ವಿಧಾನಸಭೆ ಚುನಾವಣೆಗೆ ಸಿದ್ಧತೆ
Team Udayavani, Feb 8, 2018, 2:58 PM IST
ಕೊಳ್ಳೇಗಾಲ: ಮುಂಬರುವ ವಿಧಾನಸಭಾ ಚುನಾವಣೆ ಯಶಸ್ವಿಗೊಳಿಸಲು ನಿಯೋಜಿತ ಅಧಿಕಾರಿಗಳು ಸಂಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಫೌಜಿಯಾ ತರನ್ನುಂ ಮನವಿ ಮಾಡಿದರು.
ನಗರದ ಉಪವಿಭಾಗ ಕಚೇರಿಯ ಸಭಾಂಗಣದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗಾಗಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ ಮತ್ತು ಮತದಾನ ನಡೆಯುವಂತಹ ಸಂದರ್ಭದಲ್ಲಿ ಪೂರ್ವಭಾವಿ ಸಭೆಯಲ್ಲಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರತಿಯೊಬ್ಬರು ಚುನಾವಣಾ ಸಂದರ್ಭದಲ್ಲಿ ಕಡ್ಡಾಯವಾಗಿ ಭಾಗವಹಿಸಿ ಚುನಾವಣೆ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಚುನಾವಣಾ ಆಯೋಗ ನೀಡುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ನಿಯಮ ಉಲ್ಲಂಘನೆ ಮಾಡಬಾರದು, ಚುನಾವಣಾ ಸಂದರ್ಭದಲ್ಲಿ ಅಧಿಕಾರಿಗಳು ರಜೆ ಹಾಕಬಾರದು, ಇನ್ನಿತರ ಕುಂಟುನೆಪ ಹೇಳಿ ಚುನಾವಣೆ ಪ್ರಕ್ರಿಯೆಯಿಂದ ದೂರ ಉಳಿಯಬಾರದು ಎಂದು ಹೇಳಿದರು.
ಚುನಾವಣೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತಗಟ್ಟೆ ಮತ್ತು ಮತದಾನಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪಡೆದು, ಆಧಾರದಂತೆ ಕರ್ತವ್ಯ ನಿರ್ವಹಿಸಬೇಕು ಎಂದರು. ತಮ್ಮ ಯಾವುದೇ ಮಾಹಿತಿ ಬೇಕಿದ್ದರೆ, ಸಮಸ್ಯೆಗಳಾದ ಸಂದರ್ಭದಲ್ಲಿ ಕೂಡಲೇ ಸಂಬಂಧಿಸಿದ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ, ಸೂಕ್ತ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು. ಸಭೆಯಲ್ಲಿ ಯಳಂದೂರು ತಹಶೀಲ್ದಾರ್ ಚಂದ್ರಮೌಳಿ, ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