ಅಸಂಘಟಿತ ಕಾರ್ಮಿಕರ ನೆರವಿಗೆ ಯೋಜನೆ ಜಾರಿ


Team Udayavani, Jan 1, 2020, 3:00 AM IST

asangatita

ಚಾಮರಾಜನಗರ: ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವೃದ್ಧಾಪ್ಯದ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಭಾರತ ಸರ್ಕಾರ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ಧನ್‌ ಎಂಬ ಮಹತ್ವಾಕಾಂಕ್ಷಿ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ.

ಜಿಲ್ಲೆಯಲ್ಲಿ ಸ್ವ-ಸಹಾಯ ಸಂಘದ ಸದಸ್ಯರು, ಕೃಷಿ ಕಾರ್ಮಿಕರು, ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನಿರ್ವಹಿಸುವ ಕಾರ್ಮಿಕರು, ಅಂಗನವಾಡಿ, ಮಧ್ಯಾಹ್ನದ ಬಿಸಿಯೂಟದ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಅಸಂಘಟಿತ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಇಟ್ಟಿಗೆ ಗೂಡು ಗೃಹ ಕಾರ್ಮಿಕರು, ಮೀನುಗಾರರು, ವ್ಯಾಪಾರಿಗಳು ಯೋಜನೆಯಡಿ ಪಿಂಚಣಿ ಸೌಲಭ್ಯ ಪಡೆಯಬಹುದಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಯೋಜನೆ ಜಾರಿಗೆ ಮುಂದಾಗುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಈ ಉಪಯೋಗಿ ಯೋಜನೆಗಳ ಬಗ್ಗೆ ಜಿಲ್ಲೆಯ ಅಧಿಕಾರಿಗಳು ವ್ಯಾಪಕವಾಗಿ ಪ್ರಚಾರ ಕೈಗೊಂಡು ಕಾರ್ಮಿಕರು, ವ್ಯಾಪಾರಿಗಳು ಸ್ವಯಂ ಉದ್ಯೋಗಿಗಳು ಇದರ ಪ್ರಯೋಜನ ಪಡೆಯಲು ಅಧಿಕಾರಿಗಳು ವಿಶೇಷ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಮಾನ್‌ಧನ್‌ ಅತ್ಯಂತ ಉಪಯುಕ್ತ: ಜಿಲ್ಲೆಯ ಅಸಂಘಟಿತ ಕಾರ್ಮಿಕರ ಜೀವನ ಸಂಧ್ಯಾ ಕಾಲದಲ್ಲಿ ಪೋಷಿಸಲು ನೆರವಾಗುವ ವಂತಿಕೆ ಆಧಾರಿತ ಪಿಂಚಣಿ ಯೋಜನೆ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ಧನ್‌ ಅತ್ಯಂತ ಉಪಯುಕ್ತವಾಗಿದೆ. ಯೋಜನೆಗೆ ಒಳಪಡುವ ಕಾರ್ಮಿಕರು ಅಸಂಘಟಿತ ವಲಯಕ್ಕೆ ಸೇರಿದವರಾಗಿರಬೇಕು. 18ರಿಂದ 40ರ ವಯೋಮಿತಿಯೊಳಗಿರಬೇಕು. ಮಾಸಿಕ ಆದಾಯ 15 ಸಾವಿರ ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಆದಾಯ ತೆರಿಗೆ, ಇ.ಎಸ್‌.ಐ, ಪಿ.ಎಫ್ ಹಾಗೂ ಎನ್‌.ಪಿ.ಎಸ್‌. ಯೋಜನೆಯ ವ್ಯಾಪ್ತಿಗೊಳಪಟ್ಟಿಬಾರದು.

ಫ‌ಲಾನುಭವಿಗಳು ನೋಂದಾಯಿಸಿಕೊಳ್ಳಿ: ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (ಕಾಮನ್‌ ಸರ್ವೀಸ್‌ ಸೆಂಟರ್‌ (ಸಿ.ಎಸ್‌.ಸಿ) ಗಳಲ್ಲಿ ಪಿಂಚಣಿ ಯೋಜನೆಗೆ ಫ‌ಲಾನುಭವಿಗಳಾಗಿ ನೋಂದಾಯಿಸಬಹುದಾಗಿದೆ. ಅಲ್ಲದೆ, ಸಿ.ಎಸ್‌.ಸಿ ಗಳ ವಿವರಗಳು ಹತ್ತಿರದ ಎಲ್‌.ಐ.ಸಿ ಶಾಖೆಗಳು, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಇ.ಎಸ್‌.ಐ, ಕಾರ್ಪೊàರೇಷನ್‌, ಭವಿಷ್ಯ ನಿಧಿ ಸಂಘಟನೆಯ ಕಚೇರಿಗಳು, ಇಲಾಖೆಯ ವೆಬ್‌ ವಿಳಾಸಗಳಲ್ಲಿ ಪಡೆಯಬಹುದಾಗಿದೆ.

