ಸವಲತ್ತು ತಲುಪಿಸುವಲ್ಲಿ ಲೋಪ: ಕ್ರಮಕ್ಕೆ ಸೂಚನೆ


Team Udayavani, Oct 17, 2019, 3:00 AM IST

savalathu

ಚಾಮರಾಜನಗರ: ಗಿರಿಜನರಿಗೆ ಸಮರ್ಪಕವಾಗಿ ಸವಲತ್ತು ವಿತರಣೆ ಮಾಡಲು ವಿಫ‌ಲವಾಗಿರುವ ಗಿರಿಜನ ಕಲ್ಯಾಣ ಇಲಾಖೆಯ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ರೈತರಿಗೆ ಸವಲತ್ತು ತಲುಪಿಸುವಲ್ಲಿ ಲೋಪ ಮಾಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಸೂಚನೆ ನೀಡಿದರು. ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರಿಯಾಗಿ ವಿತರಣೆ ಮಾಡಿಲ್ಲ: ಗಿರಿಜನರಿಗೆ ಹೊದಿಕೆ ಹಾಗೂ ಇನ್ನಿತರ ಸವಲತ್ತಗಳನ್ನು ಆ ಇಲಾಖೆಯ ಅಧಿಕಾರಿ ರಾಮಸ್ವಾಮಿ ಸರಿಯಾಗಿ ವಿತರಣೆ ಮಾಡಿಲ್ಲ ಎಂಬ ದೂರುಗಳಿವೆ. ಜನಪ್ರತಿನಿಧಿಗಳನ್ನು ಆಹ್ವಾನಿಸಿ ಸವಲತ್ತು ವಿತರಣೆ ಮಾಡಿಲ್ಲ. ಈ ಬಗ್ಗೆ ವಿವರಣೆ ನೀಡುವಂತೆ ಸೂಚನೆ ನೀಡಿದರು. ಇದಕ್ಕೆ ಅಧಿಕಾರಿ, ಅಸಮರ್ಪಕ ಉತ್ತರ ನೀಡಿದ್ದರಿಮದ ಸಿಡಿಮಿಡಿಗೊಂಡ ಶಾಸಕರು ತೀವ್ರ ತರಾಟೆಗೆ ತೆಗೆದುಕೊಂಡರು.

ರೈತರಿಗೆ ಅನ್ಯಾಯ: ತೋಟಗಾರಿಕೆ ಮತ್ತು ಕೃಷಿ ಇಲಾಖೆಯಿಂದ ನೀಡಿರುವ ಸಲವತ್ತುಗಳು ಸಹ ಸಮರ್ಪಕವಾಗಿ ವಿತರಣೆಯಾಗಿಲ್ಲ. ತೋಟಗಾರಿಕೆ ಇಲಾಖೆಯಿಂದ ತೆಂಗು ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ಹರವೆ ಹಾಗೂ ಇತರೇ ಭಾಗದ ರೈತರಿಗೆ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆ ಮಾಡುವಂತೆ ತಿಳಿಸಿದರು.

ಶಿಸ್ತು ಕ್ರಮ ಕೈಗೊಳ್ಳಬೇಕು: ತಾಲೂಕಿನ ಅಭಿವೃದ್ಧಿ ಕುರಿತು ಮಹತ್ವದ ಸಭೆ ನಡೆಯುತ್ತಿದ್ದರು ಸಹ ಸಂಬಂಧ ಪಟ್ಟ ಇಲಾಖೆಯ ಅನೇಕ ಅಧಿಕಾರಿಗಳು ಸಭೆಗೆ ಅಗಮಿಸಿಲ್ಲ. ಇಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳಿಗೆ ಶೋಕಾಸ್‌ ನೋಟಿಸ್‌ ನೀಡುವಂತೆ ಶಾಸಕರು ಆದೇಶಿಸಿದರು. ಅಲ್ಲದೇ ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್‌ ಸಭೆ ಇದ್ದರು ಸಹ ಕಾಮಗಾರಿಗಳ ಪರಿಶೀಲನೆ ಹೋಗಿದ್ದಾರೆ. ಇಲ್ಲಿ ಸಭೆಗೆ ಉತ್ತರ ನೀಡುವವರು ಯಾರು? ಮೊದಲು ಅವರನ್ನು ಸಭೆಗೆ ಕರೆಸಿ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿಗೆ ಸೂಚನೆ ನೀಡಿದರು.

