ಹನೂರು ಪಪಂ ಅಧಿಕಾರಕ್ಕಾಗಿ ಮೈತ್ರಿ ಸಾಧ್ಯತೆ


Team Udayavani, Mar 15, 2020, 3:00 AM IST

hanuru-pp

ಹನೂರು: ಪಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗಿದ್ದು, ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ- ಬಿಗೆ ಮೀಸಲಾಗಿದೆ. ಕುಟುಂಬ ರಾಜಕಾರಣಕ್ಕೆ ಹೆಸರಾಗಿರುವ ಹನೂರು ಕ್ಷೇತ್ರದಲ್ಲಿ ಯಾರು ಯಾರ ಜೊತೆ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎಂಬ ಕುತೂಹಲ ಕೆರಳಿಸಿದೆ.

ಹನೂರು ಪಪಂನಲ್ಲಿ 13 ವಾರ್ಡ್‌ಗಳಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯಲು 7 ಸ್ಥಾನಗಳ ಅವಶ್ಯವಿದೆ. ಆದರೆ, ಕಳೆದ 2019ರ ಮೇನಲ್ಲಿ ನಡೆದ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್‌-4, ಜೆಡಿಎಸ್‌-6 ಮತ್ತು ಬಿಜೆಪಿ-3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತವಿಲ್ಲ. ಈ ಹಿನ್ನೆಲೆ ಅತಂತ್ರ ಪಂಚಾಯ್ತಿ ನಿರ್ಮಾಣವಾಗಿತ್ತು. ಇದೀಗ ಸರ್ಕಾರ ಮೀಸಲಾತಿ ನಿಗದಿಪಡಿಸಿದ್ದು, ಪಟ್ಟಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಕುಟುಂಬ ರಾಜಕಾರಣಕ್ಕೆ ಹೆಸರಾದ ಕ್ಷೇತ್ರ: ಹನೂರು ಕ್ಷೇತ್ರವು ಕುಟುಂಬ ರಾಜಕಾರಣಕ್ಕೆ ಹೆಸರಾದ ಕ್ಷೇತ್ರವಾಗಿದೆ. ಇಲ್ಲಿ ಹಿಂದಿನಿಂದಲೂ ಮಾಜಿ ಸಚಿವರಾಗಿದ್ದ ದಿ.ರಾಜೂಗೌಡ ಮತ್ತು ದಿ.ನಾಗಪ್ಪ ಕುಟುಂಬಗಳ ಮಧ್ಯೆಯೇ ನೇರಾ ಹಣಾಹಣಿ ನಡೆದಿತ್ತು. ಆದರೆ, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ 3ನೇ ಶಕ್ತಿಯೂ ಕೂಡ ಉದಯವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಎರಡೂ ಕುಟುಂಬಗಳಿಗೂ ಸೆಡ್ಡು ಹೊಡೆದು ಜೆಡಿಎಸ್‌ ಅಭ್ಯರ್ಥಿ ಮಂಜುನಾಥ್‌ 54 ಸಾವಿರ ಮತ ಪಡೆದಿದ್ದರು.

ಇದೀಗ 3ನೇ ಶಕ್ತಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಕಾಂಗ್ರೆಸ್‌ – ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆಯೇ ಅಥವಾ ಜೆಡಿಎಸ್‌ ಜೊತೆ ಕಾಂಗ್ರೆಸ್‌ ಅಥವಾ ಬಿಜೆಪಿ ಮೈತ್ರಿ ಮಾಡಿಕೊಳ್ಳಿದೆಯೇ ಎಂಬುದು ಕುತೂಹಲವಾಗಿದೆ. ಆದರೆ, ಶಾಸಕ ನರೇಂದ್ರ ಮತ್ತು ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರು ಜೆಡಿಎಸ್‌ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬದ್ಧ ವೈರಿಗಳ ನಡುವೆಯೇ ಮೈತ್ರಿ ಏರ್ಪಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಕಾಂಗ್ರೆಸ್‌ಗಿಲ್ಲ ಅಧಿಕಾರ ಭಾಗ್ಯ: ಹನೂರು ಪಟ್ಟಣವು ಕಾಂಗ್ರೆಸ್‌ ಭದ್ರಕೋಟೆಯಾಗಿದ್ದು, ಗ್ರಾಪಂ ಕೇಂದ್ರ ಸ್ಥಾನವಾದಾಗಿನಿಂದಲೂ ಕಾಂಗ್ರೆಸ್‌ ಅಧಿಕಾರ ನಡೆಸುತ್ತಾ ಬಂದಿತ್ತು. ಆದರೆ, 2019ರ ಮೇನಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷದಲ್ಲಿ ಉಂಟಾದ ಟಿಕೆಟ್‌ ಹಂಚಿಕೆ ಗೊಂದಲ, ಇನ್ನಿತರ ಕಾರಣಗಳಿಂದ ಕೇವಲ 4 ಸ್ಥಾನಗಳನ್ನಷ್ಟೇ ಗಳಿಸಿತ್ತು.

