ಮುಖ್ಯಾಧಿಕಾರಿ ಧೋರಣೆ ಖಂಡಿಸಿ ಪಪಂ ಸದಸ್ಯರ ಪ್ರತಿಭಟನೆ


Team Udayavani, Mar 22, 2021, 12:56 PM IST

ಮುಖ್ಯಾಧಿಕಾರಿ ಧೋರಣೆ ಖಂಡಿಸಿ ಪಪಂ ಸದಸ್ಯರ ಪ್ರತಿಭಟನೆ

ಯಳಂದೂರು: ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಎಂ.ಸಿ. ನಾಗರತ್ನ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಸದಸ್ಯರ ಮಾತಿಗೆ ಬೆಲೆಯೇ ಕೊಡುವುದಿಲ್ಲ. ಅಲ್ಲದೇ ಪಪಂನ ಅಧ್ಯಕ್ಷರ ಗಮನಕ್ಕೂ ಬಾರದೆ 10 ಲಕ್ಷ ರೂ. ಡ್ರಾ ಮಾಡಿದ್ದಾರೆ ಎಂದು ಸದಸ್ಯರು ಗಂಭೀರ ಆರೋಪಿಸಿ, ಶನಿವಾರ ಕಚೇರಿಯ ಹೊರಭಾಗದಲ್ಲಿ ಪ್ರತಿಭಟಿಸಿದರು.

ಪಪಂ ಅಧ್ಯಕ್ಷೆ ಶಾಂತಮ್ಮ ನಿಂಗರಾಜು ಮಾತನಾಡಿ, ಶನಿವಾರ ಪಪಂನ ಸಾಮಾನ್ಯ ಸಭೆ ನಡೆಯಿತು. ಇದರಲ್ಲಿ ಜಮಾಖರ್ಚಿಗೆ ಅನುಮೂದನೆ ನೀಡುವ ಪ್ರಸ್ತಾಪವಿದ್ದು ಮುಖ್ಯಾಧಿಕಾರಿಗಳು 10 ಲಕ್ಷ ರೂ. ಹಣವನ್ನು ಅಧ್ಯಕ್ಷರ ಗಮನಕ್ಕೆ ಬಾರದೆ ಡ್ರಾ ಮಾಡಿದ್ದು, ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ನಾವು ಇದಕ್ಕೆ ಅನುಮೋದನೆ ನೀಡಿಲ್ಲ ಎಂದರು.

