ಅರಣ್ಯ ರಕ್ಷಕನಿಂದಲೇ ಬೆಲೆಬಾಳುವ ಮರಗಳ ಭಕ್ಷಣೆ


Team Udayavani, Feb 16, 2017, 3:45 AM IST

Ban160217.jpg

ಗುಂಡ್ಲುಪೇಟೆ: ಬಂಡಿಪುರ ಹುಲಿ ಯೋಜನೆ ವ್ಯಾಪ್ತಿಯ ಅರಣ್ಯದಲ್ಲಿ ಹುಲ್ಲುಕಡ್ಡಿಯನ್ನೂ ಹೊರತೆಗೆಯಬಾರದು ಎಂಬ ನಿಯಮವಿದ್ದರೂ ಬಂಡಿಪುರ ಅಭಯಾರಣ್ಯದ ಸಿಬ್ಬಂದಿಯೊಬ್ಬ ಕಾಡು ಮರಗಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಬಂಡಿಪುರ ಹುಲಿ ಯೋಜನೆಯ ಮೊಳೆಯೂರು ವಲಯಕ್ಕೆ ಸೇರಿದ ಹೊಸಕೋಟೆ ಬೀಟ್‌ನ ಅರಣ್ಯ ರಕ್ಷಕ, ತಂಗಮಣಿ ಎಂಬುವರು ತಮ್ಮ ವಾಸದ ಬಿ.ಮಟೆRರೆ ಮನೆಯಲ್ಲಿ ಸುಮಾರು 3 ಟ್ರ್ಯಾಕ್ಟರ್‌ಗಳಷ್ಟು ಮರಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದಾರೆ. ಮೊಳೆಯೂರು ಅರಣ್ಯವಲಯದ ಹೊಸಕೋಟೆ ಬೀಟ್‌ನಲ್ಲಿ ಆನೆ ಕಂದಕ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶ್ರೀಗಂಧದ ಮರ, ತೇಗ ಸೇರಿದಂತೆ ಕಂದಕ ನಿರ್ಮಾಣ ಮಾರ್ಗದಲ್ಲಿನ ಕಾಡು ಮರಗಳನ್ನು ತೆರವು ಮಾಡಲಾಗಿದೆ. ಅರಣ್ಯ ಕಾಯ್ದೆಯ ಪ್ರಕಾರ ಸಂರಕ್ಷಿತ ಪ್ರದೇಶದಲ್ಲಿನ ಮರಮಟ್ಟುಗಳನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಿಸುವಂತಿಲ್ಲ. ಆದರೆ, ಇಲ್ಲಿ ಅರಣ್ಯ ಸಿಬ್ಬಂದಿಯೇ ಮರಗಳನ್ನು ಶೇಖರಿಸಿದ್ದಾರೆ. ಅಲ್ಲದೆ, ಅವುಗಳನ್ನು ಮಾರಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ, ಹಿರಿಯ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲಿಸಿ, ತನಿಖೆ ಮಾಡಿ, ತಪ್ಪಿತಸ್ಥ ಅರಣ್ಯ ಸಿಬ್ಬಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹ.

ಅಲ್ಲದೆ, ಕಳೆದ ತಿಂಗಳು ವನ್ಯಜೀವಿ ಪರಿಪಾಲಕ ಹುದ್ದೆ ಖಾಲಿಯಾಗಿದೆ. ಹೀಗಾಗಿ, ಅರಣ್ಯ ಪ್ರದೇಶದೊಳಗೆ ಏನು ನಡೆಯುತ್ತಿದೆ ಎಂಬುದರ ನಿಗಾ ಇಡುವುದು ಕೂಡ ಕಷ್ಟವಾಗುತ್ತಿದೆ. ಈ ಹಿಂದೆ, ಮೂಲೆಹೊಳೆ ಚೆಕ್‌ಪೋಸ್ಟ್‌ ಬಳಿ ಕೊಠಡಿ ನಿರ್ಮಾಣಕ್ಕಾಗಿ ಕಾಡು ಮರಗಳನ್ನು ಕಟಾವು ಮಾಡಿ ಸ್ವಂತಕ್ಕೆ ಬಳಕೆ ಮಾಡಿಕೊಳ್ಳಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು.

ನಾನು ಕೆಲ ದಿನಗಳಿಂದ ರಜೆಯಲ್ಲಿದ್ದೇನೆ. ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಕೂಡಲೇ ಸಂಬಂಧಪಟ್ಟ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಂದ ವರದಿ ಪಡೆದು, ತಪ್ಪಿತಸ್ಥರ ವಿರುದ್ದ ಕ್ರಮ ಜರುಗಿಸಲಾಗುವುದು.
– ಟಿ.ಹೀರಾಲಾಲ್‌, ಹುಲಿ ಯೋಜನೆ ನಿರ್ದೇಶಕ, ಬಂಡಿಪುರ

ಹುಲಿ ಯೋಜನೆ ವ್ಯಾಪ್ತಿಯಲ್ಲಿ  ಹುಲ್ಲುಕಡ್ಡಿಯನ್ನೂ ಹೊರಗೆ ತೆಗೆಯುವಂತಿಲ್ಲ. ಮರಗಳು ಅಲ್ಲಿಯೇ ಕೊಳೆಯಬೇಕು. ಸಾಮಾಜಿಕ ವಲಯ ವ್ಯಾಪ್ತಿಯಲ್ಲಿ ಬಿದ್ದ ಮರಗಳನ್ನು ಮಾತ್ರ ಹರಾಜು ಮಾಡಬಹುದು. ಅರಣ್ಯ ಸಿಬ್ಬಂದಿ ಮರಗಳ ಸಂಗ್ರಹ ಮಾಡುತ್ತಿರುವುದು ಹಾಗೂ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. 
– ಎಂ.ಎನ್‌.ನವೀನ್‌ ಕುಮಾರ, ಮಾಜಿ ವನ್ಯಜೀವಿ ಪರಿಪಾಲಕ

– ಸೋಮಶೇಖರ್‌

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.