ಇದೀಗ ಉಂಟಾಗಿರುವ ಅತಂತ್ರ ಪರಿಸ್ಥಿತಿಯ ಲಾಭ ಪಡೆದು, ಯಾವ ಪಕ್ಷ ತಮ್ಮೊಂದಿಗೆ ಕೈ ಜೋಡಿಸಿ ಮೊದಲ ಅವಧಿಗೆ ನಮಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡುತ್ತದೆಯೋ ಆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಲೆಕ್ಕಾಚಾರವಾಗಿತ್ತು. ಬದಲಾದ ಮೀಸಲಾತಿ ಅನ್ವಯ ಅಧ್ಯಕ್ಷ ಹುದ್ದೆ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಆದರೆ, ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿರುವ ಎಲ್ಲರೂ ಪುರುಷ ಸದಸ್ಯರೇ ಆಗಿರುವುದರಿಂದ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕಾರ ದೊರಕದಂತಾಗಿದೆ.

ಜೆಡಿಎಸ್‌ ಜೊತೆ ಮೈತ್ರಿಗೆ ಒಲವಿಲ್ಲ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಫರ್ಧಿಸಿ ಹಾಲಿ ಮತ್ತು ಮಾಜಿ ಶಾಸಕರು ಇಬ್ಬರಿಗೂ ನಿದ್ದೆಗೆಡಿಸಿದ್ದ ಜೆಡಿಎಸ್‌ ಪಕ್ಷವನ್ನು ಅಧಿಕಾರದಿಂದ ದೂರವಿಡಬೇಕು ಎಂಬುದು ಹಾಲಿ ಶಾಸಕ ನರೇಂದ್ರ ಮತ್ತು ಮಾಜಿ ಶಾಸಕಿ ಪರಿಮಳಾ ನಾಗಪ್ಪ ನಿರ್ಧಾರವಾಗಿದೆ. ಒಂದು ಹಂತದಲ್ಲಿ ಶಾಸಕ ನರೇಂದ್ರರಿಗಿಂತ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರಿಗೆ ಜೆಡಿಎಸ್‌ ಮೇಲೆ ಅಸಮಾಧಾನವಿದೆ ಎನ್ನಲಾಗಿದ್ದು,

ತಮ್ಮ ಪುತ್ರ ಪ್ರೀತನ್‌ ನಾಗಪ್ಪ ಅವರ ಸೋಲಿಗೆ ಅವರೇ ಕಾರಣ ಎಂಬ ಕೋಪವಿದೆ. ಈ ಹಿನ್ನೆಲೆ ಪರಿಮಳಾ ನಾಗಪ್ಪ ಅವರು ಜೆಡಿಎಸ್‌ ಜೊತೆ ಮೈತ್ರಿಗೆ ಸಿದ್ಧರಿಲ್ಲ. ಜೆಡಿಎಸ್‌ಗೆ ಅಧಿಕಾರ ನೀಡಿದಲ್ಲಿ ಮುಂದೆ ಆಗಬಹುದಾದ ಅಡೆ-ತಡೆಗಳನ್ನು ಗಮನದಲ್ಲಿಟ್ಟುಕೊಂಡು ಕುಟುಂಬ ರಾಜಕಾರಣ ಉಳಿಸಿಕೊಳ್ಳಲು ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆಯೇ ಮೈತ್ರಿ ಸಾಧ್ಯತೆಗಳಿವೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಐವರು ಮಹಿಳಾ ಸದಸ್ಯರು ಆಯ್ಕೆ: ಹನೂರು ಪಪಂ 13 ಸ್ಥಾನಗಳಲ್ಲಿ ಹಾಲಿ 5 ಸ್ಥಾನಗಳಲ್ಲಿ ಮಹಿಳಾ ಸದಸ್ಯರು ಆಯ್ಕೆಯಾಗಿದ್ದಾರೆ. ಇದರಲ್ಲಿ ಬಿಜೆಪಿಯಿಂದ 12 ವಾರ್ಡ್‌ ಸದಸ್ಯೆ ಚಂದ್ರಮ್ಮ, 5ನೇ ವಾರ್ಡ್‌ನ ರೂಪ ಆಯ್ಕೆಯಾಗಿದ್ದು, ಜೆಡಿಎಸ್‌ನಿಂದ 1ನೇ ವಾರ್ಡ್‌ನ ಮುಮ್ತಾಜ್‌ಭಾನು, 4ನೇ ವಾರ್ಡ್‌ನ ಮಂಜುಳಾ, 7ನೇ ವಾರ್ಡ್‌ನ ಪವಿತ್ರಾ ಆಯ್ಕೆಯಾಗಿದ್ದಾರೆ. ರೂಪ ಮತ್ತು ಮಂಜುಳಾ ಪ.ಜಾ ಮೀಸಲು ಕ್ಷೇತ್ರದಿಂದ, ಮುಮ್ತಾಜ್‌ ಭಾನು ಹಿಂದುಳಿದ ವರ್ಗ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಸಾಮಾನ್ಯ ವರ್ಗದಿಂದ ಬಿಜೆಪಿಯ ಚಂದ್ರಮ್ಮ ಮತ್ತು ಜೆಡಿಎಸ್‌ನ ಪವಿತ್ರಾ ಆಯ್ಕೆಯಾಗಿದ್ದಾರೆ.