ಕಾರ್ಮಿಕರು ಆರಂಭಿಕ ವಂತಿಕೆ ಮೊತ್ತ ಆಧಾರ್‌ ಕಾರ್ಡ್‌, ಬ್ಯಾಂಕ್‌ ಖಾತೆ ವಿವರ, ಪಾಸ್‌ ಪುಸ್ತಕದಂತಹ ದಾಖಲೆಗಳೊಂದಿಗೆ ಸಾಮಾನ್ಯ ಸೇವಾ ಕೇಂದ್ರಗಳಿಗೆ ಹಾಜರಾಗಿ ನೊಂದಣಿ ಮಾಡಿಸಬಹುದು. ಮೊಬೈಲ್‌, ಹ್ಯಾಂಡ್‌ಸೆಟ್‌ನೊಂದಿಗೆ ನಾಮನಿರ್ದೇಶಿತರ ವಿವರಗಳನ್ನು ತರಬೇಕು. ಆರಂಭಿಕ ವಂತಿಕೆಯನ್ನು ನಗದು ರೂಪದಲ್ಲಿ ಪಾವತಿಸಬೇಕಾಗುತ್ತದೆ. ತದನಂತರ ಮಾಸಿಕ ವಂತಿಕೆಯನ್ನು ಫ‌ಲಾನುಭವಿಗಳ ಖಾತೆಯಿಂದ ಆಟೋ ಡೆಬಿಟ್‌ ಮೂಲಕ ಕಟಾವು ಮಾಡಿಕೊಳ್ಳಲಾಗುತ್ತದೆ.

60 ವರ್ಷದ ಬಳಿಕ ಮಾಸಿಕ ಪಿಂಚಣಿ: ಯೋಜನೆಯಡಿ ಫ‌ಲಾನುಭವಿಗಳು ಪಾವತಿಸುವ ವಂತಿಕೆಗೆ ಸಮಾನಾಂತರವಾಗಿ ಕೇಂದ್ರ ಸರ್ಕಾರವು ಸಹ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸಲಿದೆ. ಫ‌ಲಾನುಭವಿ 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3 ಸಾವಿರ ರೂ. ಕನಿಷ್ಠ ಮಾಸಿಕ ಪಿಂಚಣಿ ಪಡೆಯಲು ಅರ್ಹರಾಗಲಿದ್ದಾರೆ. ಉದಾಹರಣೆಗೆ 18 ವರ್ಷ ವಯಸ್ಸಿನ ಫ‌ಲಾನುಭವಿ 55 ರೂ.ಗಳ ಮಾಸಿಕ ವಂತಿಕೆಯನ್ನು ಪಾವತಿಸಬೇಕಾಗುತ್ತದೆ.

ಕೇಂದ್ರ ಸರ್ಕಾರವು ಸಹ 55 ರೂ. ಮಾಸಿಕ ವಂತಿಕೆಯನ್ನು ಪಾವತಿಸಲಿದೆ. ಒಟ್ಟಾರೆ 110 ರೂ. ಪಾವತಿಸಿದಂತಾಗುತ್ತದೆ. 60 ವರ್ಷ ಪೂರ್ಣಗೊಂಡ ಬಳಿಕ ಮಾಸಿಕ ಪಿಂಚಣಿ ಪಡೆಯಬಹುದಾಗಿದೆ. ಯೋಜನೆಗೆ ನೊಂದಾಯಿಸಿದವರು 10 ವರ್ಷದೊಳಗೆ ಯೋಜನೆಯಿಂದ ಹೊರ ಹೋದಲ್ಲಿ, ಅವರು ಪಾವತಿಸಿರುವ ವಂತಿಕೆಯನ್ನು ಮಾತ್ರ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿಯೊಂದಿಗೆ ಹಿಂದಿರಿಗಿಸಲಾಗುತ್ತದೆ. 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ನಂತರ ನಿರ್ಗಮಿಸಿದ್ದಲ್ಲಿ ಅವರು ಪಾವತಿಸಿದ ವಂತಿಕೆಯೊಂದಿಗೆ ಪಿಂಚಣಿ ಖಾತೆಗೆ ಜಮೆಯಾಗಿರುವ ಬಡ್ಡಿ

ಅಥವಾ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿ ಇವುಗಳಲ್ಲಿ ಯಾವುದು ಹೆಚ್ಚಿರುತ್ತದೋ ಅದನ್ನು ಪಾವತಿಸಲಾಗುತ್ತದೆ. ನಿರಂತರವಾಗಿ ವಂತಿಕೆ ಪಾವತಿಸಿ 60 ವರ್ಷದ ಒಳಗೆ ಮೃತಪಟ್ಟಲ್ಲಿ ಅಥವಾ ಶಾಶ್ವತ ಅಂಗ ನ್ಯೂನತೆಯಿಂದ ವಂತಿಗೆ ಪಾವತಿಸಲು ಸಾಧ್ಯವಾಗದಿದ್ದಲ್ಲಿ ಫ‌ಲಾನುಭವಿಯ ಪತ್ನಿ ಅಥವಾ ಪತಿ ನಂತರ ಈ ಯೋಜನೆಗೆ ಸೇರಬಹುದಾಗಿದ್ದು, ವಂತಿಗೆ ಪಾವತಿಸಿ ಮುಂದುವರೆಯಬಹುದಾಗಿದೆ. ಅಥವಾ ವಂತಿಕೆಯನ್ನು ಬಡ್ಡಿಯೊಂದಿಗೆ ಪಡೆಯಲು ಅರ್ಹರಾಗಿರುತ್ತಾರೆ.

