌ ಕಲೆಕ್ಟರ್‌ಗಳು ಹಾಗೂ ಡಾಟಾ ಎಂಟ್ರಿ ಅಪರೇಟರ್‌ಗಳಿಗೆ 14ನೇ ಹಣಕಾಸು ಯೋಜನೆಯಡಿ ತಂತ್ರಾಂಶಗಳ ನಿರ್ವಹಣೆ ಮತ್ತು ತೆರಿಗೆ ನಿರ್ಧರಣೆ, ಪರಿಷ್ಕರಣೆ ಹಾಗೂ ವಸೂಲಾತಿ ಕುರಿತು ಅಯೋಜಿಸಲಾಗಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ತೆರಿಗೆ ಬಲವರ್ಧನೆ: ಗ್ರಾಮೀಣಾಭಿವೃದ್ಧಿಯಲ್ಲಿ ಗ್ರಾಪಂಗಳ ಪಾತ್ರ ಪ್ರಮುಖವಾಗಿದೆ. ಗ್ರಾಮಗಳಲ್ಲಿ ವಾಸಿಸುವ ಎಲ್ಲರೂ ಯಾವುದಾದರೊಂದು ತೆರಿಗೆ ಕಟ್ಟಲೇಬೇಕು. ತೆರಿಗೆಯಿಂದ ಯಾರು ಸಹ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮನೆ, ನೀರು, ನಿವೇಶನ ಸೇರಿದಂತೆ ಇತರೆ ಬಗೆಯ ಆಸ್ತಿಗಳಿಗೆ ಪ್ರತಿಯೊಬ್ಬರೂ ತೆರಿಗೆಯನ್ನು ಪಾವತಿಸಬೇಕಾಗಿದೆ.

ವಸೂಲಾದ ತೆರಿಗೆ ಹಣವನ್ನು ಸಂಗ್ರಹಿಸಿ ಗ್ರಾಮಗಳ ಜನೋಪಯೋಗಿ ಕಲ್ಯಾಣ ಕಾರ್ಯಕ್ರಮಗಳು ಹಾಗೂ ಗ್ರಾಮೀಣ ಮೂಲಭೂತ ಸೌಲಭ್ಯಗಳಿಗೆ ಬಳಸಿಕೊಳ್ಳಲಾಗುವುದು. ಆಗ ಅದು ಮಾದರಿ ಗ್ರಾಮವಾಗುವ ಮೂಲಕ ಗ್ರಾಪಂಗಳ ಬಲವರ್ಧನೆಗೂ ಸಹಕಾರಿಯಾಗುತ್ತದೆ ಎಂದರು.

ಇತಿಹಾಸ: ತೆರಿಗೆ ಎಂದರೆ ಕಾನೂನಾತ್ಮಕವಾಗಿ ಪ್ರತಿಯೊಬ್ಬರಿಂದ ಅವರ ಆಸ್ತಿ ಸೃಜನೆ ಆಧಾರದ ಮೇಲೆ ಕರ ವಸೂಲಿ ಮಾಡುವುದು ಎಂದರ್ಥ. ತೆರಿಗೆಗೂ ಇತಿಹಾಸವಿದೆ. ತೆರಿಗೆ ಸಂಗ್ರಹಣೆಯನ್ನು 5 ಸಾವಿರ ವರ್ಷಗಳ ಹಿಂದೆ ಈಜಿಪ್ಟ್ ದೇಶ ಜಾರಿಗೆ ತಂದಿತು.

ತದನಂತರ ಎಲ್ಲಾ ದೇಶಗಳು ಇದನ್ನು ಅಳವಡಿಸಿಕೊಂಡು ಪ್ರಗತಿಯ ಪಥದತ್ತ ಸಾಗುತ್ತಿವೆ. ವಿವಿಧ ರಾಷ್ಟ್ರಗಳು ತೆರಿಗೆ ಸಂಗ್ರಹಣೆಯನ್ನು ತಮ್ಮ ಅಭಿವೃದ್ಧಿಯ ಮೂಲವಾಗಿಸಿಕೊಂಡಿವೆ. ನಮ್ಮಲ್ಲಿ ಚಾಣಕ್ಯನ ತೆರಿಗೆ ನೀತಿ ಪ್ರಸಿದ್ಧವಾಗಿತ್ತು ಎಂದು ತಿಳಿಸಿದರು.

ಮಾಹಿತಿ ಕೊರತೆ: ಪ್ರತಿ ಅರ್ಥಿಕ ವರ್ಷದಲ್ಲಿ ಎಲ್ಲಾ ಗ್ರಾಮಪಂಚಾಯಿತಿಗಳಿಗೆ ನಿಗದಿತ ಕರ ವಸೂಲಾತಿಗಾಗಿ ಗುರಿ ನೀಡಲಾಗುತ್ತಿದೆ. 2018-19ನೇ ಸಾಲಿನಲ್ಲಿ ನಮ್ಮ ಜಿಲ್ಲೆಯಲ್ಲಿ ಗ್ರಾಪಂಗಳಿಂದ ಶೇ. 26ರಷ್ಟು ತೆರಿಗೆ ವಸೂಲಿಯಾಗಿದೆ.

