ವೃದ್ಧೆಗೆ ಒದ್ದು ಕಾಲುಮುರಿದ ಒಂಟಿ ಸಲಗ

ಸೊಂಡಲಿನಿಂದ ತಿವಿದು, ಒದ್ದು ಓಡಿಹೋಯಿತು. ಸಲಗದ ಒದೆತ ದಿಂದ ತೀವ್ರ ಗಾಯಗೊಂಡು ವೃದ್ದೆ ಜ್ಞಾನತಪ್ಪಿದರು.

Team Udayavani, Apr 27, 2022, 5:40 PM IST

ವೃದ್ಧೆಗೆ ಒದ್ದು ಕಾಲುಮುರಿದ ಒಂಟಿ ಸಲಗ

ಹುಣಸೂರು: ಒಂಟಿಕೊಂಬಿನ ಸಲಗದ ದಾಳಿಗೆ ವೃದ್ಧೆಯೊಬ್ಬರು ಕಾಲು ಮುರಿದುಕೊಂಡಿರುವ ಘಟನೆ ಹನಗೋಡು ಭಾಗದ ಹರಳಹಳ್ಳಿ ಬಳಿ ನಡೆದಿದೆ. ಸೋಮವಾರದಂದು ಮೂರು ಕಾಡಾನೆಗಳ ಹಿಂಡು ಜನರಿಂದ ಕಾಡಿಸಿಕೊಂಡು ರಾತ್ರಿ ಕಾಡು ಸೇರಿಕೊಂಡರೆ, ಮಂಗಳವಾರ ಹನಗೋಡು ಭಾಗದ ಹರಳಹಳ್ಳಿ ಬಳಿಯಿಂದ ಒಂಟಿ ಕೊಂಬಿನ ಸಲಗವು ಜನರನ್ನು ಕಾಡಿಸಿದ್ದಲ್ಲದೆ, ದನಗಾಹಿ ವೃದ್ಧ ಮಹಿಳೆ ಹರಳಹಳ್ಳಿಯ ಪುಟ್ಟಲಕ್ಷ್ಮಮ್ಮ (60) ಮೇಲೆ
ದಾಳಿ ನಡೆಸಿ, ನಾಗಾಪುರದ ವುಡ್‌ ಲಾಟ್‌ನಲ್ಲಿ ಸೇರಿಕೊಂಡರೂ ರಾತ್ರಿ ವೇಳೆಗೆ ಉದ್ಯಾನದ ರೈಲ್ವೆ ಹಳಿ ಗೇಟ್‌ ತೆರೆದು ಕಾಡಿಗೆ ಸೇರಿಸುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾದರು.

ದನಗಳಂತೆ ಅಟ್ಟಾಡಿಸಿದರು: ಇಲ್ಲಿ ಕಾಡಾನೆಗಳ ನಿತ್ಯ ಹಾವಳಿಯಾದರೂ ಮಂಗಳವಾರ ಮಾತ್ರ ಒಂಟಿ ಕೊಂಬಿನ ಸಲಗ ಕಾಣಿಸಿಕೊಂಡು ಗ್ರಾಮ ಸ್ಥರಲ್ಲಿ ಭೀತಿ ಹುಟ್ಟಿಸಿತ್ತು. ವಿಷಯ ತಿಳಿಯುತ್ತಿದ್ದಂತೆ ಅಕ್ಕಪಕ್ಕದ 500ಕ್ಕೂ ಹೆಚ್ಚು ಗ್ರಾಮಸ್ಥರು, ಯುವ ಪಡೆ, ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಸೇರಿ ಸಲಗವನ್ನು ಕಾಡಿಗಟ್ಟಲು ಹರಸಾಹಸ ಪಟ್ಟರು. ಜನರ ಕೂಗಾಟದಿಂದ ಬೆದರಿದ ಸಲಗ ಅತ್ತಿಂದಿತ್ತ ಓಡಾಡುತ್ತಾ ಅದ್ವಾಳ ಕೆರೆ ಬಳಿ ಸೇರಿಕೊಂಡಿತು.

ಮಹಿಳೆ ಮೇಲೆ ದಾಳಿ: ಅರಣ್ಯ ಸೇರಿಕೊಳ್ಳುವ ಆತುರದಲ್ಲಿದ್ದ ಸಲಗವು ಅದ್ವಾಳು ಕೆರೆ ಬಳಿ ತಮ್ಮ ಜಾನುವಾರು ಮೇಯಿಸುತ್ತಿದ್ದ ಹರಳಹಳ್ಳಿಯ ವೃದ್ಧೆ ಪುಟ್ಟಲಕ್ಷ್ಮಮ್ಮ(60) ಅವರನ್ನು ಸೊಂಡಲಿನಿಂದ ತಿವಿದು, ಒದ್ದು ಓಡಿಹೋಯಿತು. ಸಲಗದ ಒದೆತ ದಿಂದ ತೀವ್ರ ಗಾಯಗೊಂಡು ವೃದ್ದೆ ಜ್ಞಾನತಪ್ಪಿದರು.

ನಂತರ ಅರಣ್ಯ ಸಿಬ್ಬಂದಿ ಮಹಿಳೆಗೆ ನೀರು ಕುಡಿಸಿ ಉಪಚರಿಸಿ ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಕೊಡಿಸಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಿದ್ದು ಎಡಗಾಲು ಮುರಿದಿದೆ.

ಕೊನೆಗೂ ಕಾಡು ಸೇರಿತು: ಸ್ಥಳಕ್ಕೆ ಎಸಿಎಫ್‌ ಸತೀಶ್‌, ಆರ್‌ಎಫ್‌ಒ ನಮನ್‌ ನಾರಾಯಣ್‌ ನಾಯ್ಕ, ಡಿಆರ್‌ಎಫ್‌ಒಗಳಾದ ದ್ವಾರಕನಾಥ್‌, ಚಂದ್ರೇಶ್‌, ಅರಣ್ಯ ಹಾಗೂ ಎಸ್‌ಟಿಪಿಎಫ್‌ ಸಿಬ್ಬಂದಿ ಸಂಜೆ ವೇಳೆಗೆ ನಾಗರಹೊಳೆ ಉದ್ಯಾನಕ್ಕೆ ಸೇರಿಸುವಲ್ಲಿ ಯಶಸ್ವಿಯಾದರು.

ಕಾಡಾನೆ ಕಾಟ ತಪ್ಪಿಸಿ: ಈ ಭಾಗದಲ್ಲಿ ನಿತ್ಯ ಕಾಡಾನೆಗಳ ಕಾಟದಿಂದ ರೈತರು ಕಂಗಾಲಾಗಿದ್ದು, ಬೆಳೆ, ಜೀವಹಾನಿಯೊಂದಿಗೆ ಬದುಕಬೇಕಾದ ಅನಿವಾರ್ಯತೆ ಎದುರಾಗಿದೆ. ಸರ್ಕಾರ ಈ ಭಾಗದಲ್ಲಿ ರೈಲ್ವೆ ಕಂಬಿ ತಡೆಗೋಡೆ ಪೂರ್ಣಗೊಳಿಸದೇ, ರೈತರು ಸಂಕಷ್ಟ ಎದುರಿಸಬೇಕಾಗಿದೆ. ಇನ್ನಾದರೂ ಶಾಸಕರು ಸರ್ಕಾರದ ಮೇಲೆ ಒತ್ತಡ ಹಾಕಿ, ಬೇಲಿ ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.