ಸೋಲು ಗೆಲುವಿನ ಲೆಕ್ಕಾಚಾರಕ್ಕಿಂದು ತೆರೆ

ಧ್ರುವನಾರಾಯಣ ಹ್ಯಾಟ್ರಿಕ್‌ ಸಾಧಿಸುವರೋ, ಶ್ರೀನಿವಾಸಪ್ರಸಾದ್‌ ಗೆಲ್ಲುತ್ತಾರೋ ಇಂದು ನಿರ್ಧಾರ

Team Udayavani, May 23, 2019, 9:00 AM IST

cb-tdy-01

ಚಾಮರಾಜನಗರ: ಚಾಮರಾಜನಗರದ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಧ್ರುವನಾರಾಯಣ ಹ್ಯಾಟ್ರಿಕ್‌ ಜಯ ಸಾಧಿಸುತ್ತಾರೋ ಅಥವಾ ಕೇಂದ್ರ ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್‌ ಆರನೇ ಬಾರಿ ಸಂಸತ್‌ಗೆ ಆಯ್ಕೆಯಾಗುವ ಮೂಲಕ ಬಿಜೆಪಿಗೆ ಮೊದಲ ಗೆಲುವು ತಂದುಕೊಡುತ್ತಾರೋ ಎಂಬ ಪ್ರಶ್ನೆಗೆ ಗುರುವಾರ ಉತ್ತರ ದೊರಕಲಿದೆ.

ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಹಾಲಿ ಸಂಸದ ಆರ್‌. ಧ್ರುವನಾರಾಯಣ ಹಾಗೂ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸಪ್ರಸಾದ್‌ ನಡುವೆ ಯಾರು ಸಂಸದರಾಗಲಿದ್ದಾರೆ ಎಂಬ ಬಹಳ ದಿನಗಳ ಪ್ರಶ್ನೆಗೆ ಉತ್ತರ ದೊರಕಲಿದೆ.

ಕೈಗೆ 11ನೇ ಗೆಲುವಿನ ನಿರೀಕ್ಷೆ: ಒಂದು ವೇಳೆ ಧ್ರುವನಾರಾಯಣ ಜಯಗಳಿಸಿದರೆ ಅದು ಅವರ ಹ್ಯಾಟ್ರಿಕ್‌ ಜಯವಾಗುವುದರ ಜೊತೆಗೆ ಕ್ಷೇತ್ರದಲ್ಲಿ ಹ್ಯಾಟ್ರಿಕ್‌ ಜಯ ಪಡೆದ ಮೂರನೇ ಸಂಸದರಾಗಲಿದ್ದಾರೆ. ಅಲ್ಲದೇ ಕಾಂಗ್ರೆಸ್‌ ಪಕ್ಷ ಮೂರನೇ ಜಯಕ್ಕೆ ಪಾತ್ರವಾಗಲಿದೆ. ಹಿಂದೆ ಕಾಂಗ್ರೆಸ್‌ನಿಂದ ಸಂಸದರಾಗಿದ್ದ ಎಸ್‌.ಎಂ. ಸಿದ್ದಯ್ಯ ಹಾಗೂ ವಿ. ಶ್ರೀನಿವಾಸಪ್ರಸಾದ್‌ ಹ್ಯಾಟ್ರಿಕ್‌ ಜಯ ಸಾಧಿಸಿದ್ದರು. ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ 10 ಬಾರಿ ಜಯಗಳಿಸಿದೆ. ಧ್ರುವನಾರಾಯಣ ಗೆದ್ದರೆ ಅದು ಕಾಂಗ್ರೆಸ್‌ನ 11ನೆಯ ಗೆಲುವಾಗಲಿದೆ.