ಇದು ಅತೀ ಕಡಿಮೆಯಗಿದೆ. ಗ್ರಾಪಂಗಳ ತೆರಿಗೆ ಸಂಗ್ರಾಹಕರು (ಬಿಲ್‌ ಕಲೆಕ್ಟರ್‌) ಹಾಗೂ ಡಾಟಾ ಎಂಟ್ರಿ ಅಪರೇಟರ್‌ಗಳಿಗೆ ಮಾಹಿತಿ ಅರಿವಿನ ಕೊರತೆ ಇರುವುದೇ ಇದಕ್ಕೆ ಮುಖ್ಯ ಕಾರಣವಾಗಿದ್ದು, ಈ ಪ್ರಸ್ತುತ ತರಬೇತಿ ಆಯೋಜನೆ ಮಾಡಲಾಗಿದೆ ಎಂದು ಸಿಇಒ ತಿಳಿಸಿದರು.

ತೆರಿಗೆ ಸಂಗ್ರಹಣೆಯನ್ನು ಸುಲಭೀಕರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಪರಿಷ್ಕೃತ ನಿರ್ದೇಶನ, ಸುತ್ತೋಲೆ‌ಗಳನ್ನು ಹೊರಡಿಸಿವೆ. ನಮ್ಮ ಗ್ರಾಪಂ ಅಧಿಕಾರಿ, ಸಿಬ್ಬಂದಿ ಅವುಗಳನ್ನು ಮನವರಿಕೆ ಮಾಡಿಕೊಳ್ಳಬೇಕು.

ಜವಾಬ್ದಾರಿ ಅರಿತು ಈ ಬಾರಿ ಗ್ರಾಪಂ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಣೆಯಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸುವಲ್ಲಿ ಸಕ್ರಿಯವಾಗಿ ಕಾರ್ಯೋನ್ಮುಖರಾಗಬೇಕು. ಇದರಿಂದ ಗ್ರಾಪಂಗಳು ಸ್ವಾವಲಂಬನೆ ಸಾಧಿಸಲು ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಸಂಪನ್ಮೂಲ ವ್ಯಕ್ತಿಗಳಾದ ಮೈಸೂರಿನ ಅಬ್ದುಲ್‌ ನಜೀರ್‌ಸಾಬ್‌ ಗ್ರಾಮೀಣಾಭಿವೃದ್ಧಿ (ಎಸ್‌.ಐ.ಆರ್‌.ಡಿ) ಸಂಸ್ಥೆಯ ಬೋಧಕ ಡಾ. ಜಿ.ಎಸ್‌. ಗಣೇಶ್‌ಪ್ರಸಾದ್‌, ಜಿ. ಮಲ್ಲಿಕಾರ್ಜುನಸ್ವಾಮಿ, ಗಿರಿಧರ್‌ 14ನೇ ಹಣಕಾಸು ಯೋಜನೆಯಡಿ ತಂತ್ರಾಂಶಗಳ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಮಾನಸಿಕ ಆರೋಗ್ಯ ಕೇಂದ್ರದ ಮನಶಾಸ್ತ್ರಜ್ಞ ಡಾ. ಭರತ್‌ ಅವರು ಗ್ರಾಪಂ ಕಾರ್ಯನಿರ್ವಹಣೆಯಲ್ಲಿ ಒತ್ತಡ ನಿರ್ವಹಣೆ ಕುರಿತು ಮಾತನಾಡಿದರು. ಜಿಪಂ ಉಪಕಾರ್ಯದರ್ಶಿ ಹನುಮನರಸಯ್ಯ, ಮುಖ್ಯ ಯೋಜನಾಧಿಕಾರಿ ಪದ್ಮಶೇಖರ್‌ ಪಾಂಡೆ ಇತರರು ಇದ್ದರು.

ಪ್ರಗತಿ ಗುರಿ: 14ನೇ ಹಣಕಾಸು ಯೋಜನೆಯಡಿ ಗ್ರಾಮಪಂಚಾಯಿತಿಗಳು ವಾರ್ಷಿಕ ಲೆಕ್ಕ ಪರಿಶೋಧನೆ ಮಾಡಿಸಿರಬೇಕು. ತಮ್ಮ ವ್ಯಾಪ್ತಿಯಲ್ಲಿ ನಿಗಧಿತ ಗುರಿಗಿಂತ ಹೆಚ್ಚಿನ ಕರ ವಸೂಲಾತಿಯಾಗಿರಬೇಕು. ಬಯಲು ಶೌಚಮುಕ್ತ ಗ್ರಾಮವಾಗಿಬೇಕು.

ಮಗುವಿಗೆ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಉತ್ತಮ ಪ್ರಗತಿ ಸಾಧಿಸಿರಬೇಕು. ಆಗ ಮಾತ್ರ ಸರ್ಕಾರದಿಂದ ಕಾರ್ಯಕ್ಷಮತೆ ನಿಧಿಯನ್ನು ಪ್ರೋತ್ಸಾಹಧನ ರೂಪದಲ್ಲಿ ಪಡೆಯಲು ಸಹಾಯವಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಲತಾಕುಮಾರಿ ಸೂಚನೆ ನೀಡಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.