ಕಾಯಕದಿಂದ ವ್ಯಕ್ತಿತ್ವ ಅಳೆಯಬಾರದು


Team Udayavani, Aug 21, 2019, 3:00 AM IST

kayaka

ಸಂತೆಮರಹಳ್ಳಿ: ಪ್ರತಿ ವೃತ್ತಿಗೂ ತನ್ನದೇ ಆದ ವೈಶಿಷ್ಟ್ಯವಿದೆ. ಅದರಲ್ಲಿ ಪರಿಣಿತರಾದವರು ಮಾತ್ರ ಅಂತಹ ಕೆಲಸ ಮಾಡಲು ಸಾಧ್ಯ. ಆದರೆ ಆ ವೃತ್ತಿಯಿಂದಲೇ ವ್ಯಕ್ತಿತ್ವ ಅಳೆಯುವ ಪದ್ಧ ತಿ ನಿರ್ಮೂಲವಾಗಬೇಕು. ಎಲ್ಲಾ ಕಾಯಕವೂ ಶ್ರೇಷ್ಠವಾಗಿದ್ದು ಎಲ್ಲರನ್ನೂ ಗೌರವಿಸುವ ಕೆಲಸವಾಗಬೇಕು ಎಂದು ಶಾಸಕ ಎನ್‌.ಮಹೇಶ್‌ ಅಭಿಪ್ರಾಯಪಟ್ಟರು. ಯಳಂದೂರು ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಮಂಗಳವಾರ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸವಲತ್ತು ಸದುಪಯೋಗಿಸಿಕೊಳ್ಳಿ: ಸವಿತಾ ಸಮಾಜ ಮನುಷ್ಯರನ್ನು ಶಿಸ್ತು ಮಾಡುವ ಕೆಲಸ ಮಾಡುತ್ತಿದೆ. ಅನಾದಿ ಕಾಲದಿಂದಲೂ ಪರಂಪರಾಗತವಾಗಿ ಇವರ ವೃತ್ತಿ ಚಾಲ್ತಿಯಲ್ಲಿದೆ. ಆದರೆ ಶೈಕ್ಷಣಿಕವಾಗಿ ಈ ಸಮಾಜ ತೀರಾ ಹಿಂದುಳಿದಿದೆ. ವ್ಯಾಸಂಗಕ್ಕಾಗಿ ಸರ್ಕಾರದಿಂದ ಎಲ್ಲಾ ರೀತಿಯ ಸವಲತ್ತುಗಳು ಇದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾಲಮಿತಿಯ ಅವಶ್ಯಕತೆ ಇಲ್ಲ: ಸರ್ಕಾರ ನೀಡುವ ವೃದ್ಧಾಪ್ಯ ವೇತನ, ಮನಸ್ವಿನಿ, ಮೈತ್ರಿ, ವಿಕಲಚೇತನ ಸೇರಿದಂತೆ ಇತರೆ ಸಾಮಾಜಿಕ ಪಿಂಚಣಿಗಳನ್ನು ನಾವು ತಕ್ಷಣ ಸಾರ್ವಜನಿಕರಿಗೆ ವಿತರಿಸುವ ಮೂಲ ಸೌಲಭ್ಯವಾಗಿದೆ. ಇತರೆ ಯೋಜನೆಗಳು ತರಲು ವಿಳಂಬವಾದರೂ ಇದಕ್ಕೆ ಹೆಚ್ಚಿಗೆ ಕಾಲಮಿತಿಯ ಅವಶ್ಯಕತೆ ಇಲ್ಲ. ಯಳಂದೂರು ತಾಲೂಕು ಅತ್ಯಂತ ಚಿಕ್ಕ ತಾಲೂಕಾಗಿದೆ ಎಂದರು.

103 ಜನರಿಗೆ ಸೌಲಭ್ಯ ವಿತರಣೆ: ಯಾವುದೇ ಮಧ್ಯವರ್ತಿಗಳೂ ಇಲ್ಲದೆ ಕಳೆದ 2 ತಿಂಗಳಲ್ಲಿ ಇಂಥವರು ಇರುವ ಸ್ಥಳಕ್ಕೆ ತಲುಪಿ ಅವರಿಗೆ ಸಾಮಾಜಿಕ ಪಿಂಚಣಿಗಳನ್ನು ನೀಡುವ ಕೆಲಸವನ್ನು ತಹಶೀಲ್ದಾರ್‌ ವರ್ಷಾ ನೇತೃತ್ವದ ತಂಡ ಅಚ್ಚುಕಟ್ಟಾಗಿ ನಿಭಾಯಿಸುತ್ತಿದೆ ಎಂದು ಶ್ಲಾ ಸಿದರು. ಈ ಎರ ಡು ತಿಂಗಳಲ್ಲಿ 103 ಫ‌ಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಲಾಗಿದ್ದು, ಆದಷ್ಟು ಬೇಗ ಎಲ್ಲರಿಗೂ ಈ ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿದರು.

