ಬೆಟ್ಟಳ್ಳಿ ಮಾರಮ್ಮ ಜಾತ್ರೆಯಲ್ಲಿ ಸೌಲಭ್ಯಕ್ಕೆ ಆದ್ಯತೆ ನೀಡಿ


Team Udayavani, Mar 7, 2020, 3:00 AM IST

bettalli-maramma

ಹನೂರು: ಪಟ್ಟಣದ ಅಧಿದೇವತೆ ಬೆಟ್ಟಳ್ಳಿ ಮಾರಮ್ಮ ಜಾತ್ರೆಯಲ್ಲಿ ಭಕ್ತಾದಿಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಜನರ ಸಮಸ್ಯೆ ಆಲಿಸಲು ಪಟ್ಟಣ ಪಂಚಾಯ್ತಿಯಿಂದ ನಿಯಂತ್ರಣ ಕೊಠಡಿ ತೆರೆಯಲಾಗುತ್ತಿದೆ ಎಂದು ಮುಖ್ಯಾಧಿಕಾರಿ ಎನ್‌.ಮೂರ್ತಿ ತಿಳಿಸಿದರು.

ಪಟ್ಟಣದ ಅಧಿದೇವತೆ ಬೆಟ್ಟಳ್ಳಿ ಮಾರಮ್ಮ ಜಾತ್ರೆಯ ಹಿನ್ನೆಲೆಯಲ್ಲಿ ನಡೆದ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವು ಹನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಾರ್ವಜನಿಕರಿಗೆ ಬಹುಮುಖ್ಯವಾಗಿದೆ.

ಈ ಜಾತ್ರಾ ಮಹೋತ್ಸವದಲ್ಲಿ ಪಟ್ಟಣದ 13 ವಾರ್ಡ್‌ಗಳ ಸಾರ್ವಜನಿಕರಿಗೆ ಮತ್ತು ಭಕ್ತಾದಿಗಳಿಗೆ ಯಾವುದೇ ಕುಂದು ಕೊರತೆ ಉಂಟಾಗದ ರೀತಿಯಲ್ಲಿ ಕ್ರಮವಹಿಸಲಾಗುತ್ತಿದೆ. ಅಲ್ಲದೆ, ಪಟ್ಟಣ ವಾಸಿಗಳು ಮತ್ತು ಭಕ್ತಾದಿಗಳ ಕುಂದು ಕೊರತೆ ಮತ್ತು ಸಮಸ್ಯೆಗಳನ್ನು ತಿಳಿದು, ಸಮಸ್ಯೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಿಯಂತ್ರಣ ಕೊಠಡಿಯನ್ನು ತೆರೆಯಲಾಗುತ್ತಿದೆ. ಪಟ್ಟಣ ವಾಸಿಗಳು ಮತ್ತು ಭಕ್ತಾದಿಗಳು ಕುಂದು ಕೊರತೆಗಳು ಇದ್ದಲ್ಲಿ ದೂ.ಸಂ 08224-268111ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.

ಸ್ವಚ್ಛತೆಗೆ ಆದ್ಯತೆ ನೀಡಿ: ಪ.ಪಂ ಸದಸ್ಯರು ಮಾತನಾಡಿ, ಈ ಜಾತ್ರಾ ಮಹೋತ್ಸವವು 4 ದಿನಗಳ ವಿಜೃಂಭಣೆಯಿಂದ ನಡೆಯಲಿದೆ. ಹೀಗಾಗಿ ಪಟ್ಟಣದಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆದೋರದ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಎಲ್ಲಾ ವಾರ್ಡ್‌ಗಳ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಪಟ್ಟಣದ ಬೀದಿ ದೀಪಗಳ ಸಮಗ್ರ ನಿರ್ವಹಣೆ ಮಾಡಬೇಕು. ಕಿರು ನೀರು ಸರಬರಾಜು ಯೋಜನೆಯ ತೊಂಬೆಗಳನ್ನು ಶುಚಿಗೊಳಿಸಿ, ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಹೆಚ್ಚಿನ ಪೌರ ಕಾರ್ಮಿಕರನ್ನು ನಿಯೋಜಿಸಿ: ಜಾತ್ರಾ ಮಹೋತ್ಸವದ ಧಾರ್ಮಿಕ ಪೂಜಾ ಕೈಂಕರ್ಯಗಳಲ್ಲಿ ಸಹಸ್ರಾರು ಜನರು ಭಾಗವಹಿಸುವ ಹಿನ್ನೆಲೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಹೆಚ್ಚಿನ ಪೌರ ಕಾರ್ಮಿಕರನ್ನು ನಿಯೋಜಿಸಿ ಶುಚಿತ್ವ ಕಾಪಾಡಬೇಕು. ಆಂಜನೇಯ ಸ್ವಾಮಿ ದೇವಾಲಯದಿಂದ ದೊಡ್ಡ ಬಾಯಿಬೀಗ ಹಾದುಹೋಗುವ ಹಿನ್ನೆಲೆ ರಸ್ತೆಯ ಇಕ್ಕೆಲಗಳಲ್ಲಿ ಜಂಗಲ್‌ ಕಟಿಂಗ್‌ ಮಾಡಿ ತಾತ್ಕಾಲಿಕ ರಸ್ತೆಯನ್ನು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಪಪಂ ಸದಸ್ಯರಾದ ಹರೀಶ್‌ಕುಮಾರ್‌, ಸಂಪತ್‌ ಕುಮಾರ್‌, ಗಿರೀಶ್‌, ನಾಗರಾಜು, ರೂಪ, ಮುಮ್ತಾಜ್‌ ಭಾನು, ಮಹೇಶ್‌ ನಾಯ್ಕ, ಪವಿತ್ರ, ಮಂಜುಳಾ, ಮಹೇಶ್‌, ಆನಂದ್‌ ಕುಮಾರ್‌, ಪ.ಪಂ ಪ್ರಭಾರ ರಾಜಸ್ವ ನಿರೀಕ್ಷಕ ಮನಿಯಾ, ಆರೋಗ್ಯಾಧಿಕಾರಿ ಮಾದೇಶ ಹಾಜರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.