ಪ್ರವಾಹ ಪೀಡಿತರ ಸ್ಥಳಾಂತರಕ್ಕೆ ಸಿದ್ಧತೆ: ಮಹೇಶ್
Team Udayavani, Aug 11, 2020, 8:32 AM IST
ಕೊಳ್ಳೇಗಾಲ: ಕಾವೇರಿ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಎದುರಾದರೆ, ಎಲ್ಲಾ ಪ್ರವಾಹ ಪೀಡಿತರನ್ನು ತಾಲೂಕಿನ ತಿಮ್ಮರಾಜೀಪುರ ಗ್ರಾಮದ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸ್ಥಳಾಂತರ ಮಾಡಿ, ಮೂಲ ಸೌಕರ್ಯ ಕಲ್ಪಿಸಲಾಗುವುದು. ಗ್ರಾಮಸ್ಥರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಎನ್.ಮಹೇಶ್ ಹೇಳಿದರು.
ಸೋಮವಾರ ತಾಲೂಕಿನ ಕಾವೇರಿ ನದಿ ತೀರದ ಗ್ರಾಮಗಳಾದ ಮುಳ್ಳೂರು, ಹಳೇ ಹಂಪಾಪುರ, ದಾಸನಪುರ, ಹರಳೆ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿ, ಭಾನುವಾರ 1.25 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗಿತ್ತು. ಇದರಿಂದ ಕಾವೇರಿ ನದಿ ತೀರದ ಗ್ರಾಮದ ರೈತರ ಜಮೀನುಗಳು ಜಲಾವೃತಗೊಂಡಿತ್ತು. ಸೋಮವಾರ ಕೆಆರ್ಎಸ್ ನಿಂದ 30 ಸಾವಿರ ಕ್ಯೂಸೆಕ್, ಕಬಿನಿಯಿಂದ 16 ಸಾವಿರ ಕ್ಯೂಸೆಕ್ ನೀರು ಸೇರಿದಂತೆ ಒಟ್ಟು 46 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಗ್ರಾಮಸ್ಥರು ಪ್ರವಾಹದ ಭೀತಿಗೆ ಒಳಗಾಗಬಾರದು ಎಂದರು.
ಮಳೆ ಕಡಿಮೆ: ಕೊಡಗಿನಲ್ಲಿ ಮಳೆ ಕಡಿಮೆಯಾಗಿದೆ. ಇದರಿಂದ ಪ್ರವಾಹ ಹೆಚ್ಚಾಗುವುದಿಲ್ಲ. ನೀರು ಸಂಪೂರ್ಣ ಇಳಿಮುಖವಾಗಿರುವುದರಿಂದ ಗ್ರಾಮಸ್ಥರು ಭಯಪಡಬಾರದು. ರೈತರ ನೆರವಿಗಾಗಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ರೈತರ ಬೆಳೆ ಹಾನಿ ಅಂದಾಜು ಪಟ್ಟಿ ತಯಾರಿಸಬೇಕು. ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರದಿಂದ ಪರಿಹಾರ ನೀಡುವುದಾಗಿ ಹೇಳಿದರು.
ತಹಶೀಲ್ದಾರ್ ಕೆ.ಕುನಾಲ್, ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ಅಶೋಕ್, ಪಟ್ಟಣ ಠಾಣೆಯ ರಾಜೇಂದ್ರ, ಪಿಡಿಒಗಳಾದ ರಾಮೇಗೌಡ, ರಾಜೇಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…