ಆದ್ದರಿಂದ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರುವುದರಿಂದ ಬಿಜೆಪಿಯಿಂದ ಚಂದ್ರಮ್ಮ ಮತ್ತು ಜೆಡಿಎಸ್‌ನಿಂದ ಪವಿತ್ರಾ ಮಧ್ಯೆ ಪೈಪೋಟಿ ಏರ್ಪಟ್ಟಿದೆ ಎನ್ನಲಾಗುತ್ತಿದೆ. ಒಂದೊಮ್ಮೆ ಕಾಂಗ್ರೆಸ್‌ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಲ್ಲಿ 12ನೇ ವಾರ್ಡ್‌ನ ಸದಸ್ಯೆ ಚಂದ್ರಮ್ಮ ಅಧ್ಯಕ್ಷರಾಗಲಿದ್ದಾರೆ. ಅಥವಾ ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಲ್ಲಿ ಅಧಿಕಾರ ಹಂಚಿಕೆಯಾಗುವ ಸಾಧ್ಯತೆಗಳಿವೆ. ಒಟ್ಟಾರೆ ಹನೂರು ಪಪಂ ಚುಕ್ಕಾಣಿ ಹಿಡಿಯಲು ಬದ್ಧವೈರಿಗಳಂತೆ ಕಾದಾಡುತ್ತಿದ್ದ ಎರಡೂ ಕುಟುಂಬಗಳು ಮೈತ್ರಿ ಮಾಡಿಕೊಳ್ಳಲಿದೆಯೇ ಅಥವಾ 3ನೇ ಶಕ್ತಿಯೊಂದಿಗೆ ಕೈ ಜೊಡಿಸಲಿದ್ದಾರೆಯೇ ಎಂಬುದು ಕುತೂಹಲ ಕೆರಳಿಸಿದೆ.

ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಪ್ರಕಟಗೊಂಡಿದ್ದು, ದಿನಾಂಕ ಇನ್ನೂ ನಿಗದಿಯಾಗಿಲ್ಲ. ದಿನಾಂಕ ನಿಗದಿಯಾದ ಬಳಿಕ ಪಕ್ಷದ 4 ಸದಸ್ಯರು, ಮುಖಂಡರು, ಕಾರ್ಯಕರ್ತರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು.
-ಆರ್‌. ನರೇಂದ್ರ, ಶಾಸಕರು, ಹನೂರು ಕ್ಷೇತ್ರ

ನಾವು ಯಾವ ಪಕ್ಷದೊಂದಿಗೂ ಮೈತ್ರಿಗೆ ಸಿದ್ಧವಿಲ್ಲ. ಆದ್ದದರಿಂದ ನಾವು ವಿರೋಧ ಪಕ್ಷದಲ್ಲಿಯೇ ಕುಳಿತುಕೊಳ್ಳಲು ಸಿದ್ಧರಿದ್ದೇವೆ.
-ಪರಿಮಳಾ ನಾಗಪ್ಪ, ಮಾಜಿ ಶಾಸಕಿ

* ವಿನೋದ್‌ ಎನ್‌ ಗೌಡ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.