18+ ಮಂದಿಗೆ ಲಸಿಕೆ ನೀಡಲು ಸಿದ್ಧತೆ ಕೈಗೊಳ್ಳಿ
Team Udayavani, Apr 22, 2021, 2:38 PM IST
ಚಾಮರಾಜನಗರ: ಮೇ 1 ರಿಂದ 18 ವರ್ಷತುಂಬಿದ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ.ಇದಕ್ಕಾಗಿ ವ್ಯಾಪಕವಾದ ಸಿದ್ಧತೆಯನ್ನುಈಗಿನಿಂದಲೇ ಮಾಡಿಕೊಳ್ಳಬೇಕು ಎಂದುಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಬುಧವಾರ ಕೋವಿಡ್ ನಿಯಂತ್ರಣ ಕುರಿತುಹಿರಿಯ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇಆರಂಭಿಸಿರುವ ಲಸಿಕಾ ಅಭಿಯಾನದಪ್ರಯೋಜನವನ್ನು ಹಾಡಿ ಪೋಡುಗಳಗಿರಿಜನರು ಪಡೆದುಕೊಳ್ಳಲು ಆಯಾಸಮುದಾಯಗಳ ಮುಖಂಡರ ಸಹಕಾರಪಡೆದು ಉತ್ತೇಜನ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಸೋಂಕು ಹರಡದಂತೆಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು. ಕೋವಿಡ್ ವಿರುದ್ಧಸಮರದಲ್ಲಿ ಗೆಲುವು ಸಾಧಿಸಲು ಗ್ರಾಪಂಯಿಂದಹಿಡಿದು ಎಲ್ಲಾ ಹಂತದ ಜನಪ್ರತಿನಿಧಿಗಳು,ಅಧಿಕಾರಿಗಳು ಒಟ್ಟಾಗಿ ಶ್ರಮಿಸೋಣ ಎಂದರು.ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳುಲಭ್ಯವಾಗಬೇಕು.
ಖಾಸಗಿ ಆಸ್ಪತ್ರೆಗಳಲ್ಲೂಹಾಸಿಗೆ ಕಾಯ್ದಿರಿಸಬೇಕು. ಆಮ್ಲಜನಕಪೂರೈಕೆಯಲ್ಲಿ ವ್ಯತ್ಯಯವಾಗದಂತೆ ದಾಸ್ತಾನುಮಾಡಿಕೊಳ್ಳಬೇಕು. ಯಾವುದೇ ದೂರುಗಳಿಗೆಅವಕಾಶವಾಗದಂತೆ ಔಷದೋಪಚಾರಗಳುಸೋಂಕಿತರಿಗೆ ದೊರೆಯುವಂತೆನಿಗಾವಹಿಸಬೇಕು ಎಂದು ತಿಳಿಸಿದರು.
ಇದೇ ವೇಳೆ ಮಾತನಾಡಿದ ಶಾಸಕ ಆರ್.ನರೇಂದ್ರ, ಹೋಂ ಐಸೋಲೇಷನ್ ಆಯ್ಕೆಮಾಡಿಕೊಳ್ಳುವವರಿಗೆ ಸೂಕ್ತ ಮಾರ್ಗದರ್ಶನನೀಡಬೇಕು ಎಂದರು.ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿಮಾತನಾಡಿ, ಹಾಡಿಗಳಲ್ಲಿರುವ ಆಶ್ರಮಶಾಲೆಗಳಲ್ಲಿ ಲಸಿಕಾ ಕೇಂದ್ರಕ್ಕೆ ವ್ಯವಸ್ಥೆ ಕಲ್ಪಿಸಿಆಯಾ ಭಾಗದಲ್ಲೇ ಲಸಿಕೆ ಪಡೆಯಲು ಅರಣ್ಯವಾಸಿಗಳು, ಗಿರಿಜನರಿಗೆ ಅನುಕೂಲಮಾಡಿಕೊಡಬೇಕೆಂದರು.
ಕೃಷಿಗೆ ತೊಂದರೆಯಾಗದಂತೆ ರಸಗೊಬ್ಬರ,ಬಿತ್ತನೆ ಬೀಜ ಒದಗಿಸುವ ಕಾರ್ಯವನ್ನು ಕೃಷಿಇಲಾಖೆ ಮಾಡಬೇಕು. ತೋಟಗಾರಿಕೆ ಇಲಾಖೆಸಹ ರೈತರಿಗೆ ಪೂರಕ ಸೌಲಭ್ಯ ಕಲ್ಪಿಸಬೇಕುಎಂದು ಸಚಿವರು ಸೂಚಿಸಿದರು.ಜಿಪಂ ಅಧ್ಯಕ್ಷೆ ಎಂ. ಅಶ್ವಿನಿ, ಉಪಾಧ್ಯಕ್ಷೆಶಶಿಕಲಾ, ಎಸ್ಪಿ ಸಾರಾ ಥಾಮಸ್, ಜಿಪಂ ಸಿಇಒಬೋಯರ್ ನಾರಾಯಣ್ ರಾವ್, ನಗರಸಭೆಅಧ್ಯಕ್ಷೆ ಆಶಾ ನಟರಾಜು, ಹೆಚ್ಚುವರಿಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಡಾ. ಎಂ.ಸಿ. ರವಿ, ವೈದ್ಯಕೀಯ ವಿಜ್ಞಾನಸಂಸ್ಥೆಯ ಡೀನ್ ಡಾ. ಸಂಜೀವ್, ಜಿಲ್ಲಾಸರ್ಜನ್ ಡಾ.ಶ್ರೀನಿವಾಸ್, ಡಾ. ಮಹೇಶ್,ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್ಸಿ 671 ರ್ಯಾಂಕ್
ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್
Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