ತಮಿಳುನಾಡಿನಿಂದ ಬರುವವರೆಗೂ ನೆಗೆಟಿವ್ ವರದಿ ಕಡ್ಡಾಯ
ಆರ್ಟಿಪಿಸಿಆರ್ ನೆಗೆಟಿವ್ ವರದಿ, ಲಸಿಕೆ ಪಡೆದಿರುವ ಬಗ್ಗೆ ತಪಾಸಣೆ ನಡೆಸಿ: ಡೀಸಿ
Team Udayavani, Aug 25, 2021, 4:55 PM IST
ಚಾಮರಾಜನಗರ: ತಮಿಳುನಾಡು ರಾಜ್ಯ ಸಂಪರ್ಕಿಸುವ ತಾಲೂಕಿನ ಗಡಿ ಭಾಗದ ಪುಣಜನೂರು ಚೆಕ್ಪೋಸ್ಟ್ಗೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಮಂಗಳವಾರ ಭೇಟಿ ನೀಡಿ ತಪಾಸಣಾ ಕಾರ್ಯವನ್ನು ಪರಿಶೀಲಿಸಿದರು.
ಚೆಕ್ ಪೋಸ್ಟ್ನಲ್ಲಿ ನಿರ್ವಹಿಸಲಾಗುತ್ತಿರುವ ತಪಾಸಣಾ ಕಾರ್ಯವನ್ನು ಜಿಲ್ಲಾಧಿಕಾರಿ ವೀಕ್ಷಿಸಿದರು. ಪ್ರತಿದಿನ ಎಷ್ಟು ವಾಹನಗಳು ಸಂಚರಿಸಿವೆ? ಸರಕು ಸಾಗಣೆ, ಅಗತ್ಯ ಸೇವೆಯ ವಾಹನಗಳು, ಇತರೆ ಖಾಸಗಿ ವಾಹನಗಳು ಎಷ್ಟು ಸಂಖ್ಯೆಯಲ್ಲಿ ಚೆಕ್ ಪೋಸ್ಟ್ ಮೂಲಕ ಹಾದು ಹೋಗಿವೆ ಎಂಬ ಬಗ್ಗೆ ಪರಿಶೀಲಿಸಿದರು.
ನಿತ್ಯ ಎಷ್ಟು ಜನ ಪ್ರಯಾಣಿಸುತ್ತಿದ್ದಾರೆ ಎಂಬ ಬಗ್ಗೆಯೂ ವಿವರ ಪಡೆದ ಜಿಲ್ಲಾಧಿಕಾರಿಯವರು ಚೆಕ್ಪೋಸ್ಟ್ ಮುಖೇನ ಸಂಚರಿಸಿರುವ ವಾಹನಗಳ ವಿವರವನ್ನು ನಮೂದು ಮಾಡಿರುವ ಪುಸ್ತಕವನ್ನು ಪರಿಶೀಲಿಸಿದರು. ತಮಿಳುನಾಡಿನಿಂದ ಜಿಲ್ಲೆಗೆ ಪ್ರವೇಶಿಸುವರರು ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿದ್ದರೂ ಕೂಡ 72 ಗಂಟೆಯೊಳಗೆ ಮಾಡಿಸಿದ ಆರ್ ಟಿಪಿಸಿಆರ್ ಪರೀಕ್ಷೆ ನೆಗೆಟಿವ್ ವರದಿ
ಕಡ್ಡಾಯವಾಗಿಹಾಜರುಪಡಿಸಲೇಬೇಕು.
ಇದನ್ನೂ ಓದಿ:ನಟಿ ಸಂಜನಾ ಗಲ್ರಾನಿಗೆ ಅನಾರೋಗ್ಯ| ಆಸ್ಪತ್ರೆಗೆ ದಾಖಲು
ಆರ್ಟಿಪಿಸಿಆರ್ ನೆಗೆಟಿವ್ ವರದಿ, ಲಸಿಕೆ ಪಡೆದಿರುವ ಬಗ್ಗೆ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ದಾಖಲೆಗಳು ನೈಜವಾಗಿವೆಯೇ ಎಂದು
ಖಾತರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಚೆಕ್ಪೋಸ್ಟ್ ಅಧಿಕಾರಿ ಸಿಬ್ಬಂದಿಗೆ ಸೂಚಿಸಿದರು.
ತಹಶೀಲ್ದಾರ್ ಚಿದಾನಂದ ಗುರುಸ್ವಾಮಿ, ತಾಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ಇತರೆ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