ಏ.18ರಂದು ನಡೆದ ಚುನಾವಣೆಯಲ್ಲಿ ಶೇ.75.22 ರಷ್ಟು ಮತದಾನವಾಗಿದ್ದು, ಇದು ಪ್ರಥಮ ಚುನಾವಣೆ ಯಿಂದ ಇದುವರೆಗೆ ಕ್ಷೇತ್ರದಲ್ಲಿ ನಡೆದ ಅತಿ ಹೆಚ್ಚಿನ ದಾಖಲೆಯ ಮತದಾನವಾಗಿದೆ. ಈ ಹೆಚ್ಚಿದ ಮತ ದಾನ ಯಾವ ಅಭ್ಯರ್ಥಿಗೆ ಲಾಭ ತಂದುಕೊಡಲಿದೆ ಎಂಬುದಕ್ಕೆ ಗುರುವಾರ ಉತ್ತರ ದೊರಕಲಿದೆ.

ಬಿಜೆಪಿಗೆ ಅನುಕೂಲವೇ? ಈ ದಾಖಲೆಯ ಮತದಾನದಿಂದ ತಮ್ಮ ಪಕ್ಷಕ್ಕೇ ಹೆಚ್ಚು ಅನುಕೂಲ ಎಂದು ಬಿಜೆಪಿ ಮುಖಂಡರು ಬೀಗುತ್ತಿದ್ದಾರೆ. ಆದರೆ 2009ರಲ್ಲಿ ಶೇ. 67.90 ಮತದಾನವಾಗಿದ್ದಾಗ ಕಾಂಗ್ರೆಸ್‌ 4002 ಮತಗಳಿಂದ ಗೆದ್ದಿತ್ತು. 2014ರಲ್ಲಿ ಶೇ. 72.83ರಷ್ಟು ಮತದಾನವಾಗಿತ್ತು. ಆಗ ನಮ್ಮ ಅಭ್ಯರ್ಥಿ ಧ್ರುವನಾರಾಯಣ 1.41 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಹಾಗಾಗಿ ಹೆಚ್ಚಿನ ಮತದಾನ ನಮ್ಮ ಪಕ್ಷಕ್ಕೇ ಅನುಕೂಲಕರವಾಗಿದೆ ಎಂಬ ವಾದವನ್ನು ಕಾಂಗ್ರೆಸ್‌ ಮುಖಂಡರು ಮುಂದಿಡುತ್ತಿದ್ದಾರೆ.

ಹನೂರು, ತಿ. ನರಸೀಪುರ, ವರುಣಾ, ಹೆಗ್ಗಡದೇವನ ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಪಕ್ಷಕ್ಕೆ ಲೀಡ್‌ ಬರುತ್ತದೆ ಎಂಬುದು ಕಾಂಗ್ರೆಸ್‌ ಮುಖಂಡರ ಲೆಕ್ಕಾಚಾರ. ಹನೂರಿನಲ್ಲಿ 15 ರಿಂದ 20 ಸಾವಿರ ಲೀಡ್‌, ತಿ. ನರಸೀಪುರದಲ್ಲಿ 7-8 ಸಾವಿರ, ವರುಣಾದಲ್ಲಿ 15-20 ಸಾವಿರ, ಹೆಗ್ಗಡದೇವನಕೋಟೆ 10 ಸಾವಿರ ಲೀಡ್‌ ದೊರಕುತ್ತದೆ ಎಂದು ನುಡಿದಿದ್ದಾರೆ.

