ಕಟ್ಟಡ ಕಾಮಗಾರಿ ಸ್ಥಳ ಬದಲಾವಣೆಗೆ ಸೂಚನೆ
Team Udayavani, Jun 29, 2021, 12:40 PM IST
ಯಳಂದೂರು: ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯ ಸ್ಥಳವನ್ನು ಶಾಸಕ ಎನ್. ಮಹೇಶ್ ಬದಲಿಸುವಂತೆ ಸೋಮವಾರ ಸೂಚಿಸಿದ್ದಾರೆ.
ಈ ಬಗ್ಗೆ ಸೋಮವಾರ “ಉದಯವಾಣಿ’ಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಕೊಠಡಿ ನಿರ್ಮಾಣ ಬೇಡ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಗೊಂಡಿತ್ತು.
ಶಾಸಕ ಎನ್. ಮಹೇಶ್ ಇದಕ್ಕೆ ಭೂಮಿ ಪೂಜೆ ನೆರವೇರಿಸಲು ಸೋಮವಾರ ಆಗಮಿಸಿದ್ದರು. ನಂತರ ಈ ಕಟ್ಟಡ ಸಮುಚ್ಚಯದಲ್ಲಿರುವ ನಿರುಪಯುಕ್ತವಾದ 2 ಕೊಠಡಿಗಳು ಶಿಥಿಲಗೊಂಡಿವೆ. ಇದು ಬೀಳುವ ಸ್ಥಿತಿಯಲ್ಲಿದ್ದು ಈ ಸ್ಥಳದಲ್ಲಿ ಹೊಸ ಕಟ್ಟಡ ನಿರ್ಮಿಸಬೇಕೆಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಇದನ್ನು ಪರಿಶೀಲಿಸಿದ ಶಾಸಕರು, ಸಂಬಂಧಪಟ್ಟ ಲೊಕೋಪಯೋಗಿ ಇಲಾಖೆಯ ಎಇಇ ಹಾಗೂ ಜೆಇಗೆ ಸೂಚನೆ ನೀಡಿ ಇದನ್ನು ಕೆಡವಿ ಈ ಸ್ಥಳದಲ್ಲಿ ಕಟ್ಟಡ ನಿರ್ಮಾಣ ಮಾಡಿ ಎಂದು ಸೂಚಿಸಿದರು.
ನಂತರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, 1 ಕೋಟಿ ರೂ. ವೆಚ್ಚದಲ್ಲಿ ನಬಾರ್ಡ್ ಯೋಜನೆಯಡಿ ಪದವಿ ಪೂರ್ವ ಶಿಕ್ಷಣದ ವಿಜ್ಞಾನ ವಿಭಾಗಕ್ಕೆ 2 ಕೊಠಡಿ, ಲ್ಯಾಬ್ ಹಾಗೂ ಶೌಚಗೃಹನಿರ್ಮಾಣಕ್ಕೆ ಹಣ ಬಿಡುಗಡೆಯಾಗಿದೆ ಎಂದರು.
ಲೋಕೋಪಯೋಗಿ ಇಲಾಖೆಯ ಎಇಇ ರಾಮಸ್ವಾಮಿ, ತಹಶೀಲ್ದಾರ್ ಜಯಪ್ರಕಾಶ್, ಮುಖ್ಯಾಧಿಕಾರಿ ಎಂ.ಸಿ. ನಾಗರತ್ನ, ಪ್ರಾಂಶುಪಾಲ ಬಂಗಾರನಾಯಕ, ಉಪಪ್ರಾಂಶುಪಾಲ ನಂಜುಂಡಸ್ವಾಮಿ, ವೈ.ಎಂ. ಮಲ್ಲಿಕಾರ್ಜುನಸ್ವಾಮಿ ಸರ್ಕಾರಿ ಪ್ರಥಮದರ್ಜೆಕಾಲೇಜುಪ್ರಾಂಶುಪಾಲ ಡಾ|ನೀಲಕಂಠಸ್ವಾಮಿ, ಪಪಂ ನಾಮ ನಿರ್ದೇಶಿತ ಸದಸ್ಯರಾದ ಮಹೇಶ್, ರಘು,ಮಹದೇವಸ್ವಾಮಿ, ಮಾಂಬಳ್ಳಿ ರಾಮು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