ಇಂದು ಚಾಮರಾಜನಗರಕ್ಕೆ ರಾಷ್ಟ್ರಪತಿ ಭೇಟಿ

450 ಹಾಸಿಗೆಗಳ ಸಿಮ್ಸ್‌ ಬೋಧನಾ ಆಸ್ಪತ್ರೆ ಉದ್ಘಾಟನೆ | ಬಿಳಿಗಿರಿರಂಗನ ದರ್ಶನ ಬಳಿಕ ಆಸ್ಪತ್ರೆಗೆ ಆಗಮನ

Team Udayavani, Oct 7, 2021, 4:30 PM IST

PRESIDENT visited hospital

ಚಾಮರಾಜನಗರ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಗುರುವಾರ ನಗರ ಹಾಗೂ ಜಿಲ್ಲೆಯ ಬಿಳಿಗಿರಿರಂಗನಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಗುರುವಾರ ಮಧ್ಯಾಹ್ನ 12ಕ್ಕೆ ಬಿಳಿಗಿರಿರಂಗನಬೆಟ್ಟಕ್ಕೆ ಖಾಸಗಿ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ ಮಧ್ಯಾಹ್ನ3.30ಕ್ಕೆ ಚಾಮರಾಜನಗರದಲ್ಲಿ ವೈದ್ಯಕೀಯ ಕಾಲೇಜು ಬೋಧನಾ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಸಂಜೆ 4.50ಕ್ಕೆ ಮಂಗಳೂರಿಗೆ ತೆರಳಲಿದ್ದಾರೆ.

ನಗರದ ಹೊರವಲಯದ ಯಡಪುರದಲ್ಲಿ ನಿರ್ಮಾಣ ಮಾಡಲಾಗಿರುವ 450 ಹಾಸಿಗೆಗಳ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ (ಸಿಐಎಂಎಸ್‌) ಬೋಧನಾ ಆಸ್ಪತ್ರೆಯನ್ನು ಮಧ್ಯಾಹ್ನ3.30 ಕ್ಕೆ ಉದ್ಘಾಟಿಸುವರು. ರಾಜ್ಯಪಾಲರಾದ ತಾವರಚಂದ್‌ ಗೆಹ್ಲೋಥ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅತ್ಯಾಧುನಿಕ ವೈದ್ಯಕೀಯ ಸೇವೆಗಳನ್ನು ಜನರಿಗೆ ಶೀಘ್ರವಾಗಿ ತಲುಪಿಸುವ ಗುರಿ ಹೊಂದಿದೆ ಮತ್ತು ಇದು ಜಿಲ್ಲೆಯ ಏಕೈಕ ತೃತೀಯ ಹಂತದ ಆರೋಗ್ಯ ವ್ಯವಸ್ಥೆ ಹೊಂದಿರುವ ಕೇಂದ್ರವಾಗಿದೆ. ಆರೋಗ್ಯ ರಕ್ಷಣೆ ವಿತರಣಾ ವ್ಯವಸ್ಥೆಯು ಜಿಲ್ಲೆಯ ಎಲ್ಲರಿಗೂ ಕೈಗೆಟುಕುವಂತೆ ಹೊಸ ಬೋಧನಾ ಆಸ್ಪತ್ರೆಯು ಮಾಡಲಿದೆ.

ಇದನ್ನೂ ಓದಿ;- ಮಸೀದಿಗಳ ಅಕ್ರಮ ಮೈಕ್ ಗಳನ್ನು ತೆರವುಗೊಳಿಸಿ: ಪ್ರಮೋದ್ ಮುತಾಲಿಕ್ ಆಗ್ರಹ

ಗಡಿ ಜಿಲ್ಲೆಯಾ ದ್ದರಿಂದ ನೆರೆ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳದ ಜನರೂ ಸಹ ಈ ವೈದ್ಯಕೀಯ ಸೇವೆ ಪಡೆದುಕೊಳ್ಳಬಹುದು ಎಂದು ಎಂದು ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್‌ ಮತ್ತು ನಿರ್ದೇಶಕ ಡಾ. ಜಿ.ಎಂ. ಸಂಜೀವ್‌ ತಿಳಿಸಿದ್ದಾರೆ.

166 ಕೋಟಿ ರೂ. ವೆಚ್ಚದ ಸಿಮ್ಸ್ ಬೋಧನಾ ಆಸ್ಪತ್ರೆ

ಭಾರತೀಯ ವೈದ್ಯಕೀಯ ಮಂಡಳಿಯ ಮಾರ್ಗಸೂಚಿಗಳ ಅನ್ವಯ ರಾಜ್ಯ ಸರ್ಕಾರವು 2018-19ನೇ ಸಾಲಿನಲ್ಲಿ 450 ಹಾಸಿಗೆಗಳ ಹೊಸ ಆಸ್ಪತ್ರೆಯನ್ನು ನಿರ್ಮಿಸಲು ಅನುಮೋದನೆ ನೀಡಿತ್ತು. 450 ಹಾಸಿಗೆಗಳ ಬಹುಮಹಡಿ (ನೆಲ+ನಾಲ್ಕು), ಸಿಮ್ಸ್‌ ಬೋಧನಾ ಆಸ್ಪತ್ರೆ 30,728 ಚ.ಮಿ. ವಿಸ್ತೀರ್ಣ ಹೊಂದಿದ್ದು, ಇದನ್ನು 166.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಈ ಹೊಸ ಬೋಧನಾ ಆಸ್ಪತ್ರೆಯಲ್ಲಿ ಒಂಬತ್ತು ಆಧುನಿಕ ಆಪರೇಷನ್‌ ಥಿಯೇಟರ್‌ಗಳು, ಸುಸಜ್ಜಿತ 50 ಹಾಸಿಗೆ ಐಸಿಯು ವಾರ್ಡ್‌ಗಳು, 20 ಕೆಎಲ್‌ ದ್ರವ ಆಮ್ಲಜನಕ ಸಂಗ್ರಹ ಟ್ಯಾಂಕ್‌, 2,000 ಎಲ್‌ಪಿಎಂ ಸಾಮರ್ಥ್ಯದ ಆಮ್ಲಜನಕ ಜನರೇಟರ್‌ಗಳು, ಕೇಂದ್ರಿತ ವೈದ್ಯಕೀಯ ಗ್ಯಾಸ್‌ ಪೈಪ್‌ಲೈನ್‌ ವ್ಯವಸ್ಥೆ, ಹೊರರೋಗಿಗಳು(ಒಪಿಡಿ) ಮತ್ತು ಒಳರೋಗಿಗಳು (ಐಪಿಡಿ) ವಿಭಾಗಗಳಲ್ಲದೆ 30 ಹಾಸಿಗೆಗಳ ತುರ್ತು ವಿಭಾಗ ಕೂಡ ಇವೆ

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.