ಪ್ರಧಾನಿ ಮೋದಿಯನ್ನು ತಿರಸ್ಕರಿಸಿ
Team Udayavani, Apr 15, 2019, 3:00 AM IST
ಗುಂಡ್ಲುಪೇಟೆ: ದೇಶದ ಪ್ರಧಾನಿ ಸ್ಥಾನದಲ್ಲಿರುವ ನರೇಂದ್ರ ಮೋದಿ ಸುಳ್ಳುಗಾರ, ಅಂತಹವರನ್ನು ಚುನಾವಣೆಯಲ್ಲಿ ತಿರಸ್ಕರಿಸಿ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಲೋಕಸಭಾ ಚುನಾವಣೆ ಸಭೆಯಲ್ಲಿ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಅಭ್ಯರ್ಥಿ ಆರ್. ಧ್ರುವನಾರಾಯಣ ಪರ ಮತಯಾಚಿಸಿದ ಅವರು ಮಾತನಾಡಿದರು.
ದೇಶದ ಜನರಿಗೆ ಕಳೆದ 5 ವರ್ಷಗಳಿಂದಲೂ ಭರವಸೆ ನೀಡುತ್ತಲೇ ಅಧಿಕಾರ ನಡೆಸಿಕೊಂಡು ಬಂದಿದ್ದಾರೆ. ಈವೆರೆಗೂ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಅಲ್ಲದೇ ಬಡವರ ಪರವಾಗಿ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಕ್ಷೇತ್ರದ ಅಭ್ಯರ್ಥಿ ಆರ್.ಧ್ರುವನಾರಾಯಣ ಪರ ಈ ಭಾಗದಲ್ಲಿ ಅಲೆ ಇದೆ. ಹಲವು ಅಭಿವೃದ್ಧಿ ಕೆಲಸಗಳನ್ನು ಅವರು ಮಾಡಿದ್ದಾರೆ. ಈ ಜಿಲ್ಲೆ ತುಂಬಾ ಹಿಂದುಳಿದಿತ್ತು. ಅದನ್ನು ಅವರು ಸಂಸದರಾದ 10 ವರ್ಷಗಳಲ್ಲಿ ಅಭಿವೃದ್ಧಿ ಪಥದತ್ತ ಮುನ್ನಡೆಸಿದ್ದಾರೆ. ಇನ್ನೂ ಹೆಚ್ಚಿನ ಯೋಜನೆಗಳನ್ನು ಅವರ ಅಧಿಕಾರವಧಿಯಲ್ಲಿ ತಂದು ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ.
ತಾಲೂಕಿಗೆ ಎಚ್.ಎಸ್.ಮಹದೇವಪ್ರಸಾದ್ ಜೊತೆಗೂಡಿ ಅವರ ಅಧಿಕಾರವಧಿಯಲ್ಲಿ ಹಲವು ಸಮುದಾಯ ಭವನಗಳು, ರಸ್ತೆ ನಿರ್ಮಾಣ ಮಾಡುವಲ್ಲಿ ಶ್ರಮಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗಾಗಿ ದುಡಿದಿದ್ದಾರೆ. ಧ್ರುವನಾರಾಯಣರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಮುಖಂಡ ಹಂಗಳ ನಂಜಪ್ಪ, ಗಣೇಶ್ ಪ್ರಸಾದ್, ನಂಜುಂಡಪ್ರಸಾದ್, ಮುನಿರಾಜು, ನಾಜಿಮುದ್ದಿನ್, ಗೋವಿಂದರಾಜು, ರಾಮು ಹಾಗೂ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್