ಕನ್ನಡ ತಮಿಳು ಶಾಲೆಗಳನ್ನು ಮುಚ್ಚಲು ಹುನ್ನಾರ

6-8ನೇ ತರಗತಿಗೆ ದಾಖಲಾತಿ ಇಲ್ಲ, 6 ಸಾವಿರ ರೂ. ಶುಲ್ಕ 44 ಸಾವಿರಕ್ಕೆ ಹೆಚ್ಚಳ , ವಡ್ಡರದೊಡ್ಡಿಯಲ್ಲಿ ಶಾಲೆ ಮುಚ್ಚಿದರೆ ಹೋರಾಟ

Team Udayavani, Feb 24, 2021, 12:33 PM IST

Untitled-1

ಚಾಮರಾಜನಗರ: ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಡ್ಡರದೊಡ್ಡಿಯಲ್ಲಿರುವ ಸೇಂಟ್‌ ಮೇರಿಸ್‌ ತಮಿಳು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿ ಹಾಗೂ ಸೇಂಟ್‌ ಚಾರ್ಲ್ಸ್‌ ಗ್ರಾಮಾಂತರ ಪ್ರೌಢಶಾಲೆಯಲ್ಲಿ 8ನೇ ತರಗತಿ ಮುಚ್ಚದಂತೆ ಸರ್ಕಾರ ಕ್ರಮ ವಹಿಸಬೇಕು ಎಂದು ಕರ್ನಾಟಕ ತಮಿಳು ಶಾಲೆ ಮತ್ತು ಮಹಾವಿದ್ಯಾಲಯ ಶಿಕ್ಷಕರ ಸಂಘ ಅಧ್ಯಕ್ಷ ಎ.ಧನಂಜಯನ್‌ ಒತ್ತಾಯಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹನೂರು ತಾಲೂಕಿನ ವಡ್ಡರದೊಡ್ಡಿಯಲ್ಲಿ ಮೈಸೂರು ದಿ ಡೈಯೋಸಿಸಸ್‌ ಎಜುಕೇಶನ್‌ ಸೊಸೈಟಿ ಕಳೆದ 25 ವರ್ಷಗಳಿಂದ ಸೇಂಟ್‌ ಮೇರಿಸ್‌ ತಮಿಳುಹಿರಿಯ ಪ್ರಾಥಮಿಕ ಶಾಲೆ ನಡೆಸುತ್ತಿದ್ದು, ಧಾರ್ಮಿಕ ಹಾಗೂ ಭಾಷಾ ಅಲ್ಪಸಂಖ್ಯಾತರಾದ ನಮ್ಮ ಮಕ್ಕಳಿಗೆ ಮಾತೃ ಭಾಷೆಯಾದ ತಮಿಳು ಮಾಧ್ಯಮದಲ್ಲಿ ವಿದ್ಯಾಭ್ಯಾಸ ನೀಡುತ್ತಿದ್ದು, ಇದರಿಂದ ನೂರಾರು ವಿದ್ಯಾರ್ಥಿಗಳು ತಮ್ಮ ಪ್ರಾಥಮಿಕ ಶಿಕ್ಷಣ ಪಡೆದು ತಮ್ಮ ಜೀವ  ನೋಪಾಯ ಕಂಡುಕೊಂಡಿದ್ದಾರೆ. ಆದರೆ, ಈ ಶಾಲೆಯ ಆಡಳಿತ ಮಂಡಳಿಯು 2020-21ನೇ ಶೈಕ್ಷಣಿಕ ಸಾಲಿನಿಂದ 6 ಮತ್ತು 8ನೇ ತರಗತಿಗೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳದೇ ವಿದ್ಯಾರ್ಥಿಗಳಿಗೆ ಒತ್ತಾಯ  ಪೂರ್ವಕವಾಗಿ ವರ್ಗಾವಣೆ ಪತ್ರವನ್ನು ನೀಡಿ ಶಾಲೆ ಯನ್ನು ಮುಚ್ಚಿಸಲು ಮುಂದಾಗಿದೆ ಎಂದು ಆರೋಪಿಸಿದರು.

6ನೇ ತರಗತಿಗೆ ಸೇರ್ಪಡೆಯಾಗಲು ಬರುವ ವಿದ್ಯಾರ್ಥಿ ಗಳಿಗೆ ಇದುವರೆಗೆ 3 ಸಾವಿರ ರೂ.ಗಳನ್ನು ವಾರ್ಷಿಕವಾಗಿ ಶುಲ್ಕವಾಗಿ ಪಡೆಯುತ್ತಿತ್ತು. ಈಗ ಏಕಾಏಕಿ 9,037 ರೂ.ಗೆ ಶುಲ್ಕ ಹೆಚ್ಚಳ ಮಾಡಲಾಗಿದೆ ಎಂದರು.