ತುಳಿತಕ್ಕೊಳಗಾದವರನ್ನು ಮೇಲೆತ್ತಬೇಕು: ಮುಖ್ಯ ಭಾಷಣಕಾರ ಮಹದೇವಕುಮಾರ್‌ ಮಾತನಾಡಿ, ನಮ್ಮ ದೇಶದಲ್ಲಿ ಮೂರು ಕ್ರಾಂತಿಗಳು ನಡೆದಿವೆ. ಒಂದು ಬುದ್ಧನ ಕಾಲದಲ್ಲಿ ಬಸವಣ್ಣನವರ ಕಾಲದಲ್ಲಿ ಅಂಬೇಡ್ಕರ್‌ ಕಾಲದಲ್ಲಿ ಈ ಮೂರು ಕಾಲಗಳಲ್ಲಿಯೂ ತುಳಿತಕ್ಕೆ ಒಳಗಾದ ಸಮಾಜಗಳನ್ನು ಎತ್ತುವ ಕೆಲಸ ಮಾಡಲಾಗಿದೆ ಎಂದು ತಿಳಿಸಿದರು.

ಮಾನವೀಯತೆ ಎಲ್ಲರಿಗೂ ಸರಿಸಮಾನ: ಕ್ಷೌರಿಕ ವೃತ್ತಿಯಲ್ಲಿದ್ದ ಬುದ್ಧನ ಕಾಲದ ಉಪಾಲಿ ಮೊದಲ ಕ್ಷೌರಿಕ ಗುರುವಾಗಿದ್ದಾರೆ. ಇವರು ಬರೆದಿರುವ ವಿನಯ ಪೀಠಿಕ ಗ್ರಂಥ ಇಡೀ ಬುದ್ಧನ ಬದುಕನ್ನು ಹೇಳುತ್ತದೆ. ಹಾಗೆಯೇ ಬಸವಣ್ಣನ ಕಾಲದಲ್ಲಿ ಅವರ ಕಾರ್ಯದರ್ಶಿಯಾಗಿ ಅವರಿಗೆ ಆಪ್ತರಾಗಿದ್ದ ಹಡಪದ ಅಪ್ಪಣ್ಣ ಜಾತಿಯ ಪ್ರಬಲ ವಿರೋಧಿಯಾಗಿದ್ದರು. ಮನುಷ್ಯತ್ವ, ಮಾನವೀಯತೆ ಎಲ್ಲರಿಗೂ ಸರಿಸಮಾನ ವಾದದು ಎಂದು ಸಾರಿದರು. ಇಂಥ ಶರಣರ ತತ್ವಗಳನ್ನು 12ನೇ ಶತಮಾನದ ಶರಣ ಚಳವಳಿಯನ್ನು ಮುನ್ನಡೆಸುವ ಕೆಲಸಕ್ಕೆ ನಾವು ಹೆಗಲು ಕೊಡುವ ಅಗತ್ಯತೆ ಇದೆ ಎಂದರು.

ಜಿಪಂ ಸದಸ್ಯ ಜೆ.ಯೋಗೇಶ್‌, ತಾಪಂ ಅಧ್ಯಕ್ಷ ನಿರಂಜನ್‌, ವಿವಿಧ ಸಾಮಾಜಿಕ ಪಿಂಚಣಿ ಯೋಜನೆಗಳ ಫ‌ಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಲಾಯಿತು. ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಶ್ರೀಕಂಠಸ್ವಾಮಿ, ಪಪಂ ಸದಸ್ಯರಾದ ಮಹೇಶ್‌, ವೈ.ಜಿ.ರಂಗನಾಥ, ಮಹಾದೇವನಾಯಕ, ಕೆ.ಮಲ್ಲಯ್ಯ, ಮಂಜು, ರವಿ, ತಹಶೀಲ್ದಾರ್‌ ವರ್ಷಾ, ಉಪತಹಶೀಲ್ದಾರ್‌ ವೈ.ಎಂ. ನಂಜಯ್ಯ, ಇಒ ಬಿ.ಎಸ್‌.ರಾಜು, ಮಾಜಿ ಧರ್ಮದರ್ಶಿ ಎನ್‌.ದೊರೆಸ್ವಾಮಿ ಇತರರು ಇದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.