ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮ


Team Udayavani, Jan 2, 2020, 3:00 AM IST

JILLEYALLI

ಯಳಂದೂರು: ತಾಲೂಕಿನಲ್ಲಿ 2020ರ ಹೊಸ ವರ್ಷಾಚರಣೆ ಪ್ರಯುಕ್ತ ಬುಧವಾರ ಯುವ ಸಮುದಾಯದ ಸಂಭ್ರಮ ಮುಗಿಲು ಮುಟ್ಟಿತು. ಮಂಗಳವಾರ ಮಧ್ಯರಾತ್ರಿ 12 ಗಂಟೆಯಾಗುತ್ತಿದ್ದಂತೆ ಪಟ್ಟಣ ಬಸ್‌ ನಿಲ್ದಾಣ, ಬಳೇಪೇಟೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಯುವಕರು ಪಟಾಕಿ ಸಿಡಿಸಿ, ನೃತ್ಯ ಮಾಡಿ ಸಂಭ್ರಮಿಸಿ ನೂತನ ವರ್ಷಕ್ಕೆ ಸ್ವಾಗತ ಕೋರಿದರು.

ಬಿಆರ್‌ಟಿಗೆ ಭಕ್ತರ ದಂಡು: ತಾಲೂಕಿನ ಪ್ರಸಿದ್ಧ ಗಿರಿಧಾಮವಾಗಿರುವ ಬಿಳಿಗಿರಿರಂಗನ ಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬಂದಿತು. ಮಂಗಳವಾರ ಸಂಜೆ ಅರಣ್ಯ ಇಲಾಖೆಯ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ಮಾಡಿ, ವಾಹನಗಳನ್ನು ಬಿಟ್ಟಿದ್ದರೂ. ಮದ್ಯಕ್ಕೆ ಕಡಿವಾಣ ಹಾಕಲು ಪೊಲೀಸ್‌ ಮತ್ತು ಅರಣ್ಯ ಇಲಾಖೆಯಿಂದ ಸಾಧ್ಯವಾಗಲಿಲ್ಲ. ಬೆಟ್ಟದ ಬಸ್‌ ನಿಲ್ದಾಣ, ದೊಡ್ಡ ತೇರಿನ ಬೀದಿ, ಬಿಳಿಗಿರಿ ಭವನದ ಮುಂಭಾಗವೂ ಸೇರಿದಂತೆ ಇದಕ್ಕಾಗಿಯೇ ಪ್ಲಾನ್‌ ಮಾಡಿಕೊಂಡು ಬಂದಿದ್ದ ಸಾವಿರಾರು ಯುವಕರು ಕುಡಿದು, ಕುಣಿದು ಕುಪ್ಪಳಿಸುವ ಮೂಲಕ ನೂತನ ವರ್ಷವನ್ನು ಸಂಭ್ರಮಿಸಿದರು. ಬೆಟ್ಟದಲ್ಲಿರುವ ಬಹುತೇಕ ಎಲ್ಲಾ ಪ್ರವಾಸಿ ಮಂದಿರಗಳು, ಲಾಡ್ಜ್ಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದವು.

ದೇಗುಲ ದರ್ಶನಕ್ಕೆ ಸರತಿ ಸಾಲು: ಮಂಗಳವಾರದಿಂದಲೇ ಬಿಳಿಗಿರಿರಂಗನ ಬೆಟ್ಟಕ್ಕೆ ತೆರಳುವವರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿತು. ವಾಹನ ದಟ್ಟಣೆಯಿಂದ ಕೆಲ ಕಾಲ ಸವಾರರು ಟ್ರಾಫಿಕ್‌ ಜಾಮ್‌ ಕಿರಿಕಿರಿ ಅನುಭವಿಸುವಂತಾಯಿತು. ವಾಹನವನ್ನು ಪಾರ್ಕಿಂಗ್‌ ಮಾಡಲು ಕೆಲವರು ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಬಿಳಿಗಿರಿರಂಗನಾಥ ಸ್ವಾಮಿಗೆ ವಿಶೇಷ ಅಲಂಕಾರ: ಬಿಳಿಗಿರಿ ರಂಗನಾಥ ಸ್ವಾಮಿ ದೇಗುಲದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಸರತಿ ಸಾಲಿನಲ್ಲಿ ನಿಂತ ಭಕ್ತರು ದೇವರ ದರ್ಶನ ಪಡೆದುಕೊಳ್ಳುತ್ತಿದ್ದರು. ಯಳಂದೂರು ಪಟ್ಟಣದಲ್ಲೂ ಹೊಸ ವರ್ಷದ ನಿಮಿತ್ತ ಗೌರೇಶ್ವರ, ಭೂ ಲಕ್ಷ್ಮೀ ವರಾಹಸ್ವಾಮಿ, ಗೋಡೆ ಗಣೇಶ, ಬಲಮುರಿ ವಿನಾಯಕ ಸೇರಿದಂತೆ ವಿವಿಧ ದೇಗುಲಗಳಲ್ಲಿ ಭಕ್ತರ ಸಂಖ್ಯೆ ಏರುಮುಖವಾಗಿತ್ತು. ಇದಕ್ಕಾಗಿ ದೇವರಿಗೆ ವಿಶೇಷ ಅಲಂಕಾರ ಮಾಡಿ, ಸಿಂಗರಿಸಲಾಗಿತ್ತು. ತಾಲೂಕಿನ ಕಂದಹಳ್ಳಿ ಮಹದೇಶ್ವರ ದೇಗುಲದಲ್ಲೂ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ರಾಜಕೀಯ ಮುಖಂಡರ ಭೇಟಿ: ಮಾಜಿ ಸಂಸದ ಆರ್‌. ಧ್ರುವನಾರಾಯಣ, ಜಿಪಂ ಸದಸ್ಯ ಜೆ.ಯೋಗೇಶ್‌, ಮಾಜಿ ಉಪಾಧ್ಯಕ್ಷೆ ಕೇತಮ್ಮ, ಸದಸ್ಯ ವಡಗೆರೆ ದಾಸ್‌, ತಾಪಂ ಸದಸ್ಯ ವೈ.ಕೆ.ಮೋಳೆ ನಾಗರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ವಿ. ಚಂದ್ರು ಸೇರಿದಂತೆ ಹಲವು ರಾಜಕೀಯ ಮುಖಂಡರು ಬಿಳಿಗಿರಿರಂಗನಾಥ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಹೊಸ ವರ್ಷದ ನಿಮಿತ್ತ ಯಳಂದೂರು ಪಟ್ಟಣದ ವೈನ್‌ ಅಂಗಡಿಗಳ ಮುಂದೆ ಜನ ಸಂದಣಿ ಅಧಿಕವಾಗಿತ್ತು. ಬೇಕರಿಗಳಲ್ಲಿ ಕೇಕ್‌ಗಳ ಮಾರಾಟ ಜೋರಾಗಿತ್ತು. ಹಣ್ಣಿನ ಅಂಗಡಿಗಳಲ್ಲಿ ಜನ ಜಂಗುಳಿ ಹೆಚ್ಚಾಗಿ ಕಂಡು ಬಂದಿದ್ದರಿಂದ ಇಲ್ಲಿನ ವ್ಯಾಪಾರಿಗಳಿಗೆ ಭರ್ಜರಿ ವ್ಯಾಪಾರವಾಯಿತು.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.