ಕೊಳ್ಳೇಗಾಲದಲ್ಲಿ ನರೇಗಾ ಕುಂಟಿತ


Team Udayavani, Feb 15, 2019, 7:33 AM IST

kolle.jpg

ಚಾಮರಾಜನಗರ: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಹೆಚ್ಚು ಪ್ರಗತಿ ಸಾಧಿಸುವಂತೆ ಜಿಪಂ ಅಧ್ಯಕ್ಷೆ ಶಿವಮ್ಮ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕುವಾರು ಪ್ರಗತಿ ಪರಾಮರ್ಶಿಸಿದ ಜಿಪಂ ಅಧ್ಯಕ್ಷರು ಕೊಳ್ಳೇಗಾಲ ತಾಲೂಕು ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಗತಿ ಸಾಧನೆ: ತಾಪಂ ಇಒಗಳು ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಪ್ರಗತಿ ಕುಂಠಿತವಾಗಿರುವ ಬಗ್ಗೆ ಸೂಕ್ತ ಕಾರಣ ನೀಡಬೇಕು. ಕೆಲ ತಾಲೂಕುಗಳು ಹೆಚ್ಚಿನ ಪ್ರಗತಿ ಸಾಧಿಸಿವೆ. ಉಳಿದ ತಾಲೂಕುಗಳಲ್ಲಿ ಹಿಂದುಳಿದಿದೆ? ಪ್ರಗತಿ ಸಾಧನೆಗೆ ಎಷ್ಟು ಸಮಯಬೇಕಾಗಿದೆ ಎಂಬುದನ್ನು ಹೇಳಿ ಎಂದು ಪ್ರಶ್ನಿಸಿದರು.

ಇಒಗಳು ನಿಗಾವಹಿಸಲಿ: ಜಿಪಂ ಉಪಾಧ್ಯಕ್ಷ ಜೆ.ಯೋಗೀಶ್‌ ಮಾತನಾಡಿ, ಗ್ರಾಮ ಮಟ್ಟದಲ್ಲಿ ಅಧಿಕಾರಿಗಳು ಚೆನ್ನಾಗಿ ಕೆಲಸ ಮಾಡಿದರೆ ಪ್ರಗತಿ ಹೆಚ್ಚಳವಾಗುತ್ತದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಯೋಜನೆ ಬಗ್ಗೆ ಹೆಚ್ಚು ಕಾಳಜಿವಹಿಸಲು ತಾಪಂ ಇಒಗಳು ನಿಗಾವಹಿಸಬೇಕು ಎಂದರು. ಜಿಪಂ ಸಿಇಒ ಡಾ.ಕೆ.ಹರೀಶ್‌ಕುಮಾರ್‌ ಮಾತನಾಡಿ, ಪ್ರಗತಿ ಸಾಧನೆ ಹಿನ್ನಡೆಗೆ ಅಧಿಕಾರಿಗಳು ಅನಗತ್ಯವಾಗಿ ಸಬೂಬು ನೀಡಬಾರದು ಎಂದರು.

ಸಭೆಗೂ ಮೊದಲು ಸಾಕ್ಷರತೆ ಕುರಿತು ಭಿತ್ತಿಪತ್ರ ಹಾಗೂ ಮಡಿಕೆ ಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಜಿಪಂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಚೆನ್ನಪ್ಪ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಉಮಾವತಿ ಸಿದ್ದರಾಜು, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಮರಗದ ಮಣಿ, ಮುಖ್ಯ ಯೋಜನಾಧಿಕಾರಿ ಪದ್ಮಾಶೇಖರ್‌ ಪಾಂಡೆ ಇತರರು ಉಪಸ್ಥಿತರಿದ್ದರು.

ಬಿಳಿ ಚೀಟಿ ದಂಧೆ ಮಟ್ಟಹಾಕಿ
ಚಾಮರಾಜನಗರ:
ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಮಧ್ಯವರ್ತಿಗಳ ಅಕ್ರಮ ಬಿಳಿಚೀಟಿ ದಂಧೆಯಿಂದಾಗಿ ರೈತರಿಗೆ ಅನ್ಯಾಯವಾಗುತ್ತಿದ್ದು, ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಜಿಲ್ಲಾ ಪಂಚಾಯಿತಿ ತಂಡವೇ ಮಾರುಕಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಲಿದೆ ಎಂದು ಸಭೆಯಲ್ಲಿ ಎಚ್ಚರಿಕೆ ನೀಡಲಾಯಿತು.