ಜಿಪಂ ಸದಸ್ಯ ಆರೋಪ: ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಿಂದ ತರಬೇತಿಗೆ ಕಳುಹಿಸುವ ವಿಚಾರ ಜನಪ್ರತಿನಿಧಿಗಳ ಗಮನಕ್ಕೆ ಬರುವುದಿಲ್ಲ. ಇಲಾಖೆಯ ಅಧಿಕಾರಿಗಳೇ ತಮಗೆ ಇಷ್ಟ ಬಂದವರನ್ನು ತರಬೇತಿ ಕಳುಹಿಸುತ್ತಿದ್ದಾರೆ ಎಂದು ಜಿಪಂ ಸದಸ್ಯ ಕೆರೆಹಳ್ಳಿ ನವೀನ್‌ ಆರೋಪಿಸಿದರು.

ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಇಲ್ಲ: ಅಲ್ಲದೇ ತರಬೇತಿಗೆ ತೆರಳುತ್ತಿರುವ ರೈತರ ಬಗ್ಗೆ ನಮಗೆ ಮಾಹಿತಿ ಇರುವುದಿಲ್ಲ. ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಜನಪ್ರತಿನಿಗಳಿಗೆ ಮಾಹಿತಿ ನೀಡಿ, ಅರ್ಹ ರೈತರು ಸಲವತ್ತು ಹಾಗೂ ಪ್ರಯೋಜನ ಪಡೆದು ಕೊಳ್ಳುವಂತೆ ಮಾಡಬೇಕು. ತಮಗೆ ಇಷ್ಟಬಂದಂತೆ ಕಾರ್ಯಕ್ರಮ ರೂಪಿಸಲು ಅಧಿಕಾರ ಕೊಟ್ಟವರು ಯಾರು ಎಂದು ಜಿ.ಪಂ. ಸದಸ್ಯರು ಪ್ರಶ್ನೆ ಮಾಡಿದರು. ಅನೇಕ ಇಲಾಖೆಗಳ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಿಲ್ಲ ಎಂದು ಸಭೆಯಲ್ಲಿ ಚರ್ಚೆ ನಡೆಯಿತು.

ಎಂಜಿನಿಯರ್‌ಗೆ ಸೂಚನೆ: ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಮೂಡ್ನಾಕೂಡು ರಸ್ತೆ, ಮಲೆಯೂರು ಮಾರ್ಗ ರಸ್ತೆಯನ್ನು ಅಭಿವೃದ್ಧಿ ಕಾಮಗಾರಿ ಅರ್ಧಕ್ಕೆ ನಿಂತಿದೆ. ಕಳೆದ 2 ವರ್ಷಗಳ ಹಿಂದೆ ಆರಂಭವಾದ ಕಾಮಗಾರಿ ಕೇವಲ ಜಲ್ಲಿ ಕಲ್ಲು ಸುರಿದರು. ಮಣ್ಣು ಹಾಕಿ ಪೂರ್ತಿ ಹಣ ಡ್ರಾ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗೆ ಶಾಸಕರು ಸೂಚನೆ ನೀಡಿದರು.

ಜಿಪಂ ಸದಸ್ಯರಾದ ಸಿ.ಎನ್‌. ಬಾಲರಾಜು, ಕೆ.ಪಿ. ಸದಾಶಿವಮೂರ್ತಿ, ಶಶಿಕಲಾ, ತಾಪಂ. ಅಧ್ಯಕ್ಷೆ ದೊಡ್ಡಮ್ಮ, ಉಪಾಧ್ಯಕ್ಷ ಬಸವಣ್ಣ, ಕಾರ್ಯನಿರ್ವಾಹಕ ಅಧಿಕಾರಿ ಪ್ರೇಮಕುಮಾರ್‌, ತಹಶೀಲ್ದಾರ್‌ ಮಹೇಶ್‌ ಇದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.