3ನೇ ದಿನವೂ ಪತ್ತೆಯಾಗದ ಹುಲಿ ಸುಳಿವು


Team Udayavani, Oct 12, 2019, 3:00 AM IST

3ne-dinavu

ಗುಂಡ್ಲುಪೇಟೆ: ತಿಂಗಳ ಅಂತರದಲ್ಲೇ ಇಬ್ಬರು ರೈತರನ್ನು ಕೊಂದ ಹುಲಿಯ ಸೆರೆಗಾಗಿ ತಾಲೂಕಿನ ಚೌಡಹಳ್ಳಿ- ಹುಂಡೀಪುರ ಸುತ್ತಮುತ್ತ ಅರಣ್ಯ ಇಲಾಖೆ ಬೀಡು ಬಿಟ್ಟಿದ್ದು, ಮೂರನೇ ದಿನದ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಿದೆ.

ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಕಾಡಂಚಿನ ಗ್ರಾಮವಾದ ಚೌಡಹಳ್ಳಿ-ಹುಂಡೀಪುರ ಗ್ರಾಮಗಳ ನಡುವಿನ ಬೆಟ್ಟ ಗುಡ್ಡಗಳು ಮತ್ತು ಜಮೀನಿನಲ್ಲಿ ಆಗಾಗ ಕಾಣಿಸಿಕೊಂಡು ಭಯಭೀತಿಗೊಳಿಸುತ್ತಿರುವ ಹುಲಿಯ ಹುಡುಕಾಟಕ್ಕೆ ಅರಣ್ಯ ಇಲಾಖೆ ಆರು ಸಾಕಾನೆಗಳು ಮತ್ತು ಡ್ರೋಣ್‌ ಕ್ಯಾಮೆರಾ ಮತ್ತು ಅರವತ್ತಕ್ಕೂ ಹೆಚ್ಚು ಮಂದಿ ಸಿಬ್ಬಂದಿಯನ್ನು ಬಳಕೆ ಮಾಡಿಕೊಂಡು ಹುಲಿ ಸೆರೆ ಹಿಡಿಯಲು ಶ್ರಮಿಸುತ್ತಿದೆ.

ಸುಳಿವು ಪತ್ತೆಯಾಗಿಲ್ಲ: ರೈತ ಶಿವಲಿಂಗಪ್ಪರನ್ನು ಕೊಂದಿದ್ದ ಚೌಡಹಳ್ಳಿ ಸಮೀಪದ ಜಮೀನಿನಿಂದ ಹುಂಡೀಪುರ, ಬೆಳವಾಡಿ, ಕೆಬ್ಬೇಪುರ, ಮಗುವಿನಹಳ್ಳಿ ಅರಣ್ಯ ಪ್ರದೇಶದ ಗುಡ್ಡಗಾಡು ಪ್ರದೇಶದಲ್ಲಿ ಬಂಡೀಪುರ ಸಮೀಪದ ಶ್ರೀರಾಂಪುರ ಸಾಕಾನೆ ಶಿಬಿರದ ಕ್ಯಾಪ್ಟನ್‌ ಅಭಿಮನ್ಯು, ಲಕ್ಷ್ಮೀ, ರೋಹಿತ್‌, ಗಣೇಶ್‌, ಗೋಪಾಲಕೃಷ್ಣ ಮತ್ತು ಜಯಪ್ರಕಾಶ್‌ ಹೆಸರಿನ ಸಾಕಾನೆಗಳ ಸಹಾಯದಿಂದ ಹುಲಿಯ ಹುಡುಕಾಟ ನಡೆಸಲಾಯಿತು. ಆದರೂ ಸಹ ಚಾಲಾಕಿ ಹುಲಿಯ ಸುಳಿವು ಪತ್ತೆಯಾಗಿಲ್ಲ.

ಮೂರು ತಂಡ ರಚನೆ: ಚೌಡಹಳ್ಳಿಯ ರೈತ ಶಿವಲಿಂಗಪ್ಪರನ್ನು ಕೊಂದ ಜಾಗದ ಸಮೀಪದ ಗುಡ್ಡದಲ್ಲಿ ಹುಲಿ ಹೋಗುತ್ತಿರುವುದು ಕಂಡು ಬಂದಿತ್ತು. ಅದರ ಹೆಜ್ಜೆ ಗುರುತನ್ನು ಪತ್ತೆ ಹಚ್ಚಿದ ಸಿಬ್ಬಂದಿ ಸರಿ ಸುಮಾರು ಮೂರು ತಂಡಗಳಲ್ಲಿ 10 ಕಿ.ಮೀ.ಗಳಿಗೂ ಹೆಚ್ಚು ಕುರುಚಲು ಅರಣ್ಯ ಪ್ರದೇಶದಲ್ಲಿ ಜಾಲಾಡಿದರೂ ಸಹ ಹುಲಿ ಪತ್ತೆಯಾಗಿಲ್ಲ. ಆದರೆ ಯಾವ ಹುಲಿ ಒಂಟಿಯಾಗಿ ಬಂದು ದಾಳಿ ಮಾಡುತ್ತಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿಗೆ ಗೊತ್ತಾಗುತ್ತಿಲ್ಲ. ಒಂಟಿ ಹುಲಿಯು ಕಂಡು ಬಂದರೆ ಮತ್ತು ಬರುವ ಇಂಜಕ್ಷನ್‌ನ್ನು ಶೂಟ್‌ ಮಾಡಿ ಸೆರೆ ಹಿಡಿಯಲು ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದೆ. ಆದರೆ ಹುಲಿಯೇ ಕಾಣುತ್ತಿಲ್ಲ.