ಕಳೆದ ಸಭೆಯಲ್ಲಿ ಹಲವು ಸದಸ್ಯರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಬಿಳಿ ಚೀಟಿ ದಂಧೆಯಲ್ಲಿ ಬೆಳೆ ಬೆಳೆದ ರೈತರಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಬಿಳಿಚೀಟಿ ಪ್ರದರ್ಶಿಸಿ, ಕ್ರಮಕ್ಕೆ ಒತ್ತಾಯಿಸಿದ್ದರು. ಬುಧವಾರ ನಡೆದ ಸಭೆಯಲ್ಲಿ ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ, ಎಷ್ಟು ಜನರ ಲೈಸೆನ್ಸ್‌ ರದ್ದು ಪಡಿಸಿದ್ದೀರಿ ಎಂಬ ಮಾಹಿತಿ ಕೇಳಿದಾಗ ಎಪಿಎಂಸಿ ವ್ಯವಸ್ಥಾಪಕರು ಉತ್ತರಿಸಲು ತಡಕಾಡಿದರು.

ತಂಡವೇ ಬೇಡಿ: ಆಗ ಮಾತನಾಡಿದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರು ಅವರ ವ್ಯವಹಾರವನ್ನು ಮಾರುಕಟ್ಟೆಯಿಂದ ಹೊರಗಡೆ ಇಟ್ಟುಕೊಳ್ಳಲಿ, ಮಾರುಕಟ್ಟೆ ಒಳಗೆ ಬೇಡ, ಮಾರುಕಟ್ಟೆ ಒಳಗೆ ಸರ್ಕಾರದ ನಿಯಮದಂತೆ ನಡೆಯಬೇಕು, ರೈತರಿಗೆ ಮೋಸ ತಪ್ಪಬೇಕು. ಸದಸ್ಯರ ಚರ್ಚೆಗೂ ಬೆಲೆ ಬರಬೇಕು, ಈ ಬಗ್ಗೆ ನೀವು ಕ್ರಮ ಕೈಗೊಳ್ಳದಿದ್ದರೆ, ನಮ್ಮ ತಂಡವೇ ಭೇಟಿ ನೀಡಿ ಪರಿಶೀಲಿಸಿ, ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಮುಂಗಾರು ಪ್ರಾರಂಭಕ್ಕೂ ಮುನ್ನ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಇಡುವಂತೆ ಕೃಷಿ ಇಲಾಖೆ ಉಪನಿರ್ದೇಶಕ ಎಂ. ತಿರುಮಲೇಶ್‌ ಅವರಿಗೆ ಸಭೆ ಸೂಚನೆ ನೀಡಿತು.  ಈ ಸಂದರ್ಭದಲ್ಲಿ ತಿರುಮಲೇಶ್‌ ಮಾತನಾಡಿ, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳ ಕೆಲವೆಡೆ,

ಮಾರ್ಚ್‌ ಕೊನೆ ಹಾಗೂ ಏಪ್ರಿಲ್‌ ಮೊದಲ ವಾರದಲ್ಲಿ ಮಳೆಯಾಗುವ ಸಂಭವವಿದ್ದು, ಮುಂಚಿತವಾಗಿ ನಮಗೆ ಬಿತ್ತನೆ ಬೀಜ, ಗೊಬ್ಬರ ನೀಡಲು ಸಂಬಂಧಪಟ್ಟವರಿಗೆ ತಿಳಿಸಬೇಕು ಎಂದು ಹೇಳಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ, ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವುದಾಗಿ ತಿಳಿಸಿದರು.

15 ದಿನಗಳಲ್ಲಿ ಸರ್ವೆ ಮುಗಿಸಿ: ತೋಟಗಾರಿಕೆ ಇಲಾಖೆಯಿಂದ ತೆಂಗು ಬೆಳೆ ನಾಶಕ್ಕೆ ಬಂದಿರುವ ಪರಿಹಾರವನ್ನು ಶೀಘ್ರ ಸರ್ವೆ ಮಾಡಿಸಿ, ರೈತರಿಗೆ ನೀಡಬೇಕು. ಇದು ವಿಳಂಬವಾಗುತ್ತಿರುವ ಬಗ್ಗೆ ಸಭೆಯಲ್ಲಿ ಬೇಸರ ವ್ಯಕ್ತವಾಯಿತು. ಇದಕ್ಕೆ ಉತ್ತರಿಸಿದ ತೋಟಗಾರಿಕೆ ಅಧಿಕಾರಿ ಈಗಾಗಲೇ 396 ಜನರ ತೋಟಗಳ ಸರ್ವೇ ನಡೆಸಿ, 70 ಜನರ ಖಾತೆಗಳಿಗೆ ಇನ್ನು ಮೂರು ದಿನದಲ್ಲಿ ಹಣ ಜಮಾ ಮಾಡಲಾಗುವುದು. ಉಳಿದವನ್ನು 15 ದಿನಗಳಲ್ಲಿ ಮುಗಿಸಲಾಗುವುದು ಎಂದು ಭರವಸೆ ನೀಡಿದರು. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.