ಅಲ್ಪಸಂಖ್ಯಾತರಿಗೆ ಕೇವಲ 19 ನಿವೇಶನ


Team Udayavani, Mar 20, 2023, 2:54 PM IST

ಅಲ್ಪಸಂಖ್ಯಾತರಿಗೆ ಕೇವಲ 19 ನಿವೇಶನ

ಚಾಮರಾಜನಗರ: ಗುಂಡ್ಲುಪೇಟೆ ಪಟ್ಟಣದ ಪುರಸಭೆಯಿಂದ ಇತ್ತೀಚೆಗೆ ಫ‌ಲಾನುಭವಿಗಳಿಗೆ ನಿವೇಶನಗಳ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದ್ದು, ಪರಿಶಿಷ್ಟ ಪಂಗಡಗಳ ಫ‌ಲಾನುಭವಿಗಳಿಗೆ ಹೆಚ್ಚು ನಿವೇಶನ ವಿತರಿಸಲಾಗಿದೆ ಎಂದು ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಅಬ್ರಾರ್‌ ಅಹಮ್ಮದ್‌ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಂಡ್ಲುಪೇಟೆ ಪಟ್ಟಣದ ವ್ಯಾಪ್ತಿಯಲ್ಲಿ ರಾಜೀವ್‌ಗಾಂಧಿ ವಸತಿ ನಿಗಮದಿಂದ 637 ನಿವೇಶನಗಳನ್ನು ಗುರುತಿಸಿ ಹಂಚಿಕೆ ಮಾಡಿದ್ದಾರೆ. ಇದರಲ್ಲಿ ಎಸ್‌ಸಿ ಸಮುದಾಯಕ್ಕೆ 104, ಎಸ್‌ ಟಿಗೆ 218, ದಿವ್ಯಾಂಗರಿಗೆ 44, ಅಲ್ಪಸಂಖ್ಯಾತರರಿಗೆ 19, ಮಾಜಿ ಸೈನಿಕರಿಗೆ 13, ವಿಧವೆಯರಿಗೆ 6 ಹಾಗೂ ಸಾಮಾನ್ಯ ವರ್ಗದರಿಗೆ 233 ನಿವೇಶನ ವಿತರಿಸಲಾಗಿದೆ ಎಂದರು. ಮೀಸಲಾತಿ ಪರಿಕಲ್ಪನೆಯ ವಿರುದ್ಧ ನಿವೇಶನ ಹಂಚಲಾಗಿದೆ. ಶೇ.7ರಂತೆ ಎಸ್‌ಟಿಗೆ 45 ನಿವೇಶನ ನೀಡಬೇಕಾಗಿತ್ತು. ಆದರೆ, ಎಸ್‌ಟಿಗೆ ಅತಿ ಹೆಚ್ಚು ಅಂದರೆ 218 ನಿವೇಶನ ನೀಡಿದ್ದಾರೆ. ಈ ಸಮುದಾಯಕ್ಕೆ 174 ನಿವೇಶನ ಹೆಚ್ಚುವರಿಯಾಗಿ ನೀಡಿದ್ದಾರೆ. ಇತರೆ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ದೂರಿದರು.

ಫ‌ಲಾನುಭವಿಗಳ ಆಯ್ಕೆ ಪಟ್ಟಿ ಪ್ರಕಾರ ದಿವ್ಯಾಂಗರಿಗೆ 44 ನಿವೇಶನ ನೀಡಿದ್ದು, ಇದರಲ್ಲೂ 23 ಫ‌ಲಾನುಭವಿಗಳು ಎಸ್‌ಟಿ ಸಮುದಾಯಕ್ಕೆ ಸೇರಿರುತ್ತಾರೆ. ಅಲ್ಪಸಂಖ್ಯಾತ ಸಮುದಾಯದ ಒಬ್ಬರ ಹೆಸರು ದಿವ್ಯಾಂಗರ ಪಟ್ಟಿಯಲ್ಲಿ ಇಲ್ಲ. ಅಲ್ಪಸಂಖ್ಯಾತರಿಗೆ ಕೇವಲ 19 ನಿವೇಶನ ನೀಡಿರುವುದು ತಾರತಮ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ರಾಜಕೀಯ ಪ್ರಭಾವಿಗಳು, ಹಣ ನೀಡಿದವರಿಗೆ ನಿವೇಶನ ನೀಡಿದ್ದಾರೆ ಎಂದು ಆರೋಪಿಸಿದರು.

ಗೋದಾವರಿ ಎಂಬುವರಿಗೆ ಪಟ್ಟಣದ ಮಹದೇವಪ್ರಸಾದ್‌ ನಗರದಲ್ಲಿ ಮನೆ ಇದ್ದರೂ ವಸತಿರಹಿತರು ಎಂದು ಅವರಿಗೆ ಮತ್ತೆ ನಿವೇಶನ ನೀಡಲಾಗಿದೆ ಎಂದು ಆರೋಪಿಸಿದರು.

ಪುರಸಭಾ ಸದಸ್ಯ ರಾಜಗೋಪಾಲ್‌, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್‌.ಮಹೇಶ್‌, ತಾಲೂಕು ಅಧ್ಯಕ್ಷ ಸೈಯದ್‌ ಅಕ್ರಮ್‌ ಪಾಷಾ, ಸಿ.ಕೆ.ನಯಾಜ್‌ ವುಲ್ಲಾ ಹಾಜರಿದ್ದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.