ಫ‌ಲಾನುಭವಿಗೆ ಕಾಲಕಾಲಕ್ಕೆ ಮಾಹಿತಿ: ಪಿಂಚಣಿ ಆರಂಭಗೊಂಡ ನಂತರ ಫ‌ಲಾನುಭವಿ ಮೃತಪಟ್ಟಲ್ಲಿ ಅವರ ಪತ್ನಿ ಅಥವಾ ಪತಿ ಮಾತ್ರ ಪಿಂಚಣಿಯ ಶೇ.50ರಷ್ಟನ್ನು ಪಡೆಯಬಹುದಾಗಿದೆ. ಯೋಜನೆಯು ವಿದ್ಯುನ್ಮಾನ ಆಧಾರಿತವಾಗಿದ್ದು, ಎಸ್‌.ಎಂ.ಎಸ್‌. ಮೂಲಕ ಎಲ್ಲಾ ವ್ಯವಹಾರಗಳ ಮಾಹಿತಿಯನ್ನು ಫ‌ಲಾನುಭವಿಗೆ ಕಾಲಕಾಲಕ್ಕೆ ತಿಳಿಸಲಾಗುತ್ತದೆ. ಪಿಂಚಣಿ ಯೋಜನೆಯ ನೋಂದಣಿ ಹಾಗೂ ವಿವರಗಳಿಗೆ ಸಾಮಾನ್ಯ ಸೇವಾ ಕೇಂದ್ರ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕಚೇರಿ, ಎಲ್‌.ಐ.ಸಿ ಶಾಖಾ ಕಚೇರಿ, ಇ.ಪಿ.ಎಫ್.ಒ, ಇ.ಎಸ್‌.ಐ.ಸಿ. ಕಚೇರಿಗಳು, ವೆಬ್‌ ವಿಳಾಸ http://locator.csccloud.in ಹಾಗೂ www.licindia.in ಶುಲ್ಕ ರಹಿತ ಸಂಖ್ಯೆ 1800-267-6888 ಸಂಪರ್ಕಿಸಬಹುದಾಗಿದೆ ಎಂದು ಕಾರ್ಮಿಕ ಅಧಿಕಾರಿ ಗೀತಾ ತಿಳಿಸಿದರು.

ಸಾಮಾನ್ಯ ಸೇವಾ ಕೇಂದ್ರಗಳು, ಕಾರ್ಮಿಕ ಇಲಾಖೆ ಇನ್ನಿತರ ಕಡೆ ಫ‌ಲಾನುಭವಿಗಳ ನೋಂದಣಿಗಾಗಿ ಅನುಕೂಲ ಮಾಡಿಕೊಡಲಾಗಿದೆ. ಇಂತಹ ಕೇಂದ್ರಗಳು, ಕಚೇರಿಗಳಲ್ಲಿ ಕಾರ್ಮಿಕರು ವ್ಯಾಪಾರಿಗಳಿಗೆ ಉತ್ತಮ ಸೇವೆ ನೀಡಬೇಕು. ಯೋಜನೆಯ ಪರಿಪೂರ್ಣ ಮಾಹಿತಿ ಒದಗಿಸಬೇಕು. ಒಟ್ಟಾರೆ ಜಿಲ್ಲೆಯಲ್ಲಿ ಪಿಂಚಣಿ ಯೋಜನೆಯನ್ನು ಅರ್ಹರೆಲ್ಲರೂ ಪಡೆಯುವಂತಾಗಬೇಕು.
-ಬಿ.ಬಿ. ಕಾವೇರಿ, ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕ ಸಂಘಗಳು, ಕಾರ್ಮಿಕ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಸಂಘ-ಸಂಸ್ಥೆಗಳು ಅಸಂಘಟಿತ ಕಾರ್ಮಿಕರಿಗೆ ಮಾಸಿಕ ಪಿಂಚಣಿ ಒದಗಿಸುವ ನೂತನ ಮಹತ್ವಾಕಾಂಕ್ಷಿ ಪಿಂಚಣಿ ಯೋಜನೆಗೆ ನೋಂದಣಿ ಮಾಡಿಸಲು ಶ್ರಮಿಸಬೇಕು.
-ಕೆ. ಗೀತಾ, ಜಿಲ್ಲಾ ಕಾರ್ಮಿಕ ಹಿರಿಯ ನಿರೀಕ್ಷಕಿ

* ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.