ಮತಗಣಿತ: ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ 5 ಸಾವಿರ ಲೀಡ್‌ ಬರಬಹುದು. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಎರಡೂ ಪಕ್ಷಗಳಿಗೂ ಸಮ-ಸಮ ಮತಗಳು, ನಂಜನಗೂಡು, ಗುಂಡ್ಲುಪೇಟೆಯಲ್ಲಿ ಬಿಜೆಪಿಗೆ 2-3 ಸಾವಿರ ಲೀಡ್‌ ಬರಬಹುದು. ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಸ್ವಲ್ಪ ಹೆಚ್ಚಿನ ಮತಗಳು ಬಂದರೂ, ಇನ್ನುಳಿದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹೆಚ್ಚಿನ ಅಂತರದ ಮುನ್ನಡೆ ಸಾಧಿಸುತ್ತದೆ. ಇದು ಗೆಲುವಿಗೆ ಪೂರಕವಾಗಲಿದೆ ಎಂಬುದು ಮುಖಂಡರ ಮತಗಣಿತ.ಇನ್ನು ಬಿಜೆಪಿ ಗುಂಪಿನವರು, ದಾಖಲೆಯ ಮತದಾನ ಆಗಿರುವುದು ನಮ್ಮ ಪಕ್ಷಕ್ಕೆ ಹೆಚ್ಚಿನ ಪ್ರಯೋಜನಕಾರಿಯಾಗಿದೆ. ದೇಶಾದ್ಯಂತ ಪ್ರಧಾನಿ ನರೇಂದ್ರ ಅಲೆಯಿದ್ದು ಅದು ಸಹಕಾರಿಯಾಗಲಿದೆ.ಹಿಂದಿನ ಚುನಾವಣೆಗಳಲ್ಲಿ ಉಪ್ಪಾರ ಸಮುದಾಯ ಬಿಜೆಪಿ ಬೆಂಬಲಿಸಿದ್ದೇ ನಾವು ನೋಡಿರಲಿಲ್ಲ. ಆದರೆ ಈ ಬಾರಿ ಅನೇಕ ಮೋಳೆಗಳಲ್ಲಿ ಉಪ್ಪಾರ ಯುವಕರು ಮೋದಿಯವರ ಮುಖ ನೋಡಿ ಬಿಜೆಪಿಗೆ ಓಟು ಹಾಕಿದ್ದಾರೆ ಎಂಬುದು ಸ್ಥಳೀಯ ಬಿಜೆಪಿ ಮುಖಂಡರೊಬ್ಬರ ಅನಿಸಿಕೆ.

ಮತ ಪೂರಕ: ಚಾಮರಾಜನಗರ, ಗುಂಡ್ಲುಪೇಟೆ, ನಂಜನಗೂಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಅತಿ ಹೆಚ್ಚಿನ ಮುನ್ನಡೆ ದೊರಕುತ್ತದೆ. ಕೊಳ್ಳೇಗಾಲದಲ್ಲಿ ಕಾಂಗ್ರೆಸ್‌, ಬಿಎಸ್‌ಪಿಗಿಂತ ಹೆಚ್ಚಿನ ಮತಗಳನ್ನು ಪಡೆಯುತ್ತೇವೆ. ಹನೂರು, ತಿ. ನರಸೀಪುರ, ಹೆಗ್ಗಡದೇವನಕೋಟೆ, ವರುಣಾ ಕ್ಷೇತ್ರಗಳಲ್ಲಿ ಜೆಡಿಎಸ್‌ ಮತದಾರರು ಬಿಜೆಪಿಗೆ ಮತ ಹಾಕಿದ್ದಾರೆ ಇದು ನಮಗೆ ಪೂರಕವಾಗಿದೆ ಎನ್ನುತ್ತಾರೆ ಬಿಜೆಪಿ ಮುಖಂಡರು.

ಇಲ್ಲಿಯವರೆಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ದಲಿತರು ಕಾಂಗ್ರೆಸ್‌ ಅನ್ನೂ, ಲಿಂಗಾಯತರು ಬಿಜೆಪಿಯನ್ನೂ ಬೆಂಬಲಿಸುತ್ತಿದ್ದರು. ಬಿಜೆಪಿ ಗೆಲುವಿಗೆ ದಲಿತರ ಮತಗಳು ದೊರಕದಿದ್ದುದೇ ಅಡ್ಡಿಯಾಗಿತ್ತು. ಆದರೆ ಈ ಬಾರಿ ಅಭ್ಯರ್ಥಿ ಶ್ರೀನಿವಾಸಪ್ರಸಾದ್‌ ಅವರ ವರ್ಚಸ್ಸಿನಿಂದಾಗಿ ದಲಿತ ಮತಗಳು ಬಿಜೆಪಿಗೆ ಬರಲಿವೆ. ಹೀಗಾಗಿ ಈ ಬಾರಿ ಬಿಜೆಪಿ ಗೆಲುವು ಖಂಡಿತ ಎಂಬುದು ಅವರ ಅನಿಸಿಕೆ. ಈ ಎಲ್ಲ ಊಹಾಪೋಹ, ಅಂದಾಜುಗಳಿಗೆ ಗುರುವಾರ ತೆರೆ ಬೀಳಲಿದೆ.

● ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.