ಪಪಂವತಿಯಿಂದ ಕಳೆದ 3 ತಿಂಗಳಿಂದ 21.60 ಲಕ್ಷ ರೂ. ವಸೂಲಾತಿ ಆಗಿದೆ. ಇದರಲ್ಲಿ ಕೇವಲ 4 ಚೆಕ್‌ಗಳಲ್ಲಿ 3.23 ಲಕ್ಷ ರೂ.ಗಳಿಗೆ ನಾನು ಸಹಿ ಮಾಡಿದ್ದೇನೆ. ಆದರೆ ನನಗೆ ಅಥವಾ ಇತರೆ ಸದಸ್ಯರಿಗೆ ಗೊತ್ತಿಲ್ಲದಂತೆ 10 ಲಕ್ಷ ರೂ. ಡ್ರಾ ಮಾಡಲಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ ಇದನ್ನು ಕಚೇರಿಯ ಸಿಬ್ಬಂದಿಗೆ ಸಂಬಳ ನೀಡಲು ಇದನ್ನು ಬಳಸಿಕೊಳ್ಳಲಾಗಿದೆ. ಇದಕ್ಕೆ ನನಗೆ ಸಂಪೂರ್ಣ ಅಧಿಕಾರವಿದೆ ಎಂದು ಉತ್ತರ ನೀಡಿದ್ದಾರೆ. ಈ ಬಗ್ಗೆ ಸರ್ಕಾರದ ಸುತ್ತೋಲೆ ಕೇಳಿದಾಗ 2006 ರ ಕರ್ನಾಟ ಮುನಿಸಿಪಾಲಿಟೀಸ್‌ ಅಕೌಂಟಿಂಗ್‌ ಅಂಡ್‌ ಏಜೆಂಟಿಂಗ್‌ ನಿಯಮಗಳ ಪ್ರತಿಯನ್ನು ಸದಸ್ಯರಿಗೆ ನೀಡಿದ್ದಾರೆ. ಇದರಲ್ಲಿ ಅನ್ಯ ನಿಧಿಯಲ್ಲಿನ ಹಣವನ್ನು ಹೊರಗುತ್ತಿಗೆ ಪೌರಕಾರ್ಮಿಕರಿಗೆ ವೇತನಕ್ಕೆ ಇದನ್ನು ಬಳಸಿಕೊಳ್ಳಲು ಅವಕಾಶವಿದೆ ಎಂದು ನಮೂದಾಗಿದೆ. ಆದರೆ, ಇದನ್ನು ಇತರೆ ಹೊರಗುತ್ತಿಗೆ ಆಧಾರದ ನೌಕರರಿಗೆ ನೀಡಿದ್ದಾರೆ. ಆದರೆ ಇದನ್ನು ಪಟ್ಟಣ ಪಂಚಾಯ್ತಿ ಅಧ್ಯಕ್ಷರ ಗಮನಕ್ಕೆ ಬಾರದೆ ಹಣವನ್ನು ಡ್ರಾ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಉಪಾಧ್ಯಕ್ಷೆ ಲಕ್ಷ್ಮೀ ಮಲ್ಲು ಮಾತನಾಡಿ, ಜನಪ್ರತಿನಿಧಿಗಳ ಮಾತಿಗೆ ಮುಖ್ಯಾಧಿಕಾರಿ ಬೆಲೆ ಕೊಡುತ್ತಿಲ್ಲ. ಕಚೇರಿಗೆ ನಿಗದಿತ ಅವಧಿಗೆ ಬರುವುದಿಲ್ಲ. ಇಲ್ಲೇ ವಸತಿಗೃಹವಿದ್ದರೂ ತಂಗುವುದಿಲ್ಲ. ಇಲ್ಲಿಗೆ ಕಸ ಸಂಗ್ರಹಕ್ಕಾಗಿ ಹೊಸ ಟ್ರ್ಯಾಕ್ಟರ್‌ ಬಂದಿದ್ದು, ಇದಕ್ಕೆ ಚಾಲಕನನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ನಡೆದಿದ್ದು ಇದೂಕೂಡ ನಮ್ಮ ಗಮನಕ್ಕೆ ಬಂದಿಲ್ಲ. ನಾವುಜನಪ್ರತಿನಿಧಿಗಳಾಗಿ ಆಯ್ಕೆಯಾದ ಮೇಲೆ ನಮ್ಮ ಮೇಲೆ ಇದೇ ಧೋರಣೆ ಮುಂದುವರಿದಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು, ಪಿಡಿ, ಸಫಾಯಿಕರ್ಮಚಾರಿ ಆಯೋಗದ ಅಧ್ಯಕ್ಷರಿಗೂ ದೂರುಸಲ್ಲಿಸಲಾಗಿದೆ. ಕೋಳಿ ಹಾಗೂ ಕುರಿ ಮಾಂಸದಅಂಗಡಿಗಳನ್ನು ತೆರೆಯಲು ಪರವಾನಿಗೆನೀಡುವಂತೆ ಮನವಿ ಮಾಡಿ 6 ತಿಂಗಳು ಕಳೆದರೂ ಕ್ರಮವಹಿಸಿಲ್ಲ. ಕೂಡಲೆ ಉನ್ನತ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪಪಂ ಸದಸ್ಯರಾದ ಮಹೇಶ್‌, ವೈ.ಜಿ. ರಂಗನಾಥ, ಮಹದೇವನಾಯಕ, ಮಂಜು, ಸುಶೀಲಾ ಮುಖಂಡರಾದ ಲಿಂಗರಾಜು, ಮಲ್ಲು,ಪ್ರಕಾಶ್‌ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.