ಬೋನಿಗೂ ಬೀಳದ ಹುಲಿರಾಯ: ರೈತನನ್ನು ಕೊಂದು ನಾಪತ್ತೆಯಾಗಿರುವ ಹುಲಿ ಸೆರೆಗಾಗಿ ಚೌಡಹಳ್ಳಿ ಸಮೀಪ ಬೋನನ್ನು ಇಟ್ಟು ಅದರಲ್ಲಿ ಮಾಂಸವನ್ನು ಕಟ್ಟಿ ಮಾಂಸದ ವಾಸನೆಯಿಂದ ಹುಲಿ ಬಂದು ಬೋನಿಗೆ ಬೀಳುತ್ತದೆ ಎಂದು ಕಾಯುತ್ತಿರುವ ಸಿಬ್ಬಂದಿಗೆ ಕಿಲಾಡಿ ಹುಲಿ ಚಳ್ಳೆಹಣ್ಣು ತಿನ್ನಿಸುತ್ತಿದೆ. ಕಳೆದ ಮೂರು ರಾತ್ರಿಯಿಂದಲೂ ಹುಲಿ ಈ ಬೋನಿನ ಪಕ್ಕಕ್ಕೂ ಬಂದಿಲ್ಲದಿಲ್ಲ.

ಜನರಲ್ಲಿ ನಿಲ್ಲದ ಆತಂಕ: ಈಗಾಗಲೇ ಕೇವಲ ಜಾನುವಾರುಗಳನ್ನು ಕೊಲ್ಲುತ್ತಿದ್ದ ಹುಲಿ ರೈತರಿಬ್ಬರನ್ನು ಬಲಿ ಪಡೆದಿದ್ದು, ಈ ಭಾಗದ ಜನರಲ್ಲಿ ಆತಂಕ ಹೆಚ್ಚಾಗಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ಕಾಯಲು ಜಮೀನಿಗೆ ಹೋಗದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಸುತ್ತಮುತ್ತಲಿನ ಗ್ರಾಮಸ್ಥರ ಒತ್ತಡಕ್ಕೆ ಮಣಿದ ಅರಣ್ಯ ಇಲಾಖೆ ತಾತ್ಕಾಲಿಕ ಕ್ಯಾಂಪ್‌ ಹಾಕಿಕೊಂಡು 24 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸುತ್ತಿದ್ದರೂ ಹಜುಲಿ ಗುರುತು ಸಹ ಪತ್ತೆಯಾಗಿಲ್ಲ. ಸುತ್ತಮುತ್ತಲ ಗ್ರಾಮಸ್ಥರಲ್ಲಿ ಮೂಡಿರುವ ಆತಂಕ ಇನ್ನೂ ದೂರವಾಗಿಲ್ಲ.

ಹುಲಿ ಸೆರೆ ಹಿಡಿಯುವ ವಿಶ್ವಾಸ: ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಟಿ.ಬಾಲಚಂದ್ರ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಮೂರು ತಂಡಗಳಲ್ಲಿ ಆರು ಸಾಕಾನೆಗಳನ್ನು ಬಳಸಿಕೊಂಡು ಅಕ್ಕ-ಪಕ್ಕ ಜಮೀನಿನಲ್ಲಿ ಮತ್ತು ಅರಣ್ಯದಂಚಿನಲ್ಲಿ ಶೋಧ ಕಾರ್ಯ ಮುಂದುವರೆದಿದೆ. ಸುಮಾರು 200ಕ್ಕೂ ಹೆಚ್ಚು ಕ್ಯಾಮೆರಾಗಳನ್ನು ಹುಲಿ ಓಡಾಟದ ಸ್ಥಳದಲ್ಲಿರುವ ಮರಗಳಲ್ಲಿ ಕಟ್ಟಿದ್ದು, ಯಾವುದೇ ಹುಲಿಯ ಓಡಾಟದ ಚಿತ್ರಗಳು ಸೆರೆಯಾಗಿಲ್ಲ. ಆದರೆ ಗ್ರಾಮದಲ್ಲಿ ಜೀವ ಭಯದಲ್ಲಿರುವ ಗ್ರಾಮಸ್ಥರ ಒತ್ತಾಯಕ್ಕೆ ಬೆಲೆಕೊಟ್ಟಿರುವ ಅರಣ್ಯ ಇಲಾಖೆ ಹಗಲು ರಾತ್ರಿ ಶ್ರಮಿಸುತ್ತಿದೆ. ಈ ಬಾರಿ ಯಾವುದೇ ಕಾರಣಕ್ಕೂ ಕಾರ್ಯಾಚರಣೆಯನ್ನು ಕೈಬಿಡದೇ ಹುಲಿಯನ್ನು ಸೆರೆ ಹಿಡಿಯುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.