ಉದಯವಾಣಿ ವರದಿ ಫಲಶ್ರುತಿ: ಸೀಲ್ ಡೌನ್ ಪ್ರದೇಶದಲ್ಲಿ ಕಟ್ಟುನಿಟ್ಟಿನ ನಿಗಾ ಜಾರಿ
Team Udayavani, Jul 1, 2020, 8:04 PM IST
ಚಾಮರಾಜನಗರ: ಸೀಲ್ಡೌನ್ ಆಗಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದ ನಗರದ ಭ್ರಮರಾಂಬ ಬಡಾವಣೆ 6ನೇ ಕ್ರಾಸಿನಲ್ಲಿ, ಉದಯವಾಣಿ ವರದಿಯಿಂದ ಎಚ್ಚೆತ್ತು ಗುರುವಾರದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಸೀಲ್ಡೌನ್ ಆದ ಪ್ರದೇಶದಲ್ಲಿ ಓರ್ವ ಉಸ್ತುವಾರಿ ಅಧಿಕಾರಿ ಇದ್ದು ಆ ಪ್ರದೇಶದ ಜನರ ಅಗತ್ಯತೆಗಳ ಬಗ್ಗೆ ನಿಗಾ ವಹಿಸಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ಇರಬೇಕು. ಪೊಲೀಸರ ಕಾವಲು ಇರಬೇಕು. ಆದರೆ, ಮಂಗಳವಾರ ಯಾರೂ ಇಲ್ಲದೇ ಬ್ಯಾರಿಕೇಡ್ ಮಾತ್ರ ನೆಪಕ್ಕೆ ಇತ್ತು. ಈ ಕುರಿತು ಉದಯವಾಣಿಯಲ್ಲಿ ಬುಧವಾರ ವರದಿ ಪ್ರಕಟವಾಗಿತ್ತು.
ಇದರಿಂದ ಎಚ್ಚೆತ್ತ ಅಧಿಕಾರಿಗಳು ಸ್ಥಳದಲ್ಲಿ ಓರ್ವ ಉಸ್ತುವಾರಿ ಅಧಿಕಾರಿಯನ್ನು ನೇಮಿಸಿ, ಪೊಲೀಸ್ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಿದರು. ನಗರಸಭೆಯಿಂದ ಆ ರಸ್ತೆಯನ್ನು ಸ್ಯಾನಿಟೈಸ್ ಮಾಡಲಾಯಿತು. ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