ದಂಧೆ: ಅದೇ ರೀತಿಯಲ್ಲಿ 8ನೇ ತರಗತಿಗೆ ಸೇರ್ಪಡೆಯಾಗಲು ಮುಂದೆ ಬರುವ ವಿದ್ಯಾರ್ಥಿಗಳಿಗೆ ಇದುವರೆಗೆ ವಾರ್ಷಿಕ ಶುಲ್ಕವಾಗಿ 6 ಸಾವಿರ ರೂ. ಪಡೆಯಲಾಗುತ್ತಿತ್ತು. ಈಗ ಒಮ್ಮೆಗೇ 44,250 ರೂ.ಗೆ ಏರಿಕೆ ಮಾಡಲಾಗಿದೆ. ಈ ಬಗ್ಗೆ ಪೋಷಕರ ಅಭಿಪ್ರಾಯ ಸಂಗ್ರಹಿಸಿಲ್ಲ. ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿಲ್ಲ. ಆಡಳಿತ ಮಂಡಳಿಯ ಹಣ ಮಾಡುವ ದಂಧೆಯಾಗಿದೆ. ತಮಿಳು ಭಾಷೆಯನ್ನು ಮಾತೃಭಾಷೆಯನ್ನಾಗಿಸಿ ಕೊಂಡಿರುವ ವಡ್ಡರದೊಡ್ಡಿ ಗ್ರಾಮದ ವಿದ್ಯಾರ್ಥಿ ಗಳಿಗೆ ಕನ್ನಡ ಮಾಧ್ಯಮದಲ್ಲಿ ಅವಕಾಶವನ್ನು ನಿರಾಕರಿಸಲಾಗಿದೆ ಎಂದು ದೂರಿದರು.

ಮಾತೃಭಾಷೆ ಶಿಕ್ಷಣ: ಈ ಶಾಲೆಗಳು ಮುಚ್ಚಿ ಹೋದರೆ ವಡ್ಡರದೊಡ್ಡಿ ಗ್ರಾಮದ ನೂರಾರು ವಿದ್ಯಾರ್ಥಿಗಳು 6 ಕಿ.ಮೀ. ದೂರದಲ್ಲಿರುವ ಮಾರ್ಟಳ್ಳಿ ಗ್ರಾಮದಲ್ಲಿರುವಆಂಗ್ಲ ಮಾಧ್ಯಮ ಶಾಲೆಗೆ ಹೋಗಬೇಕಾಗುತ್ತದೆ. ಇದರಿಂದ ತಮಿಳು ಮತ್ತು ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿದ್ದ ಮಕ್ಕಳು ಮಾತೃಭಾಷಾ ಶಿಕ್ಷಣದಿಂದ ವಂಚಿತ ರಾಗಬೇಕಾಗುತ್ತದೆ. ಆದ್ದರಿಂದ ಗ್ರಾಮದಲ್ಲಿ ಈ ಹಿಂದೆ ಪಡೆಯುತ್ತಿದ್ದಂತೆ ಶುಲ್ಕ ತೆಗೆದುಕೊಳ್ಳಬೇಕು. ಜೊತೆಗೆ ಶಾಲೆಯನ್ನು ಗ್ರಾಮದಲ್ಲಿಯೇ ಮುಂದುವರಿಯಲು ಅವಕಾಶ ಕಲ್ಪಿಸಬೇಕು. ಈ ಸಂಬಂಧ ಈಗಾಗಲೇ ಡಿಡಿಪಿಐ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಪ್ರತಿಭಟನೆ ಎಚ್ಚರಿಕೆ: ಯಾವುದೇ ಕಾರಣಕ್ಕೂ ಈ ಶಾಲೆಗಳನ್ನು ಮುಚ್ಚಿಹೋಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಗ್ರಾಮದ ಮಕ್ಕಳು ಶಿಕ್ಷಣದಿಂದ ವಂಚಿತರಾಗುವುದನ್ನು ತಡೆಗಟ್ಟಬೇಕೆಂದು ಧನಂ ಜಯನ್‌ ಒತ್ತಾಯಿಸಿದರು. ಒಂದು ವೇಳೆ ಶಾಲೆಮುಚ್ಚಿದರೆ ಮಕ್ಕಳೊಂದಿಗೆ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಗುವುದು ಎಚ್ಚರಿಸಿದರು.

ಕಾವೇರಿ ನೀರಿನ ಸಂಪರ್ಕ ಕಲ್ಪಿಸಿ: ಕರ್ನಾಟಕ ತಮಿಳು ಕಳಗಂ ಪ್ರಧಾನ ಕಾರ್ಯದರ್ಶಿ ಅರ್ಪುದ ರಾಜ್‌ ಮಾತನಾಡಿ, ಮಾರ್ಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಹಳ್ಳಿಗಳಿಗೆ ದಂಟಳ್ಳಿ ಮಾರ್ಗವಾಗಿ ಕಾವೇರಿ ನದಿಯಿಂದ ವ್ಯವಸಾಯ ಹಾಗೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿಕೊಡುವ ಮೂಲಕಈ ಭಾಗದಲ್ಲಿ ಅಂತರ್ಜಲ ವೃದ್ಧಿ, ಕೃಷಿಕರು, ಜನತೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಗ್ರಾ.ಪಂ.ಸದಸ್ಯ ಪಾಲ್‌ರಾಜ್‌, ದೇವಸಗಾಯಂ, ವಡ್ಡರದೊಡ್ಡಿಯ ಪಾಲ್‌ರಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.